ಬಿಬಿಎಂಪಿಯಿಂದ ಅ.17ರಂದು ನಾಯಿಗಳಿಗಾಗಿ ಉತ್ಸವ

Date:

ಪ್ರಾಣಿಗಳೊಂದಿಗೆ ಸಾಮರಸ್ಯದ ಸಹಬಾಳ್ವೆಯು ನಮ್ಮ ಸುತ್ತಲಿನ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ನಿರ್ಣಾಯಕವಾಗಿದೆ. ಪ್ರಾಣಿಗಳ ಜನನ ನಿಯಂತ್ರಣ ಮತ್ತು ವ್ಯಾಕ್ಸಿನೇಷನ್‌ಗಳ ಹೊರತಾಗಿ, ಪ್ರಾಣಿಗಳ ನಡವಳಿಕೆಯನ್ನು ಅರ್ಥಮಾಡಿಕೊಂಡು, ಪ್ರಕೃತಿ ಅವುಗಳನ್ನು ರಚಿಸಿದ ರೀತಿಯಲ್ಲಿ ಅವುಗಳನ್ನು ಒಪ್ಪಿಕೊಳ್ಳುವುದು ಸಹ ಮುಖ್ಯವಾದ ವಿಷಯ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದ ಅಕ್ಟೋಬರ್ 17ರಂದು ನಾಯಿಗಳಿಗಾಗಿ ಉತ್ಸವ ಆಚರಿಸಲಾಗುತ್ತಿದೆ ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ.

“ಸಹವರ್ತಿನ್ ಅನಿಮಲ್ ವೆಲ್‌ಫೇರ್ ಟ್ರಸ್ಟ್ ಮತ್ತು ಇತರ ಆಸಕ್ತ ಸಂಸ್ಥೆಗಳೊಂದಿಗೆ ಪಾಲಿಕೆಯ ಪಶುಸಂಗೋಪನೆ ವಿಭಾಗವು ಮುಂಬರುವ ದಿನಗಳಲ್ಲಿ COEXISTENCECAMPUONLOCALITY & #BITEFREELOCALITY ಎಂಬ ಯೋಜನೆಯ ಅಡಿಯಲ್ಲಿ, ಪ್ರಾಣಿಗಳಿಗೆ ಮಾನವೀಯ ವಾತಾವರಣವನ್ನು ನಿರ್ಮಿಸುವಲ್ಲಿ ಹಾಗೂ ಮಾನವ-ಪ್ರಾಣಿ ಸಂಘರ್ಷಗಳನ್ನು ಕಡಿಮೆ ಮಾಡಲು ಅನೇಕ ಉಪಕ್ರಮಗಳನ್ನು ಹಮ್ಮಿಕೊಳ್ಳಲಿದೆ” ಎಂದು ತಿಳಿಸಿದೆ.

ನಾಯಿಗಳಿಗಾಗಿ ಉತ್ಸವ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಮಾಜದಲ್ಲಿ ಕಡಿತ ಹಾಗೂ ದಾಳಿಯ ಭಯದಿಂದ ನಾಯಿಗಳ ಮೇಲೆ ಕೇವಲ ನಕಾರಾತ್ಮಕ ಭಾವನೆಯು ಹೆಚ್ಚಾಗುತ್ತಿದೆ. ಆದರೆ ನಾಯಿಗಳು ಬಹಳ ನಿಷ್ಠಾವಂತ, ವಿಧೇಯ, ರಕ್ಷಣಾತ್ಮಕ ಹಾಗೂ ಭಾವನಾತ್ಮಕ ಬೆಂಬಲ ನೀಡುವಂತ ಪ್ರಾಣಿಯೂ ಆಗಿದೆ. ಪ್ರಾಣಿಗಳೊಂದಿಗಿನ ಸಂಘರ್ಶ ನಿರ್ವಹಿಸಲು, ರೇಬೀಸ್ ಕಾಯಿಲೆಯನ್ನು ತಡೆಗಟ್ಟುವ ಕ್ರಮಗಳನ್ನು ಪ್ರತಿಪಾದಿಸುತ್ತಿದ್ದರೂ, ಸಮಾಜಕ್ಕೆ ನಾಯಿಗಳ ಸಕಾರಾತ್ಮಕ ಕೊಡುಗೆಗಳನ್ನು ಆಚರಿಸಲು ಮತ್ತು ಎತ್ತಿ ತೋರಿಸಲು ಬಿಬಿಎಂಪಿ ಉತ್ಸುಕವಾಗಿದೆ” ಎಂದು ಹೇಳಿದೆ.

“17ನೇ ಅಕ್ಟೋಬರ್ 2024 ರಂದು ನಾಯಿಗಳೊಂದಿಗಿನ ಪ್ರೀತಿ ಮತ್ತು ಬಾಂಧವ್ಯದ ಕಥೆಗಳನ್ನು ಹಂಚಿಕೊಳ್ಳುತ್ತಾ,
ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳನ್ನು ಹಾಗು ಪ್ರಾಣಿಗಳ ಪಾಲಕರನ್ನು ಒಟ್ಟುಗೂಡಿಸುವ ಮೂಲಕ ಪಾಲಿಕೆಯು ನಾಯಿಗಳಿಗೆಂದು ಉತ್ಸವ (Kukur Tihar)ವನ್ನು ಆಚರಿಸಲು ನಿರ್ಧರಿಸಿದೆ” ಎಂದಿದೆ.

ಪೌರಕಾರ್ಮಿಕರ ಸಹಯೋಗ

“ಇದೇ ಉತ್ಸವದ ದಿನದಂದು, ಬಿಬಿಎಂಪಿಯು ಆಯಾ ವಾರ್ಡಿನ ರೆಸ್ಟೋರೆಂಟ್‌ಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ, ಸಮುದಾಯದ ನಾಯಿಗಳಿಗೆ ಆಹಾರ ನೀಡುವಲ್ಲಿ ಸಹಾಯ ಮಾಡಲು 4 ವಾರ್ಡ್‌ಗಳ ಪೌರಕಾರ್ಮಿಕರ ಸಹಯೋಗದೊಂದಿಗೆ ಪ್ರಾಯೋಗಿಕವಾಗಿ ಆಹಾರ ನೀಡುವ ಕಾರ್ಯವನ್ನು ಪ್ರಾರಂಭಿಸಲಿದೆ. ಈ ಯೋಜನೆಯು ಮುಂದುವರೆದಂತೆ, ನಾವು ಪ್ರತಿ ವಾರ್ಡಿನಲ್ಲಿಯೂ ಆರೈಕೆದಾರರೊಂದಿಗೆ ರೆಸ್ಟೋರೆಂಟ್‌ಗಳನ್ನು ಸಂಪರ್ಕಿಸುವ ಮೂಲಕ, ಉಳಿದ ಆಹಾರವನ್ನು ಸದುಪಯೋಗಿಸುವ ನಿರ್ಧಾರ ಪಾಲಿಕೆಯು ಮಾಡಿದೆ. ಈ ರೀತಿಯಲ್ಲಿ ನಾಯಿಗಳಿಗೆ ನಿರಂತರವಾಗಿ ಪ್ರತಿದಿನ ಒಂದು ಬಾರಿ ಆಹಾರವನ್ನು ನೀಡಲಾಗುತ್ತದೆ” ಎಂದು ತಿಳಿಸಿದೆ.

ಪ್ರಾಣಿ ಪಾಲಕರ ನೋಂದಣಿ

“ನಿಮ್ಮ ವಾರ್ಡ್‌ನಿಂದ ಸ್ವಯಂಸೇವಕರಾಗಿ ಮುಂಬರುವ ಎಲ್ಲಾ ಉಪಕ್ರಮಗಳಲ್ಲಿ ಬಾಗಿಯಾಗಲು ನೀವು ಉತ್ಸುಕರಾಗಿದ್ದರೆ, ದಯವಿಟ್ಟು ಕೆಳಗಿನ ಕ್ಯೂ-ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡಿ, ನಮೂನೆಯನ್ನು 15ನೇ ಅಕ್ಟೋಬರ್ 2024ರ ಒಳಗೆ ಭರ್ತಿ ಮಾಡಿ. ಯಾವುದೇ ಸಂದೇಹವಿದ್ದಲ್ಲಿ, ಮಾಹಿತಿಗಾಗಿ 1533 ಅನ್ನು ಸಂಪರ್ಕಿಸಿ” ಎಂದು ಬಿಬಿಎಂಪಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...