ಕೆಐಎನಲ್ಲಿ ಪ್ರಯಾಣಿಕರೊಬ್ಬರ ಎರಡು ಐಫೋನ್‌ ಕದ್ದ ಸಿಬ್ಬಂದಿ

Date:

  • ಚೆಕ್-ಇನ್ ಬ್ಯಾಗ್‌ನಲ್ಲಿ ಪವರ್ ಬ್ಯಾಂಕ್ ಮತ್ತು ಐದು ಐಫೋನ್‌ ಪತ್ತೆ
  • ಮಿಶ್ರಾ ವಿರುದ್ಧ ಕಳ್ಳತನ ಪ್ರಕರಣ ದಾಖಲಿಸಿದ ಪೊಲೀಸರು

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಖಾಸಗಿ ಗ್ರೌಂಡ್-ಹ್ಯಾಂಡ್ಲಿಂಗ್ ಕಂಪನಿಯ ಉದ್ಯೋಗಿಯೊಬ್ಬರು ಏಪ್ರಿಲ್‌ನಲ್ಲಿ ಪ್ರಯಾಣಿಕರೊಬ್ಬರ ಎರಡು ಐಫೋನ್‌ಗಳನ್ನು ಕದ್ದಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಏರ್‌ಲೈನ್ಸ್ ಮೇ 31 ರಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದೆ.

ಆರೋಪಿ ಫೋನ್ ಕದಿಯುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಟಾಟಾ ಸಿಯಾ ಏರ್‌ಲೈನ್ಸ್ ಲಿಮಿಟೆಡ್ (ವಿಸ್ತಾರಾ)ದ ಉದ್ಯೋಗಿ ಆರ್ ಗಣೇಶ್ ಕುಮಾರ್ ಅವರು ನೀಡಿದ ದೂರಿನ ಪ್ರಕಾರ, ಪ್ರಯಾಣಿಕ ಹೇಮಂತ್ ಕುಮಾರ್ ಅವರು ಏಪ್ರಿಲ್ 28 ರಂದು ಬೆಂಗಳೂರಿನಿಂದ ಚಂಡೀಗಢಕ್ಕೆ ವಿಮಾನ ಮೂಲಕ ತೆರಳಲು ಪ್ರಯಾಣಕ್ಕಾಗಿ ಟಿಕೆಟ್ ಬುಕ್ ಮಾಡಿದ್ದರು.

ಲಗೇಜ್ ತಪಾಸಣೆಯ ವೇಳೆ, ಭದ್ರತಾ ಸಿಬ್ಬಂದಿಗೆ ಹೇಮಂತ್ ಕುಮಾರ್ ಅವರ ಚೆಕ್-ಇನ್ ಬ್ಯಾಗ್‌ನಲ್ಲಿ ಪವರ್ ಬ್ಯಾಂಕ್ ಮತ್ತು ಐದು ಐಫೋನ್‌ಗಳು ಪತ್ತೆಯಾಗಿವೆ. ಚೆಕ್-ಇನ್ ಬ್ಯಾಗೇಜ್‌ನಲ್ಲಿ ಪವರ್ ಬ್ಯಾಂಕ್‌ಗಳನ್ನು ನಿಷೇಧಿಸಿರುವುದರಿಂದ, ಅವರು ಅದನ್ನು ಅವರ ಬ್ಯಾಗ್‌ನಿಂದ ತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರುದಿನ ಬೆಳಗ್ಗೆ 8.40ಕ್ಕೆ ವಿಮಾನಯಾನ ಸಂಸ್ಥೆಯು ಚಂಡೀಗಢಕ್ಕೆ ಬ್ಯಾಗ್ ಕಳುಹಿಸಿದೆ. ಹೇಮಂತ್ ಕುಮಾರ್ ಅವರು ತಮ್ಮ ಬ್ಯಾಗ್ ಅನ್ನು ಸ್ವೀಕರಿಸಿದಾಗ ಅದರಲ್ಲಿದ್ದ ಎರಡು ಐಫೋನ್ ಕಾಣೆಯಾಗಿದೆ.

ಈ ಬಗ್ಗೆ ಹೇಮಂತ್ ಕುಮಾರ್ ಅವರು ಏರ್‌ಲೈನ್‌ಗೆ ದೂರು ಸಲ್ಲಿಸಿದ್ದಾರೆ. 27 ವರ್ಷದ ಶುಭಂ ಮಿಶ್ರಾ, ಗ್ರೌಂಡ್-ಹ್ಯಾಂಡ್ಲಿಂಗ್ ಸೇವಾ ಪಾಲುದಾರ AISATS ಲಿಮಿಟೆಡ್‌ನೊಂದಿಗೆ ಕೆಲಸ ಮಾಡುತ್ತಿದ್ದು, ಏಪ್ರಿಲ್ 29 ರಂದು ಬೆಳಗಿನ ಜಾವ 2.30 ರ ಸುಮಾರಿಗೆ ಫೋನ್‌ಗಳನ್ನು ಕದ್ದಿದ್ದಾರೆ ಎಂಬುದು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಹೆಚ್ಚುವರಿ ಲಗೇಜ್‍ಗೆ ಹಣ ಪಾವತಿಸುವಂತೆ ಹೇಳಿದಕ್ಕೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಮಹಿಳೆ

ತನಿಖೆಯ ವೇಳೆ ಮಿಶ್ರಾ ಫೋನ್‌ಗಳನ್ನು ಕದ್ದು ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ವಿಮಾನಯಾನ ಸಂಸ್ಥೆಯು ಪ್ರಯಾಣಿಕರಿಗೆ ಹಣವನ್ನು ಹಿಂದಿರುಗಿಸಿದೆ. ವಿಮಾನಯಾನ ಸಂಸ್ಥೆ ಮಿಶ್ರಾ ಅವರನ್ನು ಸೇವೆಯಿಂದ ವಜಾ ಮಾಡಿದ್ದಾರೆ. ಮಿಶ್ರಾ ವಿರುದ್ಧ ಪೊಲೀಸರು ಕಳ್ಳತನ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...