ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ ಖಾಸಗಿ ಸಾರಿಗೆ ಒಕ್ಕೂಟ

Date:

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತನ್ನ ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಶಕ್ತಿ ಯೋಜನೆಯನ್ನು ಜುಲೈ 11ರಂದು ಜಾರಿ ಮಾಡಿತ್ತು. ಈ ಯೋಜನೆ ಜಾರಿಯಾದ ಬಳಿಕ ಖಾಸಗಿ ವಾಹನ ಚಾಲಕರು ಮತ್ತು ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ, ಖಾಸಗಿ ಸಾರಿಗೆ ಒಕ್ಕೂಟ ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದೆ.  

32 ಖಾಸಗಿ ಸಾರಿಗೆ ಒಕ್ಕೂಟಗಳು ಬೆಂಗಳೂರು ಬಂದ್​ಗೆ ಕರೆ ನೀಡಿವೆ. ಸೆಪ್ಟೆಂಬರ್ 11ರಂದು ಭಾನುವಾರ ರಾತ್ರಿ 12 ಗಂಟೆಯಿಂದ ಸೋಮವಾರ ರಾತ್ರಿ 12 ಗಂಟೆವರೆಗೆ ಆಟೋ ಟ್ಯಾಕ್ಸಿ, ಖಾಸಗಿ ಬಸ್, ಶಾಲಾ ಬಸ್ ಬಂದ್ ಇರಲಿವೆ.

ಒಕ್ಕೂಟ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಜತೆಗೆ ಮಾತುಕತೆ ನಡೆಸಿತ್ತು. ಆಗಸ್ಟ್‌ 31ರೊಳಗಾಗಿ ಸಮಸ್ಯೆ ಬಗೆಹರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಇಷ್ಟು ದಿನ ಕಳೆದರೂ ಸರ್ಕಾರ ಭರವಸೆ ಈಡೇರಿಸದ ಹಿನ್ನೆಲೆ, ಸರ್ಕಾರದ ವಿರುದ್ಧ ಬಂದ್‌ ನಡೆಸಲು ಸಿದ್ಧತೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

32 ಸಂಘಟನೆಗಳಿರುವ ರಾಜ್ಯದ ಖಾಸಗಿ ಸಾರಿಗೆ ಒಕ್ಕೂಟ ಸುದ್ದಿಗೋಷ್ಠಿ ನಡೆಸಿ, “ಶಕ್ತಿ ಯೋಜನೆ ಜಾರಿಯಾದಾಗಿನಿಂದ ಖಾಸಗಿ ಸಾರಿಗೆ ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಈ ಸಮಸ್ಯೆಯನ್ನು ಸರ್ಕಾರ ಆದಷ್ಟು ಬೇಗ ಪರಿಹಾರ ಮಾಡಬೇಕು. ಇಲ್ಲದಿದ್ದರೆ, ಸೆಪ್ಟೆಂಬರ್ 11ರಂದು ಬೆಂಗಳೂರು ಬಂದ್ ಮಾಡಲಾಗುವುದು. ಸೋಮವಾರ ಆಟೋ, ಟ್ಯಾಕ್ಸಿ, ಏರ್ ಪೋರ್ಟ್ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಕಾರ್ಪೋರೇಟ್ ವಾಹನಗಳು, ಸ್ಕೂಲ್ ಬಸ್ ಚಾಲಕರು, ಫ್ಯಾಕ್ಟರಿ ವಾಹನ, ಸ್ಟೇಜ್ ಗ್ಯಾರೇಜ್ ಬಸ್‌ಗಳು ಇರುವುದಿಲ್ಲ. ಭಾನುವಾರ ಮಧ್ಯರಾತ್ರಿಯಿಂದಲೇ ಬೆಂಗಳೂರು ಬಂದ್ ಇರಲಿದೆ. ಸರ್ಕಾರ ಲಿಖಿತ ಆದೇಶ ನೀಡುವವರೆಗೂ ಬಂದ್ ಕೈ ಬಿಡಲ್ಲ” ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಎಸ್ಸಿ‌ಎಸ್ಪಿ ಮತ್ತು ಟಿ‌ಎಸ್ಪಿ ಕಲ್ಯಾಣ ಕಾರ್ಯಕ್ರಮ ತಕ್ಷಣವೇ ಜಾರಿಗೊಳಿಸಿ: ಆಡಳಿತಾಧಿಕಾರಿ ಸೂಚನೆ

ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ, ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ನಿಷೇಧ, ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ, ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಬೇಕು, ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡುವುದಕ್ಕೆ ಅನುಮತಿ ನೀಡಬಾರದು, ಚಾಲಕರ ಮಕ್ಕಳಿಗೆ ವಿದ್ಯಾರ್ಥಿವೇತನ, ಓಲಾ, ಊಬರ್ ಆಪ್ ಆಧಾರಿತ ಸೇವೆಗಳ ನಿರ್ಬಂಧ, ಖಾಸಗಿ ಬಸ್​ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ, ಖಾಸಗಿ ವಾಹನಗಳನ್ನ ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು ಹಾಗೂ ನಿಯಮಬಾಹಿರವಾಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂಬ ಬೇಡಿಕೆಗಳನ್ನು ಒಕ್ಕೂಟ ಸರ್ಕಾರದ ಮುಂದಿಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...