ಆರ್​ಸಿಬಿ-ಸಿಎಸ್‌ಕೆ ಪಂದ್ಯದ ಟಿಕೆಟ್​ ಖರೀದಿಸಲು ಹೋಗಿ ₹3 ಲಕ್ಷ ಕಳೆದುಕೊಂಡ ಅಭಿಮಾನಿ

Date:

ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್ ​(ಸಿಎಸ್ ಕೆ)​ ಹಾಗೂ ಆರ್​ಸಿಬಿ ಪಂದ್ಯದ ಟಿಕೆಟ್​ ಖರೀದಿಸಲು ಹೋದ ಬೆಂಗಳೂರು ನಗರದ ಅಭಿಮಾನಿಯೊಬ್ಬ ಬರೋಬ್ಬರಿ ₹3 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ.

ಬದ್ಧ ಎದುರಾಳಿಗಳಾಗಿರುವ, ಪ್ಲೇ ಆಫ್​ ಹಂತಕ್ಕೇರಲು ಮಹತ್ವದ ಪಂದ್ಯವಾಗಿರುವ ಕಾರಣ ಈ ಪಂದ್ಯದ ಕಾವು ಹೆಚ್ಚಾಗಿದೆ. ಹೀಗಾಗಿ ಈ ಪಂದ್ಯ ನೋಡಲು ಅಭಿಮಾನಿಗಳು ಕಾಳಸಂತೆಯಲ್ಲಿ ದುಬಾರಿ ಬೆಲೆ ಕೊಟ್ಟು ಟಿಕೆಟ್​ ಖರೀದಿ ಮಾಡುತ್ತಿದ್ದಾರೆ.

ಪದ್ಮ ಸಿನ್ಹಾ ವಿಜಯ್‌ ಕುಮಾರ್‌ ಎನ್ನುವಾತ ಐಪಿಎಲ್_2024 ಟಿಕೆಟ್ಸ್_24 ಎಂಬ ಖಾತೆಯ ಮೂಲಕ ಪಂದ್ಯಗಳ ಟಿಕೆಟ್​ ಬುಕ್ಕಿಂಗ್​ ಮಾಡಿಕೊಡಲಾಗುವುದು ಎಂದು ಹೇಳಿ ತನ್ನ ಮೊಬೈಲ್‌ ಸಂಖ್ಯೆ ಮತ್ತು ಆಧಾರ್‌ ಮಾಹಿತಿ ಎಲ್ಲವನ್ನೂ ಹಂಚಿಕೊಂಡು, ಪ್ರತಿ ಟಿಕೆಟ್‌ಗೆ ₹2,300 ದರದಂತೆ 3 ಟಿಕೆಟ್‌ಗೆ ₹7,900 ನಿಗದಿ ಪಡಿಸಿದ್ದ. ಈ ಮೂಲಕ ಟಿಕೆಟ್‌ ಖರೀದಿಸಲು ಬರುವವರ ವಿಶ್ವಾಸ ಸಂಪಾದಿಸಿದ್ದ. ಇದನ್ನು ನಂಬಿದ ಬೆಂಗಳೂರು ಮೂಲದ 28 ವರ್ಷದ ಅಭಿಮಾನಿಯೊಬ್ಬ ಟಿಕೆಟ್​ ಖರೀದಿಸಲು ಮುಂದಾಗಿ ತನ್ನ ಖಾತೆಯಲ್ಲಿದ್ದ ₹3 ಲಕ್ಷ ಕಳೆದುಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಜಯ್‌ ಕುಮಾರ್‌ ಆನ್‌ಲೈನ್‌ ಪಾವತಿ ಭರವಸೆ ನೀಡಿದ್ದಂತೆ ಈ ಅಭಿಮಾನಿಗೆ 3 ಇ-ಟಿಕೆಟ್‌ಗಳನ್ನು ವರ್ಗಾಯಿಸಿದ್ದಾನೆ. ಆದರೆ, ಹಣ ಪಾವತಿ ನಿಲ್ಲದೆ ಆಗಾಗ ಈ ಅಭಿಮಾನಿಯ ಖಾತೆಯಿಂದ ₹7,900ಗಳಂತೆ ಹಣ ವರ್ಗಾವಣೆ ಆಗಿ ₹3 ಲಕ್ಷ ಗಳಿಗೂ ಅಧಿಕ ಮೊತ್ತ ವಂಚಕನ ಖಾತೆಗೆ ಸೇರಿದೆ. ಈ ವೇಳೆ ಅಭಿಮಾನಿ ವಿಜಯ್‌ ಕುಮಾರ್‌ಗೆ ಕರೆ ಮಾಡಿ ವಿಚಾರಿಸಿದಾಗ ತಾಂತ್ರಿಕ ದೋಷ ಕಾರಣ ಹೀಗಾಗಿದ್ದು, ಹಣವನ್ನು ಹಿಂದಿರುಗಿಸುವುದಾಗಿ ಹೇಳಿಕೊಂಡಿದ್ದಾನೆ.

ಆ ಬಳಿಕವೂ ಕೂಡ ಹಣ ವರ್ಗಾವಣೆ ನಡೆದ ಕಾರಣ ಅನುಮಾನಗೊಂಡ ಅಭಿಮಾನಿ ಪೊಲೀಸರಿಗೆ ದೂರು ನೀಡಿದ್ದಾನೆ. ಹಣ ಪಾವತಿಯನ್ನು ತಡೆಯುವ ಹೊತ್ತಿಗಾಗಲೇ ₹3 ಲಕ್ಷ ಗಳಿಗೂ ಅಧಿಕ ಮೊತ್ತವನ್ನು ಕಳೆದುಕೊಂಡಿದ್ದು, ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...