ಬೆಂಗಳೂರಿನ ಶೇ.87 ಪೊಲೀಸರಿಗೆ ಸ್ಥೂಲಕಾಯ, ಬೊಜ್ಜು, ಕಡಿಮೆ ತೂಕದ ಸಮಸ್ಯೆ

Date:

ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶೇ. 87 ಪೊಲೀಸರು ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ ತೂಕದಿಂದ ಬಳಲುತ್ತಿರುವುದು ಫಿಟ್ನಸ್‌ ಪರೀಕ್ಷೆಯಿಂದ ಬಹಿರಂಗಗೊಂಡಿದೆ. 16,296 ಪೊಲೀಸರಲ್ಲಿ 18,665 ಸಿಬ್ಬಂದಿ  ಸ್ಥೂಲಕಾಯ, ಬೊಜ್ಜು ಅಥವಾ ಕಡಿಮೆ ತೂಕದಂತಹ ಅನಾರೋಗ್ಯಕರ ಬಾಡಿ ಮಾಸ್‌ ಇಂಡೆಕ್ಸ್(ಬಿಎಂಐ) ಹೊಂದಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

16,226 ಮಂದಿ ಪೊಲೀಸರಲ್ಲಿ 7550 ಮಂದಿ ಬೊಜ್ಜು, 3746 ಮಂದಿ ಸ್ಥೂಲಕಾಯ ಹಾಗೂ 5000 ಮಂದಿ ಕಡಿಮೆ ತೂಕ ಹೊಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

2369 ಪೊಲೀಸರು, ಅಂದರೆ ಕಾರ್ಯಪಡೆಯಲ್ಲಿರುವ ಶೇ.13 ರಷ್ಟು ಮಂದಿ ಮಾತ್ರ ಸಾಮಾನ್ಯ ತೂಕವನ್ನು ಹೊಂದಿದ್ದು,ದೈಹಿಕವಾಗಿ ಸದೃಢವಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನಿಯಮಿತ ಕೆಲಸದ ಅವಧಿ, ದೋಷಪೂರಿತ ಆಹಾರ ಪದ್ಧತಿ, ತೀವ್ರ ಒತ್ತಡ ಹಾಗೂ ಕಳಪೆ ಆಹಾರ ಶೈಲಿಯಿಂದಾಗಿ ಈ ಸಮಸ್ಯೆಗಳು ಉಂಟಾಗಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ ದಯಾನಂದ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರಕ್ಕೆ ಒಂದು ವರ್ಷ, ಸಮರ್ಥನೀಯವಲ್ಲದ ನಡೆ

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದಲ್ಲಿ ಶೇ.15 ರಿಂದ 20 ರಷ್ಟು ಹುದ್ದೆಗಳು ಖಾಲಿಯುದ್ದು ದೀರ್ಘಕಾಲದಿಂದ ಈ ಹುದ್ದೆಗಳನ್ನು ಭರ್ತಿ ಮಾಡಲಾಗಿಲ್ಲ. ಆದಾಗ್ಯೂ ನೇಮಕಾತಿ ಪ್ರಕ್ರಿಯೆ ಪ್ರಕ್ರಿಯೆಯಲ್ಲಿದೆ. ಒತ್ತಡದ ಕೆಲಸದಿಂದಾಗಿ ಪೊಲೀಸರಲ್ಲಿ ಈ ರೀತಿಯ ಸಮಸ್ಯೆಗಳು ಕಂಡುಬಂದಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಕಡಿಮೆ ಸಿಬ್ಬಂದಿ ಇರುವ ಕಾರಣದಿಂದ ಹಾಲಿಯಿರುವ ಅಧಿಕಾರಿಗಳೆ ಕೆಲಸ ನಿರ್ವಹಿಸುತ್ತಿರುವುದರಿಂದ ಹೆಚ್ಚು ಒತ್ತಡವುಂಟಾಗಿ ಬೊಜ್ಜಿನ ರೀತಿಯ ಸಮಸ್ಯೆಗಳು ಉಂಟಾಗುತ್ತಿವೆ.

ಪೊಲೀಸ್‌ ಇಲಾಖೆಯ ಸಿಬ್ಬಂದಿ ಅಪಾರ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಾರೆ. ಕೆಲವು ಸಂದರ್ಭದಲ್ಲಿ ಸಿಬ್ಬಂದಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಒತ್ತಡದ ಕೆಲಸದಿಂದ ಮಾನಸಿಕ ಸಮಸ್ಯೆಗಳು ಶುರುವಾಗಿ ದೈಹಿಕ ಸಮಸ್ಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ಆಯುಕ್ತರಾದ ದಯಾನಂದ ಹೇಳುತ್ತಾರೆ.

ಒತ್ತಡದಿಂದ ಉಂಟಾಗುವ ಅಸ್ವಸ್ಥತೆ ಹಾಗೂ ವ್ಯಸನಗಳು ಪ್ರಮುಖ ಸಮಸ್ಯೆಗಳಾಗಿದ್ದು, ಇದರಿಂದಾಗಿ ಬೊಜ್ಜಿನ ಸಮಸ್ಯೆಗೆ ಕಾರಣವಾಗುತ್ತದೆ.

ಸಿಬ್ಬಂದಿಗಳನ್ನು ಕೆಲವು ಬಾರಿ ಬಂದೂಬಸ್ತ್‌ ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ. ಆ ಸಂದರ್ಭದಲ್ಲಿ ನಿರಂತರವಾಗಿ ಕೆಲಸ ಮಾಡಬೇಕಿದ್ದು,ಆಯೋಜಕರು ನೀಡಿದ ಆಹಾರ ಸೇವನೆ ಮಾಡಬೇಕಾಗುತ್ತದೆ. ಕೆಲವು ವೇಳೆ ಈ ಆಹಾರವು ಗುಣಮಟ್ಟದಿಂದ ಕೂಡಿರುವುದಿಲ್ಲ. ಸಮಯಕ್ಕೆ ಸರಿಯಾಗಿ ಕೂಡ ಕೆಲವೊಮ್ಮೆ ಆಹಾರ ನೀಡಲಾಗುವುದಿಲ್ಲ. ಇವೆಲ್ಲ ಕಾರಣಗಳು ಬೊಜ್ಜು ಹಾಗೂ ಇತರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ಹೇಳುತ್ತಾರೆ.

ಕೊಲೆ, ಆತ್ಮಹತ್ಯೆ ಹಾಗೂ ಇತರ ಪ್ರಮುಖ ತನಿಖೆಗಳು ನಡೆಸುವುದರಿಂದ ಕೂಡ ಪೊಲೀಸರ ಮಾನಸಿಕ ಆರೋಗ್ಯ ಹದಗೆಡುತ್ತದೆ. ಅನೇಕ ಅಧಿಕಾರಿಗಳಿಗೆ ವಯಸ್ಸಾದ ಕಾರಣ ಅವರಿಗೆ ಸಮಾಲೋಚನೆಯ ಅಗತ್ಯವಿದೆ. ಅವರು ಸಮಾಲೋಚನೆಗೆ ಆಗಮಿಸದ ಕಾರಣ ಆರೋಗ್ಯದಲ್ಲಿ ಮತ್ತಷ್ಟು ಸಮಸ್ಯೆಗಳು ಉಂಟಾಗುತ್ತವೆ ಎನ್ನುತ್ತಾರೆ ಅಧಿಕಾರಿಗಳು.

ಪೊಲೀಸ್‌ ಜೀವನ ಶೈಲಿ ಸಂಪೂರ್ಣ ವಿಭಿನ್ನವಾಗಿರುವುದರಿಂದ, ಸದೃಢತೆ ಕಾಯ್ದುಕೊಳ್ಳಲು ಪೊಲೀಸರಿಗೆ ದೈಹಿಕ ವ್ಯಾಯಾಮ ಅಗತ್ಯವಾಗಿದೆ. ಆದರೆ ಕೆಲಸದ ಅನಿಯಮಿತ ಪರಿಸ್ಥಿತಿಗಳಿಂದ ಫಿಟ್ನೆಸ್ ಕಾಯ್ದುಕೊಳ್ಳಲು ಸಾಧ್ಯವಾಗುವುದಿಲ್ಲ. ಇದರ ಜೊತೆ ಧೂಮಪಾನ, ಮದ್ಯಪಾನ ಹಾಗೂ ಕಳಪೆ ಆಹಾರ ಜೀವನ ಶೈಲಿ ಕೂಡ ಅನಾರೋಗ್ಯಕ್ಕೆ ಕಾರಣವಾಗಿದೆ ಎಂದು ಹಿರಿಯ ಅಧಿಕಾರಿಗಳು ಅಭಿಪ್ರಾಯಪಡುತ್ತಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...