ಬೆಂಗಳೂರು | 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ: ಇಬ್ಬರು ವಿದೇಶಿಗರು ಸೇರಿ 7 ಮಂದಿ ಬಂಧನ

Date:

ಇಬ್ಬರು ವಿದೇಶಿ ಪ್ರಜೆಗಳ ಸಹಿತ 7 ಜನ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಬರೋಬ್ಬರಿ 9.93 ಕೋಟಿ ರೂ. ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಜಪ್ತಿ ಮಾಡಿರುವುದಾಗಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಬಂಧಿತ ಆರೋಪಿಗಳಿಂದ ಒಟ್ಟು 3 ಕೆ.ಜಿ. 858 ಗ್ರಾಂ ಎಂಡಿಎಂಎ ಕ್ರಿಸ್ಟೆಲ್, 41 ಗ್ರಾಂ ಎಕ್ಸ್‌ ಟಸಿ ಪಿಲ್ಸ್, 1 ಕೆ.ಜಿ. 82 ಗ್ರಾಂ ಹೈಡ್ರೋಗಾಂಜಾ, 6 ಕೆ.ಜಿ. ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ 1 ಕಾರು ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ವಿವರಿದ್ದಾರೆ.

ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾದಕ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದ ಸಾಫ್ಟ್‌ ವೇರ್ ಉದ್ಯೋಗಿ ಕೆವಿನ್ ರೋಜರ್ ಎಂಬುವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೋಜು-ಮಸ್ತಿಯ ಜೀವನ ನಡೆಸಲು ಹಾಗೂ ಅಧಿಕ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕೇರಳದಿಂದ ಕಡಿಮೆ ಬೆಲೆಗೆ ಹೈಡ್ರೋಗಾಂಜಾ ತಂದು ಬೆಂಗಳೂರಿನಲ್ಲಿ ಪರಿಚಯದ ಗಿರಾಕಿಗಳಿಗೆ ಕೆವಿನ್ ರೋಜರ್ ಮಾರಾಟ ಮಾಡುತ್ತಿದ್ದ. ಆತನಿಂದ 500 ಗ್ರಾಂ ಹೈಡ್ರೋಗಾಂಜಾ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಒಂದು ಕಾರು, ಒಂದು ಬೈಕ್ ಹಾಗೂ ಒಂದು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಲದೆ, ಮಾದಕ ಪದಾರ್ಥಗಳ ಮಾರಾಟದಲ್ಲಿ ತೊಡಗಿದ್ದ ಡೆಂಟಲ್ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಆ್ಯಂಟೋನಿ ಬಂಧಿತ ಆರೋಪಿ. ಈತನೂ ಸಹ ಮೋಜಿನ ಜೀವನ ನಡೆಸಲು ಹಾಗೂ ಅಧಿಕ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಕಡಿಮೆ ಬೆಲೆಗೆ ಹೈಡ್ರೋಗಾಂಜಾ ತಂದು ಪರಿಚಯದ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ. ಆರೋಪಿಯಿಂದ 300 ಗ್ರಾಂ ಹೈಡ್ರೋಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

ಇನ್ನು, ವಿದೇಶಿ ಅಂಚೆ ಕಚೇರಿಗೆ ಪಾರ್ಸಲ್ ಮೂಲಕ ಬಂದಿದ್ದ 1 ಕೋಟಿ ರೂ. ಮೌಲ್ಯದ ಮಾದಕ ಪದಾರ್ಥಗಳನ್ನು ಕೆ.ಜಿ.ನಗರ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. 1 ಕೆ.ಜಿ. 22 ಗ್ರಾಂ ಹೈಡ್ರೋ ಗಾಂಜಾ ಹಾಗೂ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಪಾರ್ಸಲ್ ಬುಕ್ ಮಾಡಿದ್ದ ಆರೋಪಿಯ ವಿರುದ್ಧ ಕೆ.ಜಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಹೆಬ್ಬಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ ಎನ್‍ಗ್ವು ಕಿಂಗ್‍ಸ್ಲೆ ಹಾಗೂ ಥಾಮಸ್ ನವೀದ್ ಚಿಮೆ ಬಂಧಿತ ಆರೋಪಿಗಳು. ದೆಹಲಿಯಲ್ಲಿ ನೆಲೆಸಿರುವ ಇತರ ವಿದೇಶಿ ಪ್ರಜೆಗಳಿಂದ ಮಾದಕ ಪದಾರ್ಥಗಳನ್ನು ಖರೀದಿಸಿ ತರುತ್ತಿದ್ದ ಆರೋಪಿಗಳು, ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು.

ಆರೋಪಿಗಳ ಪೈಕಿ ಓರ್ವ ಆನ್‍ಲೈನ್ ವಂಚನೆ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದು, ಗುಜರಾತ್‍ನ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 2 ಪ್ರಕರಣಗಳು ದಾಖಲಾಗಿದ್ದವು. ನ್ಯಾಯಾಲಯದಿಂದ ಜಾಮೀನು ಪಡೆದು ತಲೆಮರೆಸಿಕೊಂಡಿದ್ದ ಆರೋಪಿ 2 ತಿಂಗಳ ಹಿಂದೆ ಬೆಂಗಳೂರಿಗೆ ಬಂದು ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿಕೊಂಡಿದ್ದ ಎಂದು ಸೀಮಂತ್ ಕುಮಾರ್ ಸಿಂಗ್ ವಿವರಿಸಿದ್ದಾರೆ.

ಒಟ್ಟಾರೆ ಇಬ್ಬರು ವಿದೇಶಿಗರ ಸಹಿತ 7 ಮಂದಿಯನ್ನು ಬಂಧಿಸಲಾಗಿದ್ದು, 9.93 ಕೋಟಿ ರೂ. ಮೌಲ್ಯದ ವಿವಿಧ ಮಾದಕ ಪದಾರ್ಥಗಳನ್ನು ಜಪ್ತಿ ಮಾಡಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...