ರಾಜಾಜಿನಗರ | ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ಎಎಪಿ ದೂರು

Date:

  • ಚುನಾವಣಾ ಪ್ರಕ್ರಿಯೆಯಿಂದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ಅವರನ್ನು ಅನರ್ಹಕ್ಕೆ ಆಗ್ರಹ
  • ಜನಪ್ರತಿನಿಧಿಗಳ ಕಾಯಿದೆ 1951ರ ಉಲ್ಲಂಘನೆಯಾಗುತ್ತಿದೆ ಎಂದು ಎಎಪಿ ಆರೋಪ

ಬೆಂಗಳೂರಿನ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಅಕ್ರಮ ಹಣ ವರ್ಗಾವಣೆ ಅವ್ಯಾಹತವಾಗಿ ನಡೆಯುತ್ತಿದೆ ಎಂದು ಆರೋಪಿಸಿ ಆಮ್‌ ಆದ್ಮಿ ಪಕ್ಷದ ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್‌ ನೇತೃತ್ವದ ನಿಯೋಗವು ಬುಧವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಸತೀಶ್‌, “ರಾಜಾಜಿನಗರದಲ್ಲಿ ಚುನಾವಣಾ ಅಕ್ರಮ ಅವ್ಯಾಹತವಾಗಿ ನಡೆಯುತ್ತಿದೆ. ಮತದಾನದ ದಿನ ಸಮೀಪಿಸುತ್ತಿದ್ದಂತೆ, ಭಾರೀ ಪ್ರಮಾಣದ ಹಣವು ಅಕ್ರಮ ವರ್ಗಾವಣೆಯಾಗುತ್ತಿದೆ. ಚುನಾವಣಾ ನೀತಿ ಸಂಹಿತೆ ಕಾಯಿದೆ 1961, ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ, ಜನಪ್ರತಿನಿಧಿಗಳ ಕಾಯಿದೆ 1951 ಮುಂತಾದ ಅನೇಕ ಕಾನೂನು ಉಲ್ಲಂಘನೆಯಾಗುತ್ತಿದೆ. ಜಾರಿ ನಿರ್ದೇಶನಾಲಯವು ಶೀಘ್ರವೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮತದಾನ ಮಾಡಲು ಆಮಿಷ ಬಂದರೆ ‘ಸಿ-ವಿಜಿಲ್’ ತಂತ್ರಾಂಶದಲ್ಲಿ ದೂರು ದಾಖಲಿಸಿ: ತುಷಾರ್ ಗಿರಿನಾಥ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜಾಜಿನಗರದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ, ಮಾಜಿ ಉಪಮೇಯರ್‌ ರಂಗಣ್ಣ ರಘುವೀರ್‌, ಪದ್ಮರಾಜ್‌, ವಿಜಯಕುಮಾರ್‌, ಕೃಷ್ಣಮೂರ್ತಿ, ಯಶಸ್‌, ರವಿ, ಗಿಳಿ ವೆಂಕಟೇಶ್‌, ಮುನಿರಾಜ್‌, ಪಳನಿಕಾಂತ್‌, ರಾಜಣ್ಣ ವಿರುದ್ಧ ದೂರು ನೀಡಲಾಗಿದೆ. ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ, ಜಂಟಿ ಮುಖ್ಯ ಚುನಾವಣಾಧಿಕಾರಿ ಮತ್ತು ರಾಜಾಜಿನಗರದ ಆರ್‌ಒಗೆ ದೂರು ಸಲ್ಲಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಚುನಾವಣಾ ಪ್ರಕ್ರಿಯೆಯಿಂದ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣರವರನ್ನು ಅನರ್ಹ ಮಾಡಬೇಕೆಂದು ಆಗ್ರಹಿಸಿದ್ದೇವೆ” ಎಂದು ಡಾ. ಸತೀಶ್‌ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...