ಸಿದ್ದರಾಮಯ್ಯರಗೆ ‘ಭ್ರಷ್ಟ’ರೆಂಬ ಹಣೆಪಟ್ಟಿ ಕಟ್ಟುವುದು ಮಾಧ್ಯಮಗಳ ವ್ಯಾದಿ: ನಿ. ನ್ಯಾ. ಬಾಬಾ ಸಾಹೇಬ್ ಜಿನರಾಲ್ಕರ್

Date:

ಕಳೆದ ಮೂರು ತಿಂಗಳಿನಿಂದ ಮುಡಾ ಪ್ರಕರಣದ ಬಗ್ಗೆ ಮಾಧ್ಯಮಗಳು ಸಾಕಷ್ಟು ಮಾತನಾಡುತ್ತಿವೆ. ಮಾಧ್ಯಮಗಳ ವ್ಯಾದಿ ಏನೆಂದರೆ, ಸಂವಿಧಾನವನ್ನ ಬದಲಾವಣೆ ಮಾಡುವುದು. ರಾಹುಲ್ ಗಾಂಧಿ ಅವರನ್ನ ಪಪ್ಪು ಎಂದು ಬಿಂಬಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಭ್ರಷ್ಟ ಎಂಬ ಹಣೆಪಟ್ಟಿ ಕಟ್ಟುವುದಾಗಿದೆ. ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರವೇ ಇಲ್ಲದಿದ್ದರೂ, ಅವರನ್ನ ಎಳೆದು ತರಲಾಗುತ್ತಿದೆ. ಸಿದ್ದರಾಮಯ್ಯ ಅವರ ರಾಜಕಾರಣಕ್ಕೆ ಮಸಿ ಬಳಿಯುವ ಉದ್ದೇಶದಿಂದ ಈ ಪಿತೂರಿ ನಡೆಯುತ್ತಿದೆ ಎಂದು ನಿವೃತ್ತ ನ್ಯಾಯಮೂರ್ತಿ ಬಾಬಾ ಸಾಹೇಬ್ ಜಿನರಲಾಕರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ‘ಕರ್ನಾಟಕ ಜಾಗೃತ ವಕೀಲರ ವೇದಿಕೆ’ಯು ‘ರಾಜಕೀಯ ಪಿತೂರಿಗಳು ಮತ್ತು ನ್ಯಾಯಾಲಯದ ಇತ್ತೀಚಿನ ಆದೇಶಗಳು’ ಚಿಂತನಾ ಸಮಾವೇಶ ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ, ‘ಮುಡಾ ಪ್ರಕರಣ: ಕೋರ್ಟ್‌ಗಳ ಆದೇಶ – ಸತ್ಯಾಸತ್ಯತೆ’ ಪುಸ್ತಕವನ್ನೂ ಬಿಡುಗಡೆ ಮಾಡಿ, ಅವರು ಮಾತನಾಡಿದರು.

“ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಅಧಿಕಾರದಿಂದ ಅನುಚಿತ ಪ್ರಭಾವ ಬೀರಿದ್ದಾರೆಂದು ಆರೋಪಿಸಲಾಗುತ್ತಿದೆ. ಪತ್ರಿಕೆಗಳಲ್ಲಿಯೂ ಇದೇ ವರದಿಯಾಗುತ್ತಿದೆ. ಮಾಧ್ಯಮಗಳ ವರದಿಯನ್ನೇ ನ್ಯಾಯಾಲಯ ಎತ್ತಿ ಹಿಡಿದಿದೆ. ಆದರೆ, ನ್ಯಾಯಾಲಯವು ಸಾಕ್ಷ್ಯಾಧಾರಗಳನ್ನು ಪಡೆಯಬೇಕು. ಅವುಗಳನ್ನು ಎತ್ತಿ ಹಿಡಿಯಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೂರುದಾರರು ಸ್ನೆಹಮಯಿ ಕೃಷ್ಣ ಹಾಗೂ ಅಬ್ರಹಾಂ ಕನ್ನಡದಲ್ಲಿ ಬರೆದ 1,200 ಪುಟಗಳ ದಾಖಲೆಯನ್ನು ರಾಜ್ಯಪಾಲರಿಗೆ ನೀಡಿದ್ದಾರೆ. ಕನ್ನಡ ಓದುವುದಕ್ಕೆ ಬರದ ರಾಜ್ಯಪಾಲರು ಸಾಯಂಕಾಲದ ಒಳಗೆ ಮುಖ್ಯಮಂತ್ರಿ ಅವರಿಗೆ ಶೋಕಾಸ್ ನೋಟಿಸ್ ನೀಡುತ್ತಾರೆ. ಅದೇ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ ಸೇರಿದಂತೆ ಇನ್ನಿತರರ ವಿರುದ್ಧ ಅರ್ಜಿಗಳು ಇನ್ನು ಕೂಡಾ ರಾಜ್ಯಪಾಲರ ಕಚೇರಿಯಲ್ಲಿಯೇ ಉಳಿದಿವೆ. ಆದರೆ, ಸಿದ್ದರಾಮಯ್ಯ ವಿರುದ್ದ ತರಾತುರಿಯಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ. ಅಂದರೆ, ಇದು ಪೂರ್ವನಿಯೋಜಿತ” ಎಂದು ಆರೋಪಿಸಿದ್ದಾರೆ.

“ದೂರುದಾರ ಟಿ.ಜೆ ಅಬ್ರಹಾಂ ರೌಡಿಶೀಟರ್ ಎಂದೂ ಹೇಳಲಾಗುತ್ತಿದೆ. ಆತನಿಗೆ ಸುಪ್ರೀಂ ಕೋರ್ಟ್‌ ಕೂಡ ದಂಡ ಹಾಕಿದೆ. ರಾಜ್ಯಪಾಲರು ಈ ಪ್ರಕರಣದಲ್ಲಿ ಅತಿಯಾದ ಆಸಕ್ತಿ ತೋರಿದ್ದಾರೆ. ಸಿದ್ದರಾಮಯ್ಯರನ್ನು ಪ್ರಕರಣದಲ್ಲಿ ಸಿಕ್ಕಿ ಹಾಕಿಸುವ ತಂತ್ರ ನಡೆದಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರೂಪಾಯಿ ನೋಟುಗಳಲ್ಲಿ ಗಾಂಧೀಜಿ ಚಿತ್ರ ಮೊದಲ ಆಯ್ಕೆಯಾಗಿರಲಿಲ್ಲ; ಮತ್ಯಾರು?

“ಬಿಜೆಪಿ ಮಾಜಿ ಸಂಸದ ಸಂವಿಧಾನವನ್ನ ಬದಲಾವಣೆ ಮಾಡೋಕೆ ಬಂದಿದೀವಿ ಎಂದು ಬಹಿರಂಗವಾಗಿ ಹೇಳುತ್ತಿದ್ದರು. ಈಗಲೂ ಬಿಜೆಪಿಗರು ಸಂವಿಧಾನದ ವಿರುದ್ಧ ಮಾತನಾಡುತ್ತಿದ್ದಾರೆ. ನಾವು ಸುಮ್ಮನೆ ಇದ್ದರೆ, ಮನುಸ್ಮೃತಿಯನ್ನು ನಮ್ಮ ಮೇಲೆ ಹೇರುತ್ತಾರೆ. ತಮ್ಮ ಆದೇಶದಲ್ಲಿ ಮನುಸ್ಮೃತಿಯ ಉಲ್ಲೇಖ ಮಾಡಿದ್ದ ಜಡ್ಜ್‌ ಜಾಗದಲ್ಲಿ ಮುಸ್ಲಿಂ ಅಥವಾ ಕ್ರಿಶ್ಚಿಯನ್ ಜಡ್ಜ್‌ಯಿದ್ದು, ಅವರು ಕುರಾನ್ ಅಥವಾ ಬೈಬಲ್‌ ಅನ್ನು ಉಲ್ಲೇಖಿಸಿದ್ದರೆ, ಏನಾಗುತ್ತಿತ್ತು. ಆರ್‌ಎಸ್‌ಎಸ್‌, ಬಜರಂಗದಳ ಏನು ಮಾಡುತ್ತಿದ್ದವು. ಇದೆಲ್ಲವನ್ನೂ ನಾವು ಅರ್ಥ ಮಾಡಿಕೊಳ್ಳಬೇಕು” ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಕೀಲ ಅನಂತ್‌ ನಾಯ್ಕ್, “ಸಾಮಾಜಿಕ ನ್ಯಾಯಕ್ಕಾಗಿ ದುಡಿಯುತ್ತಿರುವ ಸಿದ್ದರಾಮಯ್ಯ ಅವರನ್ನು ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ರಾಜ್ಯ ಸರ್ಕಾರವನ್ನು ಮಾತ್ರವಲ್ಲ, ಬಾಬಾ ಸಾಹೇಬ್ ಅಂಬೆಡ್ಕರ್ ಬರೆದ ಸಂವಿಧಾನವನ್ನೂ ಬುಡಮೇಲು ಮಾಡುವ ಷಡ್ಯಂತ್ರ ಇದೆ. ಸಂವಿಧಾನವನ್ನು ಸಂರಕ್ಷಿಸಲು ಎಲ್ಲರೂ ಹೋರಾಟ ಮಾಡಬೇಕಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...