ಕರ್ನಾಟಕದಲ್ಲಿ ಪ್ರತಿ ವರ್ಷ ಶೇ.1ರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚಳ

Date:

ಕರ್ನಾಟಕದಲ್ಲಿ ಪ್ರತಿ ವರ್ಷ ಶೇಕಡಾ 1ರಷ್ಟು ಕ್ಯಾನ್ಸರ್ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರು ಹೆಚ್ಚಾಗಿ ಈ ರೋಗಕ್ಕೆ ತುತ್ತಾಗುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. ಮಹಿಳೆಯರಲ್ಲಿ ಹೆಚ್ಚಾಗಿ ಸ್ತನ ಕ್ಯಾನ್ಸರ್ ಪ್ರಕರಣಗಳು ಕಂಡು ಬರುತ್ತಿವೆ. ಅಲ್ಲದೆ, ಗರ್ಭಕಂಠದ ಕ್ಯಾನ್ಸರ್ ಮತ್ತು ಅಂಡಾಶಯದ ಕ್ಯಾನ್ಸರ್‌ಗಳು ಕಂಡು ಬರುತ್ತಿವೆ ಎಂದು ವರದಿಯಾಗಿದೆ.

ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೊಲಾಜಿಯ (ಕೆಎಂಐಒ) ವೈದ್ಯಕೀಯ ಆಂಕೊಲಾಜಿಸ್ಟ್ ಡಾ.ಸುರೇಶ್ ಬಾಬು ಮಾತನಾಡಿ, “ಈ ಹಿಂದೆ, ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ಪ್ರಕರಣಗಳು ಅತಿ ಹೆಚ್ಚು ಸಂಭವಿಸುತ್ತಿದ್ದವು. ಆದರೆ, ಈಗ ಸುಧಾರಿತ ಸ್ಕ್ರೀನಿಂಗ್‌ನಿಂದಾಗಿ ಗರ್ಭಕಂಠ ಕ್ಯಾನ್ಸರ್‌ಗಳಲ್ಲಿ ಇಳಿಮುಖ ಕಂಡಿದೆ. ಕಳೆದ ಕೆಲವು ವರ್ಷಗಳಿಂದ ಬದಲಾಗುತ್ತಿರುವ ಜೀವನಶೈಲಿಯಿಂದ ಸ್ತನ ಕ್ಯಾನ್ಸರ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿವೆ” ಎಂದಿದ್ದಾರೆ.

“ಸ್ತನ ಕ್ಯಾನ್ಸರ್ ತಪಾಸಣೆಯು ನಗರ ಪ್ರದೇಶಗಳಲ್ಲಿ ಸುಧಾರಿಸಿದರೂ, ಗ್ರಾಮೀಣ ಮಹಿಳೆಯರಲ್ಲಿ ಇನ್ನೂ ಜಾಗೃತಿ ಮೂಡಿಸುವ ಅಗತ್ಯವಿದೆ. ಕರ್ನಾಟಕದ ಗ್ರಾಮೀಣ ಭಾಗಗಳಲ್ಲಿನ ಮಹಿಳೆಯರು ಸ್ತನದಲ್ಲಿ ಉಂಡೆಯಾಕಾರ ಗಡ್ಡೆ ಇದ್ದರೂ ತಪಾಸಣೆ ಮಾಡುವುದನ್ನು ತಪ್ಪಿಸುತ್ತಾರೆ. ತಪಾಸಣೆ ಮಾಡುವುದನ್ನು ತಪ್ಪಿಸುವುದರಿಂದ ರೋಗ ಹರಡಲು ಕಾರಣವಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ತನ ಕ್ಯಾನ್ಸರ್‌ ಹೊಂದಿರುವ ಗ್ರಾಮೀಣ ಮಹಿಳೆಯರು ನಿಯಮಿತವಾಗಿ ತಪಾಸಣೆಗೆ ಒಳಪಡುವುದನ್ನು ಮೀರಿ ಅಲ್ಟ್ರಾಸೌಂಡ್ ಮತ್ತು ಮ್ಯಾಮೊಗ್ರಫಿ ಪರೀಕ್ಷೆಗಳಂತಹ ಸೌಲಭ್ಯಗಳನ್ನು ಪಡೆಯಲು ಸಾಧ್ಯವಿಲ್ಲ. ಏಕೆಂದರೆ, ಈ ಪರೀಕ್ಷೆಗಳು ಮೆಟಾಸ್ಟಾಟಿಕ್ ಹಂತದಲ್ಲಿ ರೋಗನಿರ್ಣಯ ಮಾಡಲು ಆರ್ಥಿಕ ಹೊರೆಯನ್ನು ಹೆಚ್ಚಿಸುತ್ತದೆ” ಎಂದು ಡಾ ಬಾಬು ವಿವರಿಸಿದರು.

“ಮತ್ತೊಂದು ಅಂಶವೆಂದರೆ, ಮಹಿಳೆಯರ ಸ್ತನಗಳಲ್ಲಿ ಉದ್ಭವಾಗಿರುವ ಉಂಡೆಯಾಕಾರದ ಗಡ್ಡೆಗಳು ನೋವುರಹಿತವಾಗಿರುತ್ತವೆ. ಇದರಿಂದ ಮಹಿಳೆಯರು ಪರೀಕ್ಷೆ ಮಾಡಿಸಲು ಹಿಂದೇಟು ಹಾಕುತ್ತಾರೆ. ಅಕ್ಟೋಬರ್ ಅನ್ನು ಸ್ತನ ಕ್ಯಾನ್ಸರ್ ಜಾಗೃತಿ ತಿಂಗಳಾಗಿ ಆಚರಿಸಲಾಗುತ್ತದೆ” ಎಂದರು.

ಮಣಿಪಾಲ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಆಂಕೊಲಾಜಿ ಮತ್ತು ರೊಬೊಟಿಕ್ ಸರ್ಜರಿ ವಿಭಾಗದ ಮುಖ್ಯಸ್ಥರು ಮತ್ತು ಸಲಹೆಗಾರರಾದ ಡಾ ಶಬ್ಬರ್ ಜವೇರಿ ಅವರು ಚಿಕ್ಕ ವಯಸ್ಸಿನ ಮಹಿಳೆಯರಲ್ಲಿ ಹೆಚ್ಚು ಸ್ತನ ಕ್ಯಾನ್ಸರ್ ಪ್ರಕರಣಗಳು ಕಂಡುಬರುತ್ತಿವೆ ಎಂದು ಹೇಳಿದರು.

ಹಿಂದೆ, 50-60ರ ವಯಸ್ಸಿನ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ರೋಗ ಕಂಡುಬರುತ್ತಿತ್ತು. ಆದರೆ, ಈಗ 30ರ ಹರೆಯದ ಮಹಿಳೆಯರಲ್ಲಿ ಸಹ ರೋಗ ಕಂಡು ಬರುತ್ತಿದೆ.ಇದಕ್ಕೆ ಜೀವನಶೈಲಿಯಲ್ಲಿನ ಬದಲಾವಣೆಗಳು, ತಡವಾಗಿ ಮದುವೆಯಾಗುವುದು, ಕಡಿಮೆ ಹಾಲುಣಿಸುವ ಅವಧಿ ಅಥವಾ ಕೆಲಸ-ಸಂಬಂಧಿತ ಒತ್ತಡವು ಕಾರಣವೆಂದು ಹೇಳಲಾಗುತ್ತದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು – ಹೊಸ ಭುವನೇಶ್ವರ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧಾರ

ಕೆಎಮ್‌ಐಒ ಸೆಪ್ಟೆಂಬರ್ 2023 ರಲ್ಲಿ ಬಿಡುಗಡೆ ಮಾಡಿದ ವರದಿಯು, “ರಾಜ್ಯದಲ್ಲಿ 87,000 ಹೊಸ ಕ್ಯಾನ್ಸರ್ ಪ್ರಕರಣಗಳನ್ನು ಅಂದಾಜಿಸಲಾಗಿದೆ. ಭಾರತದಲ್ಲಿ 37.5 ಲಕ್ಷಕ್ಕೂ ಹೆಚ್ಚು ಪ್ರಕರಣಗಳಿದ್ದು, ಅದರಲ್ಲಿ 2.3 ಲಕ್ಷ ಪ್ರಕರಣಗಳು ಕರ್ನಾಟಕದಿಂದ ಬಂದಿವೆ. ಬೆಂಗಳೂರಿನಲ್ಲಿ ಶ್ವಾಸಕೋಶ, ಹೊಟ್ಟೆ, ಪ್ರಾಸ್ಟೇಟ್ ಮತ್ತು ಅನ್ನನಾಳದ ಕ್ಯಾನ್ಸರ್‌ಗಳು ಪುರುಷರಲ್ಲಿ ಪ್ರಧಾನವಾಗಿರುತ್ತವೆ. ಮಹಿಳೆಯರಲ್ಲಿ ಸ್ತನ, ಗರ್ಭಕಂಠ, ಅಂಡಾಶಯ ಮತ್ತು ಕಾರ್ಪಸ್ ಗರ್ಭಾಶಯಗಳು ಪ್ರಮುಖ ಕ್ಯಾನ್ಸರ್‌ಗಳಾಗಿವೆ” ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...