6 ವರ್ಷಗಳಲ್ಲಿ 50,000 ಸೈಬರ್ ಪ್ರಕರಣಗಳು ದಾಖಲು; ಕೇವಲ 23% ಮಾತ್ರ ಬಗೆಹರಿದಿವೆ

Date:

  • ದಾಖಲಾಗಿರುವ ಪ್ರಕರಣಗಳಲ್ಲಿ 11,895 ಪ್ರಕರಣಗಳನ್ನು ಮಾತ್ರ ಬಗೆಹರಿಸಲಾಗಿದೆ
  • ಸೈಬರ್ ಅಪರಾಧ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ಕೆಲಸ

ಬೆಂಗಳೂರಿನಲ್ಲಿ 2017ರಿಂದ ಮೇ 31ರವರೆಗೆ 50 ಸಾವಿರಕ್ಕೂ ಹೆಚ್ಚು ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಶೇ.23ರಷ್ಟು ಪ್ರಕರಣಗಳು ಮಾತ್ರ ಬಗೆಹರಿದಿದ್ದು, 29 ಮಂದಿಗಷ್ಟೇ ಶಿಕ್ಷೆಯಾಗಿದೆ.

ಸೈಬರ್ ಅಪರಾಧಗಳ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ ಗೃಹ ಸಚಿವ ಜಿ ಪರಮೇಶ್ವರ್ ಉತ್ತರ ನೀಡಿದ್ದು, ಅಂಕಿಅಂಶಗಳ ಮಾಹಿತಿ ಹಂಚಿಕೊಂಡಿದ್ದಾರೆ.

“ಸುಮಾರು ಆರೂವರೆ ವರ್ಷಗಳಲ್ಲಿ ದಾಖಲಾದ 50,027 ಸೈಬರ್ ಅಪರಾಧಗಳಲ್ಲಿ 2019ರಲ್ಲಿ ಅತಿ ಹೆಚ್ಚು (10,553) ಪ್ರಕರಣಗಳು ಮತ್ತು 2017ರಲ್ಲಿ ಕಡಿಮೆ (2,742) ಪ್ರಕರಣಗಳು ದಾಖಲಾಗಿವೆ. 2022ರಲ್ಲಿ 9,940 ಪ್ರಕರಣಗಳು ದಾಖಲಾಗಿದ್ದರೆ, 2023ರ ಮೊದಲ ಐದು ತಿಂಗಳಲ್ಲಿ 6,226 ಪ್ರಕರಣಗಳು ವರದಿಯಾಗಿವೆ. ಈ ವರ್ಷ ಪ್ರಕರಣಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೂವರೆಗೂ ದಾಖಲಾಗಿರುವ ಪ್ರಕರಣಗಳಲ್ಲಿ 11,895 ಪ್ರಕರಣಗಳನ್ನು ಮಾತ್ರ ಬಗೆಹರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

“ಡೇಟಾದ ಪ್ರಕಾರ, 41% ಪ್ರಕರಣಗಳು (20,662) ಡೆಬಿಟ್/ಕ್ರೆಡಿಟ್ ಕಾರ್ಡ್‌ಗಳು ಮತ್ತು ಆನ್‌ಲೈನ್‌ನಲ್ಲಿ ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡುವುದಕ್ಕೆ ಸಂಬಂಧಿಸಿವೆ. 18% ಪ್ರಕರಣಗಳು (9,198 ಪ್ರಕರಣಗಳು) ಮುಂಗಡ ಶುಲ್ಕ ಪಾವತಿ ವಂಚನೆ ಹಾಗೂ 10% ಪ್ರಕರಣಗಳು (5,012) ಕಾರ್ಡ್ ಸ್ಕಿಮ್ಮಿಂಗ್ (ಕಾರ್ಡ್ ಡೇಟಾ ಕದಿಯುವುದು) ವಂಚನೆಗೆ ಸಂಬಂಧಿಸಿವೆ” ಎಂದು ಅವರು ವಿವರಿಸಿದ್ದಾರೆ.

“ಮುಂಗಡ ಶುಲ್ಕ/ಉಡುಗೊರೆ ವಂಚನೆಗಳಲ್ಲಿ ಆನ್‌ಲೈನ್ ವಂಚಕರು ತಮಗೆ ಉಡುಗೊರೆಗಳನ್ನು ಕಳುಹಿಸಲಾಗಿದೆ. ಅವುಗಳನ್ನು ನೀವು ಪಡೆದುಕೊಳ್ಳಲು ನಾನಾ ಶುಲ್ಕಗಳನ್ನು ಪಾವತಿಸಬೇಕೆಂದು ಹೇಳಿ ಸಂತ್ರಸ್ತರಿಂದ ಹಣವನ್ನು ಪಡೆದುಕೊಳ್ಳುತ್ತಾರೆ. ಆದರೆ, ಯಾವುದೇ ಉಡುಗೊರೆಗಳು ಸಂತ್ರಸ್ತರನ್ನು ತಲುಪುವುದಿಲ್ಲ” ಎಂದಿದ್ದಾರೆ.

“ಸೈಬರ್ ಅಪರಾಧಗಳನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪ್ರಮುಖ ಕೆಲಸವಾಗಿದೆ. ವಂಚಕರು ಪ್ರತಿದಿನ ಹೊಸ ತಂತ್ರಗಳನ್ನು ಬಳಸಿ, ಜನರನ್ನು ವಂಚಿಸುತ್ತಿದ್ದಾರೆ. ಹೊಸ ರೀತಿಯ ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕು” ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.

“ಇತ್ತೀಚಿನ ದಿನಗಳಲ್ಲಿ ನಾವು ನಿರಂತರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದೇವೆ. ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಿದ್ದೇವೆ. ಆದರೂ, ಜನರು ವಂಚನೆಗೆ ಬಲಿಯಾಗುತ್ತಿದ್ದಾರೆ. ಜಾಗೃತಿ ಕಾರ್ಯಕ್ರಮಗಳ ಭಾಗವಾಗಿ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅತ್ಯುತ್ತಮ ಆರ್.ಆರ್.ಆರ್ ನಗರವಾಗಿ ಆಯ್ಕೆಯಾದ ಬಿಬಿಎಂಪಿ

“ಪೊಲೀಸರು ಕೂಡ ವಂಚಕರ ಜಾಡು ಹಿಡಿಯಲು ನಾನಾ ತಂತ್ರಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಸೈಬರ್ ಅಪರಾಧ ಪ್ರಕರಣಗಳನ್ನು ಪರಿಹರಿಸಲು ಪೊಲೀಸ್ ಸಿಬ್ಬಂದಿಗೆ ನಿಯಮಿತವಾಗಿ ಕಾರ್ಯಾಗಾರಗಳನ್ನು ನಡೆಸುತ್ತಿದ್ದೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...