ಕಾವೇರಿ | ಸಂಸದರ ಭಾವಚಿತ್ರಗಳಿಗೆ ಹಾರ ಹಾಕಿ, ಧಿಕ್ಕಾರ ಕೂಗಿದ ಕರವೇ ಮಹಿಳಾ ಹೋರಾಟಗಾರರು

Date:

“ರಾಜ್ಯದ ಜನತೆಯಿಂದ ಆಯ್ಕೆಯಾಗಿ ದೆಹಲಿಗೆ ಹೋದ 28 ಸಂಸದರು ತಾವು ಕರ್ನಾಟಕದ ಜನರ ಪ್ರತಿನಿಧಿಗಳು ಎನ್ನುವುದನ್ನು ಮರೆತು, ಕೇವಲ ಕೇಂದ್ರ ಸರ್ಕಾರ ಓಲೈಸುವುದರಲ್ಲಿ ಮಗ್ನರಾಗಿದ್ದಾರೆ” ಎಂದು ಕರ್ನಾಟಕ ರಕ್ಷಣಾ ವೇದಿಕೆ(ಟಿಎ ನಾರಾಯಣಗೌಡ ಬಣ) ಮಹಿಳಾ ಹೋರಾಟಗಾರರು ರಾಜ್ಯ ಸಂಸದರ ಭಾವಚಿತ್ರಗಳಿಗೆ ಹಾರ ಹಾಕಿ, ಧಿಕ್ಕಾರ ಕೂಗಿದರು.

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಎಲ್ಲೆಡೆ ಪ್ರತಿಭಟನೆಗಳು, ಸರ್ಕಾರದ ವಿರುದ್ಧ ಆಕ್ರೋಶಗಳು ಕೇಳಿಬರುತ್ತಿವೆ. ಸೆ.29 ರಂದು ಹಲವಾರು ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಅವರ ನೇತೃತ್ವದಲ್ಲಿ ಗಾಂಧಿನಗರದ ಕೇಂದ್ರ ಕಚೇರಿಯಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ರ‍್ಯಾಲಿ ನಡೆಯಿತು. ಈ ವೇಳೆ, ಪ್ರತಿಭಟನಾಕಾರರು ರಾಜ್ಯ ಸಂಸದರ ಭಾವಚಿತ್ರಗಳಿಗೆ ಹಾರ ಹಾಕಿ, ಧಿಕ್ಕಾರ ಕೂಗಿದರು. ಸಂಸದರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ಮಾಡಿದರು.

ಈ ವೇಳೆ ಮಾತನಾಡಿದ ಅವರು, “ಕಾವೇರಿ ನೀರು ನಿಯಂತ್ರಣ ಮಂಡಳಿ (ಸಿಡಬ್ಲೂಆರ್‌ಸಿ) ಹಾಗೂ ಪ್ರಾಧಿಕಾರದಿಂದ (ಸಿಡಬ್ಲೂಎಮ್‌ಎ) ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಇಷ್ಟಾದರೂ ರಾಜ್ಯದ ಪರವಾಗಿ ಕೇಂದ್ರ ಸರ್ಕಾರದ ಮುಂದೆ ರಾಜ್ಯದ 28 ಸಂಸದರು ಬಾಯಿಬಿಡುತ್ತಿಲ್ಲ. ತಮಿಳುನಾಡಿನ ಡಿಎಂಕೆ ಮತ್ತು ಅಣ್ಣಾಡಿಎಂಕೆ ಪಕ್ಷಗಳು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ, ಪಟ್ಟುಹಿಡಿದು ತಮ್ಮ ರಾಜ್ಯಕ್ಕೆ ನೀರು ಬಿಡಿಸಿಕೊಳ್ಳುತ್ತಾರೆ. ಇದು ಬಹಳ ವರ್ಷಗಳಿಂದ ನಡೆದುಕೊಂಡು ಬಂದಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಬಂದ್ | ನಾಳೆ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ಸಂಚಾರ

“ತಮಿಳುನಾಡು ಸಂಸದರು ಪಟ್ಟು ಹಿಡಿದು ನೀರು ಬಿಡಿಸಿಕ್ಕೊಳ್ಳುತ್ತಾರೆ. ಆದರೆ, ನಮ್ಮ ರಾಜ್ಯದ ಸಂಸದರು ಏನು ಮಾತನಾಡದೆ ಸುಮ್ಮನೆ ಇದ್ದಾರೆ. ರಾಜ್ಯದ ಸಂಸದರಿಗೆ ತಾಕತ್ತಿಲ್ವವಾ? ನಮ್ಮ ಹಾಗೇ ಅವರು ಕಾವೇರಿ ನೀರು ಕುಡಿಯುವುದಿಲ್ಲವಾ?” ಎಂದು ಪ್ರಶ್ನಿಸಿದರು.

“ರಾಜ್ಯದ ಸಂಸದರು ಕರ್ನಾಟಕದ ಜನಪ್ರತಿನಿಧಿಗಳು ಎಂದು ಮರೆತಿದ್ದಾರೆ. ಹಾಗಾಗಿ, ಅವರಿಗೆ ಬಿಸಿ ಮುಟ್ಟಿಸಲು ಈ ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...