ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಪರಿಷ್ಕರಣೆಗೆ ಎಎಪಿ ಒತ್ತಾಯ: ಗಡ್ಕರಿಗೆ ಪತ್ರ

Date:

  • ಬೆಂಗಳೂರಿಂದ ಮೈಸೂರಿಗೆ ಹೋಗಿ ವಾಪಸ್ ಬರಲು ₹820 ವೆಚ್ಚ
  • ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾರೀ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆ

ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿ ಲಘು ವಾಹನಕ್ಕೆ ಬರೋಬ್ಬರಿ ₹640 ಟೋಲ್ ಹಣ ಕಟ್ಟಿಸಿಕೊಳ್ಳುತ್ತಿದ್ದು, ಟೋಲ್ ಶುಲ್ಕ ಪರಿಷ್ಕರಿಸುವಂತೆ ಆಮ್ ಆದ್ಮಿ ಪಕ್ಷ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಿಗೆ ಪತ್ರ ಬರೆದಿದೆ.

ನಗರದ ಕುಮಾರ್‌ ಪಾರ್ಕ್ ಬಳಿಯ ಪಕ್ಷದ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಮೋಹನ್‌ ದಾಸರಿ ಮಾತನಾಡಿ, “ಬೆಂಗಳೂರು-ಮೈಸೂರು ನಡುವಿನ ರಸ್ತೆ ನಿರ್ಮಾಣವನ್ನು ಸಂಸದ ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಎಕ್ಸ್‌ಪ್ರೆಸ್‌ ವೇ ಎಂದು ಹೇಳಿಕೊಂಡಿದ್ದರು. ಆದರೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದೊಂದು ರಾಷ್ಟ್ರೀಯ ಹೆದ್ದಾರಿ ಎಂದು ಸ್ಪಷ್ಟಪಡಿಸಿದೆ. ಹೀಗಿರುವಾಗ ಎರಡೆರಡು ಕಡೆಗಳಲ್ಲಿ ಟೋಲ್ ಕೇಂದ್ರಗಳನ್ನು ನಿರ್ಮಿಸಿಕೊಂಡು ಜನಸಾಮಾನ್ಯರ ದುಡ್ಡನ್ನು ದೋಚುತ್ತಿರುವುದು ಏಕೆ?” ಎಂದು ಪ್ರಶ್ನಿಸಿದರು.

“ಒಂದು ಲಘು ವಾಹನವು ಈ ರಸ್ತೆಯ ಮೂಲಕ ಬೆಂಗಳೂರಿಂದ ಮೈಸೂರಿಗೆ ಹೋಗಿ ವಾಪಸ್ ಬರಲು ₹820 ವೆಚ್ಚ ತಗುಲುತ್ತಿದೆ. ಪ್ರತಿ ಲೀಟರ್ ಡೀಸೆಲ್‌ಗೆ ‘ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್’ ₹9 ಕಟ್ಟಬೇಕು. ಸುಮಾರು 20 ಲೀಟರ್ ಡೀಸೆಲ್ ಖರ್ಚಾದರೆ ಅಲ್ಲೇ ₹180 ಸುಂಕ ಕಟ್ಟಿದಂತಾಗುತ್ತದೆ. ಇನ್ನು ರಾಮನಗರದ ಕಣಮಿಣಿಕೆ ಬಳಿಯಿರುವ ಟೋಲ್ ಕೇಂದ್ರದಲ್ಲಿ ₹165, ಮಂಡ್ಯದ ಶ್ರೀರಂಗಪಟ್ಟಣ ಬಳಿಯ ಗಣಂಗೂರಿನಲ್ಲಿ ₹155 ಟೋಲ್ ಶುಲ್ಕ ಕಟ್ಟಬೇಕಿದೆ. ಒಂದು ರಾಷ್ಟ್ರೀಯ ಹೆದ್ದಾರಿಗೆ ಇಷ್ಟೊಂದು ತೆರಿಗೆ ಯಾಕೆ ಕಟ್ಟಬೇಕು?” ಎಂದು ಮೋಹನ್‌ ದಾಸರಿ ಕೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆದ್ದಾರಿ ನಿರ್ಮಾಣದಲ್ಲಿ ಬೃಹತ್ ಭ್ರಷ್ಟಾಚಾರ: ಎಎಪಿ ಆರೋಪ

“ವಾಹನ ಖರೀದಿ ಸಮಯದಲ್ಲೇ ಸುಮಾರು ₹5 ಲಕ್ಷದ ವಾಹನಕ್ಕೆ ₹65,000 ರಸ್ತೆ ತೆರಿಗೆ ಎಂದು ಕಟ್ಟಲಾಗಿರುತ್ತದೆ. ಪ್ರತಿ ಲೀಟರ್ ಪೆಟ್ರೋಲ್, ಡೀಸೆಲ್ ಗೆ ಸೆಸ್ ಕಟ್ಟಲಾಗುತ್ತದೆ. ಇಷ್ಟೆಲ್ಲಾ ಕಟ್ಟಿದ ನಂತರ ಪುನಃ ಟೋಲ್ ರೂಪದಲ್ಲಿ ಸುಂಕ ಕಟ್ಟಬೇಕಿದೆ. ರಸ್ತೆಗಳಾದರೂ ಸುಧಾರಣೆಗೊಂಡಿವೆಯೇ? ರಸ್ತೆಗುಂಡಿಗಳು, ಅವೈಜ್ಞಾನಿಕ ಚರಂಡಿಗಳು, ಸರ್ವಿಸ್ ರಸ್ತೆಗಳೇ ಇಲ್ಲದಿರುವುದು ಹೀಗೆ ನೂರಾರು ಸಮಸ್ಯೆಗಳು ರಸ್ತೆಯುದ್ದಕ್ಕೂ ಬಿದ್ದಿವೆ. ಹಾಗಿದ್ದರೆ ಸುಂಕವೆಂದು ಸಂಗ್ರಹಿಸಲಾಗುತ್ತಿರುವ ಈ ದುಡ್ಡೆಲ್ಲ ಎಲ್ಲಿ ಹೋಗುತ್ತಿದೆ?” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟನೆ

“ಬೆಂಗಳೂರು-ಮುಂಬೈ ಹೆದ್ದಾರಿಯಲ್ಲಿ ಅನಧಿಕೃತವಾಗಿ ₹76 ಕೋಟಿ ಸಂಗ್ರಹಿಸಲಾಗಿದೆ ಎಂದು ಸಿಎಜಿ ವರದಿ ಕೊಟ್ಟಿದೆ. ದ್ವಾರಕಾ ಎಕ್ಸ್‌ಪ್ರೆಸ್‌ ವೇ ಕುರಿತಾದ ಸಿಎಜಿ ವರದಿಯಲ್ಲಿ ರಸ್ತೆ ನಿರ್ಮಾಣಕ್ಕೆ ಪ್ರತಿ ಕಿ.ಮೀ.ಗೆ ನಿಗದಿಪಡಿಸಲಾಗಿದ್ದ ₹18 ಕೋಟಿ ಬದಲಿಗೆ ₹250 ಕೋಟಿ ವ್ಯಯಿಸಲಾಗಿದೆ ಎಂದಿದೆ. ಇವೆಲ್ಲವನ್ನೂ ಗಮನಿಸಿದರೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಭಾರಿ ಪ್ರಮಾಣದ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆಯಿದೆ” ಎಂದು ದಾಸರಿ ಆರೋಪಿಸಿದರು.

ಈ ವೇಳೆ ಪಕ್ಷದ ಬೆಂಗಳೂರು ನಗರದ ಅಧ್ಯಕ್ಷ ಡಾ.ಸತೀಶ್ ಕುಮಾರ್ ಹಾಗೂ ಹಿರಿಯ ಮುಖಂಡ ಗುರುಮೂರ್ತಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...