ದೇಶದ ಹಲವೆಡೆಗೆ ಕೊತ್ತಂಬರಿ ಸಾಗಾಟ ಹೆಚ್ಚಳ: ಕೆಐಎಬಿ ಕಾರ್ಗೋ ಸಾಮರ್ಥ್ಯ ಹೆಚ್ಚಿಸುವ ನಿರೀಕ್ಷೆ!

Date:

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎಬಿ)ದಿಂದ ದೇಶದ ಹಲವು ಭಾಗಗಳಿಗೆ ಕೊತ್ತಂಬರಿ ಸಾಗಾಟದ ಪ್ರಮಾಣ ಹೆಚ್ಚಾಗಿದ್ದು, ಇದೇ ಜೂನ್‌ನಿಂದ ನವೆಂಬರ್‌ವರೆಗೆ ಒಟ್ಟು 5,904 ಮೆಟ್ರಿಕ್‌ ಟನ್‌ ಕೊತ್ತಂಬರಿ ಸೊಪ್ಪನ್ನು ದೇಶದ ಬೇರೆ ಬೇರೆ ನಗರಗಳಿಗೆ ಸಾಗಿಸಲಾಗಿದೆ.

ಕಳೆದ ವರ್ಷಕ್ಕೆ ಹೊಲಿಸಿದರೆ ಈ ವರ್ಷ ಕೊತ್ತಂಬರಿ ಸಾಗಣೆ ಶೇ.13ರಷ್ಟು ಹೆಚ್ಚಾಗಿದೆ. ಇದು ದೇಶೀಯ ಮಾರುಕಟ್ಟೆಯಲ್ಲಿ ಕೊತ್ತಂಬರಿ ಬೇಡಿಕೆ ಹೆಚ್ಚಾಗಿರುವುದನ್ನು ಸ್ಪಷ್ಟಪಡಿಸುತ್ತದೆ. ಈ ಮೂಲಕ ‌ಕೊತ್ತಂಬರಿ ಸೊಪ್ಪಿನಂತಹ ತಾಜಾ ಕೃಷಿ ಉತ್ಪನ್ನಗಳನ್ನು ದೇಶದ ವಿವಿಧ ಭಾಗಗಳಿಗೆ ತಲುಪಿಸುವಲ್ಲಿ ಪ್ರಮುಖ ಕೇಂದ್ರವಾಗಿ ಬೆಂಗಳೂರು ರೂಪುಗೊಳ್ಳುತ್ತಿದೆ.

ಐದು ತಿಂಗಳಲ್ಲಿ ರಾಜ್ಯದ ಕೊತ್ತಂಬರಿ ಸೊಪ್ಪನ್ನು ದೇಶದ 22 ನಗರಗಳಿಗೆ ಸರಬರಾಜು ಮಾಡಲಾಗಿದೆ. ಕೋಲ್ಕತ್ತ, ದೆಹಲಿ, ರಾಂಚಿ ಮತ್ತು ಪಟ್ನಾ ಕಡೆಗೆ ಹೆಚ್ಚು ಸಾಗಾಟ ನಡೆದಿದ್ದು, ಲಖನೌ, ವಾರಣಾಸಿ ಹಾಗೂ ಜೈಪುರ ಕಡೆಗೂ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಕೊತ್ತಂಬರಿ ಕಳುಹಿಸಲಾಗಿದೆ. ಇದಕ್ಕೂ ಹೆಚ್ಚಾಗಿ ಅಗರ್ತಲಾ, ಆಗ್ರಾ, ನಾಗಪುರ, ಅಮೃತಸರ ಮತ್ತು ಪೋರ್ಟ್‌ ಬ್ಲೇರ್‌ಗೆ ಮೊದಲ ಬಾರಿಗೆ ಕೊತ್ತಂಬರಿ ಸಾಗಣೆ ಆರಂಭಿಸಲಾಗಿದೆ. ಇದರಿಂದ ತಾಜಾ ಸೊಪ್ಪು ರಫ್ತು ಮಾಡಲು ರೈತರು ಮತ್ತು ವ್ಯಾಪಾರಿಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಯಾದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊತ್ತಂಬರಿ ಸೊಪ್ಪು ಬೇಗ ಹಾಳಾಗುವ ಬೆಳೆ. ರಸ್ತೆ ಮಾರ್ಗದಲ್ಲಿ ದೂರದ ಮಾರುಕಟ್ಟೆಗೆ ಕಳುಹಿಸಿದರೆ ಗುಣಮಟ್ಟ ಕುಸಿಯುವ ಸಾಧ್ಯತೆ ಹೆಚ್ಚು. ಆದರೆ ವಿಮಾನ ಮಾರ್ಗದ ಮೂಲಕ ಕಡಿಮೆ ಸಮಯದಲ್ಲಿ ಉತ್ಪನ್ನ ತಲುಪುವುದರಿಂದ ತಾಜಾತನ ಉಳಿಯುತ್ತದೆ. ಇದರಿಂದ ರೈತರಿಗೆ ಉತ್ತಮ ಬೆಲೆ ಸಿಗುವ ಸಾಧ್ಯತೆ ಹೆಚ್ಚಾಗಿದೆ.

“ರೈತರು ಗುಂಪಾಗಿ ಅಥವಾ ಎಫ್‌ಪಿಒಗಳ ಮೂಲಕ ಕೊತ್ತಂಬರಿ ಸಂಗ್ರಹಿಸಿ, ವಿಂಗಡಣೆ ಮಾಡಿ, ಬೆಂಗಳೂರು ಮೂಲಕ ನೇರವಾಗಿ ಬೇರೆ ರಾಜ್ಯಗಳ ಮಾರುಕಟ್ಟೆಗಳಿಗೆ ಕಳುಹಿಸಿದರೆ ಲಾಭ ಹೆಚ್ಚಿಸಿಕೊಳ್ಳಬಹುದು. ಮುಂದಿನ ದಿನಗಳಲ್ಲಿ ಕೊತ್ತಂಬರಿಯ ಜತೆಗೆ ಇತರೆ ತರಕಾರಿಗಳಿಗೂ ಇದೇ ಮಾದರಿಯ ಅವಕಾಶ ಹೆಚ್ಚಾಗುವ ಸಾಧ್ಯತೆ ಇದೆ” ಎಂಬುದು ಕೃಷಿ ತಜ್ಞರ ಅಭಿಪ್ರಾಯವಾಗಿದೆ.

ಕೆಂಪೇಗೌಡ ವಿಮಾನ ನಿಲ್ದಾಣದ ಮೂಲಕ ನಡೆಯುತ್ತಿರುವ ಈ ಸಾಗಣೆ ರಾಜ್ಯದ ರೈತರಿಗೆ ದೇಶದ ದೊಡ್ಡ ಮಾರುಕಟ್ಟೆ ಅವಕಾಶಗಳನ್ನುನ ತೆರೆದಿಡುವ ನಿರೀಕ್ಷೆ ಇದೆ ಎಂದು ವಿಮಾನ ನಿಲ್ದಾಣದ ಮೂಲಗಳಿಂದ ತಿಳಿದುಬಂದಿದೆ.

ಇದನ್ನೂ ಓದಿದ್ದೀರಾ? 2025ರ ಹಿನ್ನೋಟ | ಕೃಷಿ ಬದುಕಿನ ಕಠೋರತೆ: ಮುಗಿಯದ ರೈತರ ಸಂಕಷ್ಟ

ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.13ರಷ್ಟು ಹೆಚ್ಚಳವಾಗಿರುವ ಈ ಪ್ರಮಾಣ, ದೇಶೀಯ ಕೃಷಿ ವ್ಯಾಪಾರದಲ್ಲಿ ಬೆಂಗಳೂರಿನ ಪ್ರಮುಖ ಕೇಂದ್ರೀಕೃತ ಮತ್ತು ವಿತರಣಾ ಕೇಂದ್ರವಾಗಿ ಹೊರಹೊಮ್ಮುವುದನ್ನು ಎತ್ತಿ ತೋರಿಸುತ್ತದೆ.

ಕೊಳೆಯುವ ಪದಾರ್ಥಗಳ ಸಾಗಣೆಯಲ್ಲಿ ಸತತವಾಗಿ ಭಾರತದ ನಂ.1 ವಿಮಾನ ನಿಲ್ದಾಣವಾಗಿರುವ ಕೆಂಪೇಗೌಡ ವಿಮಾನ ನಿಲ್ದಾಣ, ಕೊತ್ತಂಬರಿ ಸೊಪ್ಪಿನಂತಹ ಸಮಯ ಸಂವೇದಿ ಕೃಷಿ ಉತ್ಪನ್ನಗಳ ವೇಗವಾದ ಮತ್ತು ಸುರಕ್ಷಿತ ಸಾಗಣೆಯ ಮೂಲಕ ರೈತರಿಗೆ ಹೆಚ್ಚಿನ ಮಾರುಕಟ್ಟೆ ಅವಕಾಶಗಳನ್ನು ಒದಗಿಸುತ್ತಿದೆ. ಇದು ಕರ್ನಾಟಕದ ಕೃಷಿ ಆರ್ಥಿಕತೆಯನ್ನು ಬಲಪಡಿಸುವುದರ ಜತೆಗೆ ದೇಶಾದ್ಯಂತ ತಾಜಾ ತರಕಾರಿಗಳ ಲಭ್ಯತೆಯನ್ನು ಹೆಚ್ಚಿಸುತ್ತದೆ. ಭವಿಷ್ಯದಲ್ಲಿ ಇಂತಹ ಸಾಗಣೆಯು ಮತ್ತಷ್ಟು ವೃದ್ಧಿಯಾಗಿ, ವಿಮಾನ ನಿಲ್ದಾಣದ ಕಾರ್ಗೋ ಸಾಮರ್ಥ್ಯವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...