ಬರೋಬ್ಬರಿ 100 ಬಾರಿ ಸಂಚಾರ ನಿಯಮ ಉಲ್ಲಂಘನೆ : ಡಾನ್ಸ್ ಕೊರಿಯೋಗ್ರಾಫರ್ ಬೈಕ್ ಪೊಲೀಸರ ವಶಕ್ಕೆ

Date:

ನೃತ್ಯ ಸಂಯೋಜಕರೊಬ್ಬರು (ಡಾನ್ಸ್ ಕೊರಿಯೋಗ್ರಾಫರ್) ಬರೋಬ್ಬರಿ 99 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. 100ನೇ ಬಾರಿ ಉಲ್ಲಂಘನೆ ಮಾಡಿದಾಗ ಸಂಚಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಆತನಿಗೆ 56,000 ರೂ. ದಂಡ ವಿಧಿಸಿದ್ದಾರೆ.

ಬೆಂಗಳೂರಿನ ಬಿಳೇಕಹಳ್ಳಿ ನಿವಾಸಿ, ನೃತ್ಯ ಸಂಯೋಜಕ ಹಸನ್ ರೆಹಮಾನ್ 100 ಬಾರಿ ನಿಮಯ ಉಲ್ಲಂಘಿಸಿರುವ ಮಹಾಶಯ. ಆತನ ಬೈಕ್ ಅನ್ನು ವಶಕ್ಕೆ ಪಡೆದಿರುವ ಪೊಲೀಸರು ದಂಡ ಪಾವತಿಸಲು ಎರಡು ತಿಂಗಳ ಗಡುವು ನೀಡಿದ್ದಾರೆ. ಆ ಅವಧಿಯೊಳಗೆ ದಂಡ ಪಾವತಿಸಿ, ಬೈಕ್ ಅನ್ನು ಮರಳಿ ಪಡೆಯಬೇಕು. ಇಲ್ಲದಿದ್ದರೆ ಬೈಕ್ ಹರಾಜು ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ರೆಹಮಾನ್ ಬಿಟಿಎಂ ಲೇಔಟ್‌ನಲ್ಲಿ ಡಾನ್ಸ್ ಕ್ಲಾಸ್ ನಡೆಸುತ್ತಿದ್ದಾರೆ. ಅವರು ಬನ್ನೇರುಘಟ್ಟ ರೆಸ್ತೆಯ ವೆಗಾ ಸಿಟಿ ವೃತ್ತದಲ್ಲಿ ರಸ್ತೆಯ ವಿರುದ್ಧ ಪಥದಲ್ಲಿ ಚಲಿಸುತ್ತಿದ್ದಾಗ ಕಾರೊಂದರ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರು ಚಾಲಕ ಆತನ ಬೈಕ್ ನಂಬರ್‌ನನ್ನು ಸಂಚಾರ ನಿಯಮ ಉಲ್ಲಂಘನೆ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿದ್ದು, ಆತ 99 ಬಾರಿ ಸಂಚಾರ ನಿಯಮ ಉಲ್ಲಂಘಿಸಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೂಡಲೇ, ಕಾರು ಚಾಲಕ ಬೈಕ್‌ನ ಫೋಟೋ ತೆಗೆದು, ನಿಯಮ ಉಲ್ಲಂಘನೆಯ ಪಟ್ಟಿ ಇರುವ ಸ್ಕ್ರೀನ್‌ಶಾಟ್‌ನೊಂದಿಗೆ ಟ್ವಿಟರ್‌ನಲ್ಲಿ ಹಂಚಿಕೊಂಡು ಬೆಂಗಳೂರು ಸಂಚಾರ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.

ಎಚ್ಚೆತ್ತ ಪೊಲೀಸರು, ಬೈಕ್ ಸವಾರ ರೆಹಮಾನ್ ಅವರನ್ನು ಪತ್ತೆ ಮಾಡಿ ಬೈಕ್ ವಶ ಪಡಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾವೇರಿ | ಸಂಸದರ ಭಾವಚಿತ್ರಗಳಿಗೆ ಹಾರ ಹಾಕಿ, ಧಿಕ್ಕಾರ ಕೂಗಿದ ಕರವೇ ಮಹಿಳಾ ಹೋರಾಟಗಾರರು

“ರೆಹಮಾನ್ ಅವರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಶಿಫಾರಸು ಮಾಡಿದ್ದೇವೆ. ದಂಡ ಪಾವತಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಎರಡು ತಿಂಗಳಲ್ಲಿ ದಂಡ ಪಾವತಿಸದಿದ್ದರೆ, ಅವರ ವಾಹನವನ್ನು ಹರಾಜು ಮಾಡಲಾಗುವುದು” ಎಂದು ಮೈಕೋ ಲೇಔಟ್ ಪೊಲೀಸರು ತಿಳಿಸಿದ್ದಾರೆ.

“ರೆಹಮಾನ್ 54 ಬಾರಿ ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ್ದಾರೆ. ನಂಬರ್ ಪ್ಲೇಟ್ ದೋಷಪೂರಿತ ಪ್ರಕರಣಗಳು 34 ಬಾರಿ ದಾಖಲಾಗಿವೆ. ವಾಹನ ಚಲಾಯಿಸುವಾಗ ಐದು ಬಾರಿ ಮೊಬೈಲ್ ಬಳಸಿದ್ದಾರೆ. ಒನ್‌ ವೇ, ನೋ ಎಂಟ್ರಿ, ನೋ ಪಾರ್ಕಿಂಗ್ ಟ್ರಿಪಲ್ ರೈಡಿಂಗ್ ಸೇರಿದಂತೆ ಇನ್ನೂ ಕೆಲವು ಪ್ರಕರಣಗಳು ಅವರ ವಿರುದ್ಧ ದಾಖಲಾಗಿವೆ” ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...