ಬೀದರ್‌ | ಕಳೆದ ವರ್ಷ ಜಿಲ್ಲೆಯಲ್ಲಿ 1097 ರಸ್ತೆ ಅಪಘಾತ; ಸಾವಿನ ಹಾದಿಗೆ 330 ಮಂದಿ

Date:

ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದೆ. ದಿನನಿತ್ಯ ಒಂದಲ್ಲಾ ಒಂದು ಕಡೆಯಲ್ಲಿ ರಸ್ತೆ ಅಪಘಾತದಿಂದ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಕೆಲವರು ಕೈ, ಕಾಲು ಶಾಶ್ವತವಾಗಿ ಕಳೆದುಕೊಂಡರೆ ಇನ್ನು ಕೆಲವರು ಗಾಯಾಳುಗಳಾಗುತ್ತಿದ್ದಾರೆ.

ಕಳೆದ ವರ್ಷ 2023ರಲ್ಲಿ ರಾಜ್ಯದಲ್ಲಿ ಬರೋಬ್ಬರಿ 43,440 ಅಪಘಾತಗಳಲ್ಲಿ 52,531 ಜನಗಾಯಗೊಂಡಿದ್ದರೇ, 12,327 ಜನ ಸಾವನ್ನಪ್ಪಿದ್ದಾರೆ ಸಂಚಾರ ಮತ್ತು ರಸ್ತೆ ಸುರಕ್ಷತೆಯ ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಮಾಹಿತಿ ತಿಳಿಸಿದ್ದಾರೆ.

“2023ರಲ್ಲಿ ಬೀದರ್‌ ಜಿಲ್ಲೆಯಲ್ಲಿ ಒಟ್ಟು 1097 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಪೈಕಿ 330 ಮಾರಣಾಂತಿಕ ಅಪಘಾತ ಸಂಭವಿಸಿದರೇ, 767 ಮಾರಣಾಂತಿಕವಲ್ಲದ ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಸಂಭವಿಸಿದ 1097 ಅಪಘಾತಗಳಲ್ಲಿ 1404 ಜನಗಾಯಗೊಂಡಿದ್ದರೇ, 335 ಜನ ಸಾವನ್ನಪ್ಪಿದ್ದಾರೆ” ಎಂಬ ಅಂಕಿಅಂಶಗಳ ಮಾಹಿತಿಯ ಕೋಷ್ಠಕವನ್ನು ಅಲೋಕ್ ಕುಮಾರ್ ʼಎಕ್ಷ್‌ʼ ನಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

https://x.com/alokkumar6994/status/1768228972888740312?s=20

ಕಳೆದ ವರ್ಷ ಕರ್ನಾಟಕದಲ್ಲಿ ಪ್ರತಿದಿನ 34 ಜನರು ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಮಾರಣಾಂತಿಕ ಅಪಘಾತಗಳಲ್ಲಿ 5% ಹೆಚ್ಚಳವಾಗಿದೆ. ಅಜಾಗರೂಕ ಚಾಲನೆ, ಕಳಪೆ ಚಾಲನಾ ಕೌಶಲ್ಯ, ಕಳಪೆ ರಸ್ತೆಗಳು, ಪಾದಚಾರಿಗಳಿಗೆ ಅಸಮರ್ಪಕ ಸೌಲಭ್ಯ ಸೇರಿದಂತೆ ಇನ್ನಿತರ ಅಂಶಗಳು ಅಪಘಾತಗಳಿಗೆ ಕಾರಣಗಳಾಗಿವೆ. ಸದ್ಯ ರಸ್ತೆ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಚ್ಚಿಟ್ಟ ಮಾಧ್ಯಮಗಳು ಬಿಚ್ಚಿಟ್ಟ ಸಾಮಾಜಿಕ ಮಾಧ್ಯಮಗಳು

ಸಾರ್ವಜನಿಕರು ತಮ್ಮ ಅಮೂಲ್ಯವಾದ ಜೀವ ರಕ್ಷಣೆಗೆ ದ್ವಿಚಕ್ರ ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಕಡ್ಡಾಯವಾಗಿ ಧರಿಸಬೇಕು ಮತ್ತು ಕಾರು ಚಾಲನೆ ಮಾಡುವಾಗ ಸೀಟ್ ಬೆಲ್ಟ್‌ ಧರಿಸುವುದನ್ನು ಮರೆಯಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್. ಅವರ ನೇತ್ರತ್ವದಲ್ಲಿ ಹೆಲ್ಮೆಟ್ ಜಾಗೃತಿ ಅಭಿಯಾನ ನಡೆಸುತ್ತಿದ್ದರೂ ವಾಹನ ಸವಾರರು ಕಿವಿಗೊಡದೆ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವುದು ಹೆಚ್ಚಿನ ಅಪಘಾತಗಳಿಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...