ಕೆಲಸ ಅರಸಿ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿ ನಾಪತ್ತೆ

Date:

ಸಲೂನ್‌ನಲ್ಲಿ ಕೆಲಸ ಮಾಡಲು ನವದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ 31 ವರ್ಷದ ವ್ಯಕ್ತಿಯೊಬ್ಬರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ (ಕೆಐಎ) ನಾಪತ್ತೆಯಾಗಿದ್ದು, ಈ ಬಗ್ಗೆ ಕೆಐಎ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಯೋಗೀಶ್‌ಕುಮಾರ್ ರೋಜಾನಾ ನಾಪತ್ತೆಯಾದ ವ್ಯಕ್ತಿ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿರುವ ಉತ್ತರ ಪ್ರದೇಶ ಮೂಲದ ಅನೀಸ್ ಅವರು ಭಾನುವಾರ ಕಾಣೆಯಾದ ವ್ಯಕ್ತಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ್ದಾರೆ.

ಬೆಂಗಳೂರಿನ ಕಮ್ಮನಹಳ್ಳಿಯಲ್ಲಿರುವ ತಮ್ಮ ಸ್ನೇಹಿತ ಅನೀಸ್ ಕೆಲಸ ಮಾಡುತ್ತಿದ್ದ ಸಲೂನ್‌ನಲ್ಲಿ ಹೊಸದಾಗಿ ಕೆಲಸಕ್ಕೆ ಸೇರಿಕೊಳ್ಳಲು ಸೆ.15 ರಂದು ಇಂಡಿಗೋ ವಿಮಾನದ ಮೂಲಕ ಟರ್ಮಿನಲ್ 1 ಕ್ಕೆ ಬಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಪತ್ತೆಯಾಗಿರುವ ರೋಜಾನಾ ದೆಹಲಿ ಮೂಲದವರಾಗಿದ್ದು, ಇವರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದಾರೆ. ಇವರು ದೆಹಲಿಯಲ್ಲಿ ತಮ್ಮದೇ ಆದ ಸ್ವಂತ ಸಲೂನ್ ನಡೆಸುತ್ತಿದ್ದರು. ಆದರೆ, ಅವರಿಗೆ ಬರುತ್ತಿದ್ದ ಆದಾಯ ಸಾಕಾಗುತ್ತಿರಲಿಲ್ಲ. ಕಳೆದ ಮೂರು ವರ್ಷಗಳಿಂದ ನನಗೆ ಅವರ ಪರಿಚಯವಿದೆ. ನನಗೆ ಅವರ ಕೌಶಲ್ಯ ತಿಳಿದಿದ್ದರಿಂದ ಅದನ್ನು ಬಳಸಿಕೊಂಡು ಬೆಂಗಳೂರಿನಲ್ಲಿ ಇನ್ನೂ ಹೆಚ್ಚಿನ ಹಣ ಗಳಿಸಬಹುದು ಎಂದು ತಿಳಿಸಿದ್ದೆ, ಅದರಂತೆ ನಾನು ಅವರನ್ನು ನಮ್ಮ ಸಲೂನ್‌ನಲ್ಲಿ ನೇಮಿಸಿಕೊಳ್ಳಲು ನನ್ನ ಸಲೂನ್ ಮಾಲೀಕರ ಬಳಿ ಒಪ್ಪಿಗೆ ಪಡೆದುಕೊಂಡಿದ್ದೆ. ಹಾಗಾಗಿ, ಅವರು ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದರು. ನಾನು ಅವರನ್ನು ಕರೆತರಲು ವಿಮಾನ ನಿಲ್ದಾಣಕ್ಕೆ ಹೋಗಿದ್ದೆ ಎಂದು ನಾಪತ್ತೆಯಾದ ವ್ಯಕ್ತಿಯ ಸ್ನೇಹಿತ ಅನೀಸ್ ಹೇಳಿದರು.

ರೋಜಾನಾ ಅವರು ಈಗಾಗಲೇ ಮೂರು ವರ್ಷಗಳ ಕಾಲ ಬೆಂಗಳೂರಿನಲ್ಲಿ ಕೇಶ ವಿನ್ಯಾಸಕರಾಗಿ ಕೆಲಸ ಮಾಡಿದ್ದರು, ಅವರು ತಮ್ಮದೇ ಆದ ಸಲೂನ್ ಪ್ರಾರಂಭಿಸಲು ದೆಹಲಿಗೆ ತೆರಳಿ, ತಮ್ಮ ಸ್ವಗ್ರಾಮಕ್ಕೆ ಮರಳಿದರು ಎಂದು ಅವರು ಹೇಳಿದರು.

“ರೋಜಾನಾ ಅವರು ಮಾನಸಿಕವಾಗಿ ನೊಂದಿದ್ದರು. ನಾನು ಅವರನ್ನು ಶುಕ್ರವಾರ ವಿಮಾನ ನಿಲ್ದಾಣದಲ್ಲಿ ಭೇಟಿಯಾದ ನಂತರ ಅವರು ಕೆಲಸಕ್ಕೆ ಸೇರುವುದಿಲ್ಲ ಎಂದು ಹೇಳಿದರು. ಬಳಿಕ ಅವರ ಹೆಂಡತಿಯೊಂದಿಗೆ ಮಾತನಾಡಿದನು. ಅವರು ಕೂಡ ದೆಹಲಿಗೆ ಹಿಂದಿರುಗಲು ಟಿಕೆಟ್ ಕಾಯ್ದಿರಿಸಲು ನಿರ್ಧರಿಸಿದರು. ತಕ್ಷಣಕ್ಕೆ ಯಾವುದೇ ಟಿಕೆಟ್‌ಗಳು ಲಭ್ಯವಾಗದ ಕಾರಣ, ಮರುದಿನ ಬೆಳಗ್ಗೆ (ಸೆಪ್ಟೆಂಬರ್ 16) ಅವರು ಆಕಾಶ ಏರ್‌ನಲ್ಲಿ ಟಿಕೆಟ್‌ ಬುಕ್ ಮಾಡಿದರು. ನಾನು ಅವರನ್ನು ವಿಮಾನ ನಿಲ್ದಾಣದಲ್ಲಿ ಬಿಟ್ಟು ಮನೆಗೆ ಹೋದೆ. ರಾತ್ರಿ ವಿಮಾನ ನಿಲ್ದಾಣದಲ್ಲಿ ಕಾದು ಬೆಳಗಿನ ಫ್ಲೈಟ್ ಹತ್ತುವುದಾಗಿ ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ವೈರಸ್‌ ತಗುಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಏಳು ಚಿರತೆ ಮರಿಗಳ ಸಾವು

ಆದರೆ, ಅವರು ವಿಮಾನ ಹತ್ತಿಲ್ಲ. ರೋಜಾನಾ ಅವರ ಪತ್ನಿ ಅನೀಸ್ ರಿಗೆ ಕರೆ ಮಾಡಿ, ಅವರನ್ನು ಪತ್ತೆಹಚ್ಚಲು ಸಹಾಯ ಮಾಡುವಂತೆ ಕೇಳಿದರು. ನಾನು ರೋಜಾನಾ ಅವರ ದೂರವಾಣಿ ಸಂಖ್ಯೆಗೆ ಪದೇಪದೆ ಕರೆ ಮಾಡಿದೆ, ಫೋನ್ ಸ್ವಿಚ್ ಆಫ್ ಎಂದು ಬರುತ್ತಿತ್ತು. ಸಹಾಯಕ್ಕಾಗಿ ವಿಮಾನ ನಿಲ್ದಾಣ ಪೊಲೀಸರನ್ನು ಸಂಪರ್ಕಿಸಿದೆ. ಸೆ. 17 ಸಂಜೆ ‘ಮ್ಯಾನ್ ಮಿಸ್ಸಿಂಗ್’ ವಿಭಾಗದ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಬಳಿಕ, ಪೊಲೀಸರನ್ನು ಸಂಪರ್ಕಿಸಿದೆ, ಅದರ ನಂತರ ಅವರು ವಿಮಾನ ನಿಲ್ದಾಣದಿಂದ 20 ಕಿಮೀ ದೂರದ ಸ್ಥಳದಲ್ಲಿ ಅವರ ಫೋನ್ ಸಂಪರ್ಕ ಕಡಿತಗೊಂಡಿದೆ ಎಂದು ಹೇಳಿದರು. ಆತ ವಿಮಾನ ನಿಲ್ದಾಣದಿಂದ ಹೊರನಡೆದು ಬೆಂಗಳೂರಿನಲ್ಲೇ ಎಲ್ಲೋ ಇದ್ದಾನೆ ಎಂಬ ಶಂಕೆ ಇದೆ. ಆತನ ಪತ್ತೆಗೆ ತನಿಖೆ ನಡೆಯುತ್ತಿದೆ ಎಂದು ಅನೀಸ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...