ಲೇವಾದೇವಿದಾರರ ಕಾಟಕ್ಕೆ ಬೇಸತ್ತು ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ

Date:

  • ಬಿಬಿಎಂಪಿ ಗುತ್ತಿಗೆ ಪಡೆದಿದ್ದ ಕಾಮಗಾರಿಯಲ್ಲಿ ವೆಂಕಟೇಶ್‌ಗೆ ನಷ್ಟ
  • ಕ್ಲಾಸ್ 1 ಗುತ್ತಿಗೆದಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ವೆಂಕಟೇಶ್ ಎ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗುತ್ತಿಗೆದಾರರೊಬ್ಬರು ಲೇವಾದೇವಿಗಾರರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ವೆಂಕಟೇಶ್ ಎ ಎಂದು ಗುರುತಿಸಲಾಗಿದೆ. ಇವರು ಬಸವೇಶ್ವರನಗರ ನಿವಾಸಿಯಾಗಿದ್ದು, ಕ್ಲಾಸ್ 1 ಗುತ್ತಿಗೆದಾರರಾಗಿದ್ದರು.

“ವಿಶ್ವನಾಥ್, ಧರ್ಮೇಂದ್ರ ಬಾಬು, ಚಂದ್ರು, ಗೋಪಿ ಹಾಗೂ ಇತರ ಲೇವಾದೇವಿಗಾರರು ನನ್ನ ಪತಿಗೆ ಕಿರುಕುಳ ನೀಡಿದ್ದಾರೆ” ಎಂದು ಮೃತನ ಪತ್ನಿ ದೇವಿಕಾ ಎಂ.ಬಿ ಬಸವೇಶ್ವರನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಲಿಕೆ ಗುತ್ತಿಗೆ ಪಡೆದಿದ್ದ ಕಾಮಗಾರಿಯಲ್ಲಿ ಪತಿಗೆ ನಷ್ಟವಾಗಿದೆ. ಲೇವಾದೇವಿದಾರರಿಂದ ಬಡ್ಡಿಗೆ ಸಾಲ ಪಡೆದಿದ್ದರು. 2015ರಿಂದ ಸಾಯುವವರೆಗೂ ವೆಂಕಟೇಶ್ ಬಡ್ಡಿ ಕಟ್ಟಲು ಆಸ್ತಿ ಸೇರಿದಂತೆ ಸುಮಾರು ₹20 ಕೋಟಿ ಕಳೆದುಕೊಂಡಿದ್ದಾರೆ” ಎಂದು ದೇವಿಕಾ ಪೊಲೀಸರಿಗೆ ತಿಳಿಸಿದ್ದಾರೆ.

“ವಿಶ್ವನಾಥ್ ಸೇರಿದಂತೆ ನಾಲ್ವರೂ ವೆಂಕಟೇಶ್‌ಗೆ ಹಣ ವಾಪಸ್ ಕೊಡು, ಇಲ್ಲವೇ ಸಾಯಿ ಎಂದು ನಿಂದಿಸಿದ್ದಾರೆ. ಹಣಕ್ಕಾಗಿ ವೇಂಕಟೇಶ್ ಅವರನ್ನು ಇವರೆಲ್ಲರೂ ಪೀಡಿಸುತ್ತಿದ್ದರು. ಸಾಲ ತೀರಿಸಲು ವೆಂಕಟೇಶ್ ಮತ್ತು ಅವರ ಕುಟುಂಬದವರು ನಮ್ಮ ಮನೆಯ ಮಾರಾಟಕ್ಕಾಗಿ ಡೀಲ್ ಮಾಡಿಸಿದ್ದರು. ವಿಶ್ವನಾಥ್ ಅವರು ಏ. 30ರೊಳಗೆ ಮನೆಯಿಂದ ಹೊರಬರುವಂತೆ ಗಡುವು ನೀಡಿದ್ದರು. ಹೊರಬರದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು. ಧರ್ಮೇಂದ್ರ ಬಾಬು ಮತ್ತು ಆತನ ಚಿಕ್ಕಪ್ಪ ಖಾಲಿ ಚೆಕ್ ಮತ್ತು ಸ್ಟಾಂಪ್ ಪೇಪರ್ ಮೇಲೆ ವೆಂಕಟೇಶ್ ಸಹಿ ತೆಗೆದುಕೊಂಡಿದ್ದರು” ಎಂದು ಹೇಳಿದ್ದಾರೆ.

ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಬಸವೇಶ್ವರನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿಗಾಗಿ ನೆರೆಹೊರೆಯವರೊಂದಿಗೆ ಜಗಳ ; ಮಹಿಳೆ ಆತ್ಮಹತ್ಯೆ

ಸೋಮವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ವೆಂಕಟೇಶ್ ಮನೆಯಲ್ಲಿ ಗಂಜಿ ಕುಡಿದು ಸ್ವಲ್ಪ ಸಮಯದ ನಂತರ ಕೆಳಗೆ ಬರುವುದಾಗಿ ಪತ್ನಿ ದೇವಿಕಾಗೆ ಹೇಳಿ ತಾರಸಿಗೆ ಹೋಗಿದ್ದರು. 30 ನಿಮಿಷವಾದರೂ ವೆಂಕಟೇಶ್ ಕೆಳಗೆ ಬರದ ಕಾರಣ ದೇವಿಕಾ ತಾರಸಿಯ ರೂಮಿಗೆ ಹೋಗಿದ್ದಾರೆ. ಅಲ್ಲಿ ಬಾತ್ ರೂಂ ಬಾಗಿಲು ಬೀಗ ಹಾಕಿರುವುದನ್ನು ಕಂಡು ಪತಿಯನ್ನು ಹುಡುಕಿದ್ದಾರೆ. ಈ ವೇಳೆ ಪತಿಯ ಕುತ್ತಿಗೆಗೆ ಹಗ್ಗವನ್ನು ಕಟ್ಟಿಕೊಂಡು ನೆಲದ ಮೇಲೆ ಬಿದ್ದಿರುವುದನ್ನು ಕಂಡು ಗಾಬರಿಯಾಗಿ ಬಾಗಿಲ ತೆರೆದಿದ್ದಾರೆ. ನಂತರ ವೆಂಕಟೇಶ್ ಅವರನ್ನು ಕೆಸಿ ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...