ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಮಹಿಳೆ ನಂಬಿ ₹34 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್

Date:

  • ಲಂಡನ್‌ನಲ್ಲಿ ವಾಸಿಸುತ್ತಿರುವುದಾಗಿ ಸುಳ್ಳು ಹೇಳಿ ವಂಚಿಸಿದ ಮಹಿಳೆ
  • ವೈಟ್​ಫೀಲ್ಟ್​ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ ಸಲ್ಮಾನ್

ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ 48 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಪರಿಚಯವಾದ ಮಹಿಳೆ ನಂಬಿ ಬರೋಬ್ಬರಿ ₹34 ಲಕ್ಷ ಕಳೆದುಕೊಂಡಿದ್ದಾರೆ.

ಬಾಳ ಸಂಗಾತಿಯನ್ನು ಹುಡುಕಲು ಮ್ಯಾಟ್ರಿಮೋನಿಯಲ್​ ಸೈಟ್ ಸಹಾಯವಾಗುತ್ತದೆ. ಇದನ್ನೆ ಬಂಡವಾಳ ಮಾಡಿಕೊಂಡಿರುವ ಕೆಲವು ವಂಚಕರು ಯುವಕರು/ಯುವತಿಯರಿಂದ ಹಣ ವಂಚಿಸುವಂತಹ ಪ್ರಕರಣಗಳು ನಡೆಯುತ್ತಿವೆ.

ಮಾರತ್ತಹಳ್ಳಿ ಸಮೀಪದ ಮುನ್ನೇಕೊಳಾಲು ನಿವಾಸಿ ಸಲ್ಮಾನ್ (ಹೆಸರು ಬದಲಿಸಲಾಗಿದೆ) ಎಂಬುವವರು ತಮ್ಮ ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ತಮ್ಮ ಪ್ರೊಫೈಲ್ ಅನ್ನು ಅಪ್‌ಲೋಡ್ ಮಾಡಿದ್ದರು. ಫಾತಿಮಾ ಮುಹಮ್ಮದ್ ಎಂಬ ಪ್ರೊಫೈಲ್ ಹೆಸರಿನ ಮಹಿಳೆಯೊಬ್ಬರು ಸಲ್ಮಾನ್‌ ಅವರನ್ನು ಏಪ್ರಿಲ್ ಮೊದಲ ವಾರದಲ್ಲಿ ಸಂಪರ್ಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯೂ ತಾನು ಲಂಡನ್‌ನಲ್ಲಿ ವಾಸಿಸುತ್ತಿದ್ದು, ಶೀಘ್ರದಲ್ಲೇ ಭಾರತಕ್ಕೆ ಹಿಂತಿರುಗುವುದಾಗಿ ಹೇಳಿ ಸಲ್ಮಾನ್ ಅವರ ಮೇಲೆ ಅವರಿಗೆ ಆಸಕ್ತಿ ಇದೆ ಎಂದು ಹೇಳಿ ಪರಿಚಯ ಮಾಡಿಕೊಂಡಿದ್ದಾಳೆ.

ಏಪ್ರಿಲ್ 11 ರಂದು ಸಲ್ಮಾನ್‌ಗೆ ಮಹಿಳೆಯೊಬ್ಬರು ಕರೆ ಮಾಡಿ ತಾನು ಕಸ್ಟಮ್ಸ್ ಅಧಿಕಾರಿ ತನ್ನ ಹೆಸರು ಮನಿಶಾ ಶರ್ಮಾ ಎಂದು ಪರಿಚಯಿಸಿಕೊಂಡಿದ್ದಾರೆ ಹಾಗೂ ಫಾತಿಮಾ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿದ್ದು, ₹5 ಕೋಟಿಗೂ ಹೆಚ್ಚು ವಿದೇಶಿ ಕರೆನ್ಸಿ ತಂದಿದ್ದಾಳೆ. ಕಸ್ಟಮ್ಸ್ ಅಧಿಕಾರಿಗಳು ಹಣವನ್ನು ಅವರ ಕೆಲವು ದಾಖಲೆಗಳೊಂದಿಗೆ ವಶಪಡಿಸಿಕೊಂಡಿದ್ದಾರೆ ಎಂದು ಮನಿಷಾ ಸಲ್ಮಾನ್​ಗೆ ತಿಳಿಸಿದ್ದಾರೆ.

ಫಾತಿಮಾಳ ಹಣ ಮತ್ತು ಕೆಲವು ಕಾಗದಗಳನ್ನು ಬಿಡುಗಡೆ ಮಾಡಲು ತನ್ನ ಪರವಾಗಿ ಕೆಲವು ಶುಲ್ಕ ಮತ್ತು ತೆರಿಗೆಗಳನ್ನು ಪಾವತಿಸುವಂತೆ ಸಲ್ಮಾನ್‌ಗೆ ಕೇಳಿದ್ದಾಳೆ.

ಶಂಕಿತರು ನೀಡಿದ ಬ್ಯಾಂಕ್ ಖಾತೆಗಳಿಗೆ ಒಟ್ಟು ₹34,40,700 ಸಲ್ಮಾನ್ ವರ್ಗಾಯಿಸಿದ್ದಾರೆ. ದುಷ್ಕರ್ಮಿಗಳು ಏಪ್ರಿಲ್ 19 ರಿಂದ ಸಲ್ಮಾನ್ ಅವರನ್ನು ಸಂಪರ್ಕಿಸುವುದನ್ನು ನಿಲ್ಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಟಿ ಸೆಂಟರ್ ಶಾಪ್‌ವೊಂದರಲ್ಲಿ ₹5.22 ಲಕ್ಷ ಪತ್ತೆ ; ಜಪ್ತಿ

ಫಾತಿಮಾ ಅವರನ್ನು ಸಂಪರ್ಕಿಸಲು ಸಲ್ಮಾನ್ ಅವರು ಪ್ರಯತ್ನಿಸಿದ್ದಾರೆ. ಆದರೆ, ಅವರ ಯಾವುದೇ ಪ್ರಯತ್ನಗಳು ಸಫಲವಾಗಿಲ್ಲ. ಹೀಗಾಗಿ, ತಾವು ಮೋಸ ಹೋಗಿರುವುದಾಗಿ ಅರಿತ ಸಲ್ಮಾನ್ ಅವರು ವೈಟ್​ಫೀಲ್ಡ್​ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಾನಾ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...