ಆಟೋಗಳಿಗೆ ಸೂಕ್ತ ಪರ್ಮಿಟ್ ನೀಡದೆ ಸರ್ಕಾರವೇ ದಂಡವನ್ನು ವಿಧಿಸುತ್ತಿರುವುದು ಸರಿಯಲ್ಲ: ಎಎಪಿ

Date:

ಕೋವಿಡ್‌ ಅವಧಿಯ 2019 / 2020 ರ ಎರಡು ವರ್ಷಗಳಲ್ಲಿ ಪ್ರಪಂಚದಾದ್ಯಂತ ಲಕ್ಷಾಂತರ ಸಾವು ನೋವುಗಳಿಂದ ತತ್ತರಿಸಿದ ಸಂದರ್ಭದಲ್ಲಿ ಸಂಚಾರಕ್ಕೆ ಬಿಡುಗಡೆಯಾದ ಸಾವಿರಾರು ಬಿಎಸ್ 6 ( BS 6 ) ಆಟೋಗಳಿಗೆ ರಾಜ್ಯ ಸಾರಿಗೆ ಇಲಾಖೆಯವರು ಇದುವರೆವಿಗೂ ಪರ್ಮಿಟ್‌ಗಳನ್ನು ನೀಡಿಲ್ಲ. ಆದರೆ ಈಗ ಏಕಾಏಕಿ ಆಟೋಗಳಿಗೆ ಎಲ್ಲೆಂದರಲ್ಲಿ ದಂಡವನ್ನು ವಿಧಿಸಿ ಜಪ್ತಿ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಆಮ್ ಆದ್ಮಿ ಪಕ್ಷವು ಇಂದು ಬೆಂಗಳೂರಿನಲ್ಲಿ ಕರೆದಿದ್ದ ಸಾರಿಗೆ ಇಲಾಖೆಯ ಸಭೆಯಲ್ಲಿ ಸಚಿವ ರಾಮಲಿಂಗ ರೆಡ್ಡಿ ಅವರನ್ನು ಪ್ರಶ್ನಿಸಿದೆ.

ಸಭೆಯ ನಂತರ ರಾಜ್ಯ ಆಟೋ ಘಟಕದ ಅಧ್ಯಕ್ಷ ಆಯುಬ್ ಖಾನ್ ಮಾತನಾಡಿ “ಏಕಾಏಕಿ ಬಿಎಸ್ 7 ( BS 7) ಆಟೋಗಳನ್ನು ಮುಕ್ತ ಮಾರುಕಟ್ಟೆಗೆ ಬಿಡುಗಡೆ ಮಾಡಲು ಅವಕಾಶ ನೀಡಿದ್ದೆ ಇದಕ್ಕೆ ಪ್ರಮುಖ ಕಾರಣ. ಕೊರೋನಾ ಸಂದರ್ಭದಲ್ಲಿ ಯಾವುದೇ ಸಾಲ ಸೌಲಭ್ಯಗಳು ಸಿಗದಿದ್ದ ದುಸ್ಥಿತಿಯ ಕಾಲದಲ್ಲಿ ತಮ್ಮ ಜೀವನವನ್ನು ನಡೆಸಲು ಬಿಎಸ್ 6 ಆಟೋಗಳನ್ನು ಖರೀದಿಸಿದ್ದ ಬೆಂಗಳೂರಿನ ಸಾವಿರಾರು ಆಟೋ ಚಾಲಕರುಗಳು ಸಾರಿಗೆ ಇಲಾಖೆಯಿಂದ ಕೇವಲ ನೋಂದಣಿ ಮಾತ್ರ ಮಾಡಿಕೊಂಡು ಪರ್ಮಿಟ್ ಭಾಗ್ಯವಿಲ್ಲದೆ ಇದುವರೆಗೂ ಸಾರಿಗೆ ಕಚೇರಿಗಳಿಗೆ ಅಲೆಯುತ್ತಿದ್ದಾರೆ” ಎಂದರು

“ಆದರೆ ಈಗ ಏಕಾಏಕಿ ತಮ್ಮ ಸಾರಿಗೆ ಇಲಾಖೆಯ ಅಧಿಕಾರಿಗಳು ರಸ್ತೆಗಳಲ್ಲಿ ಅಲ್ಲಲ್ಲಿ ಪರ್ಮಿಟ್ ಇಲ್ಲದ ಕಾರಣ ಬಿಎಸ್ 6 ಆಟೋಗಳನ್ನು ಜಪ್ತಿ ಮಾಡಿ ದುಬಾರಿ ದಂಡಗಳನ್ನು ವಿಧಿಸುತ್ತಿರುವುದು ಎಷ್ಟರಮಟ್ಟಿಗೆ ಸರಿ ಎಂಬುದು ಪ್ರಶ್ನೆಯಾಗಿದೆ” ಎಂದು ಆಯುಬ್ ಖಾನ್ ಅವಲತ್ತುಕೊಂಡರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಎಂ.ಬಿ.ಪಾಟೀಲರ ಹೇಳಿಕೆ ಉದ್ಧಟತನದ ಪರಮಾವಧಿ

“ಈ ಕೂಡಲೇ ಬಿಎಸ್ 6 ಆಟೋಗಳಿಗೆ ಪರ್ಮಿಟ್ ಭಾಗ್ಯವನ್ನು ನೀಡಿ ಜಪ್ತಿ ಹಾಗೂ ಇನ್ನಿತರ ಕಾನೂನು ಕ್ರಮಗಳಿಂದ ಮುಕ್ತಗೊಳಿಸಬೇಕು. ಇದಲ್ಲದೆ ಬಡ ಆಟೋ ಚಾಲಕರುಗಳು ತಮ್ಮ ಯೂನಿಫಾರಂ, ಎಮಿಷನ್ ಸರ್ಟಿಫಿಕೇಟ್, ವಿಮೆಗಳನ್ನು ಮಾಡಿಸಿಕೊಳ್ಳಲು ವಾರಗಟ್ಟಲೆ ಕಂಪನಿಗಳ ಮುಂದೆ ಸರಣಿ ಸಾಲಿನಲ್ಲಿ ನಿಲ್ಲುವ ದುಸ್ಥಿತಿ ಬಂದಿದೆ. ಕಾರಣವನ್ನು ಕೇಳಿದರೆ ಸರ್ವರ್ ಡೌನ್ ಎಂದು ಹೇಳುತ್ತಿದ್ದಾರೆ. ಮೀಟರ್ ತಯಾರಿ ಮಾಡಿಕೊಳ್ಳಲು ಅಂಗಡಿಗಳ ಮುಂದೆ ಕನಿಷ್ಠ 5 ದಿವಸಗಳ ಕಾಲ ಕಾಯಬೇಕಿದೆ. ಅಲ್ಲಿಯ ತನಕ ಬಡ ಆಟೋ ಚಾಲಕರುಗಳು ಹಾಗೂ ಅವರ ಕುಟುಂಬದವರಿಗೆ ಉಪವಾಸವೇ ಗಟ್ಟಿಯಾಗಿದೆ”

“ಈಗಾಗಲೇ ಆಟೋ ಚಾಲಕರುಗಳು ತಮ್ಮ ಮಕ್ಕಳ ಶಾಲಾ ಶುಲ್ಕಗಳು, ಆರೋಗ್ಯ ವೆಚ್ಚಗಳು ಹಾಗೂ ಹಬ್ಬ ಹರಿದಿನಗಳ ಸಲುವಾಗಿ ತಮ್ಮಲ್ಲಿದ್ದ ಹಣವನ್ನು ಖರ್ಚು ಮಾಡಿಕೊಂಡು ಈಗ ಸಾಲಗಾರರ ಸುಳಿಗೆ ಸಿಲುಕುವಂತಹ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ. ಆಟೋ ಚಾಲಕರುಗಳಿಗೆ ಪರ್ಮಿಟ್ ಸೇರಿದಂತೆ ಎಲ್ಲ ತಮ್ಮಲ್ಲಿನ ದಾಖಲಾತಿಗಳನ್ನು ಸರಿಪಡಿಸಿಕೊಳ್ಳಲು ಮೂರು ತಿಂಗಳುಗಳ ಕಾಲಾವಕಾಶವನ್ನು ನೀಡಿ ಬಡ ಆಟೋ ಚಾಲಕರ ಕುಟುಂಬ ನಿರ್ವಹಣೆಗೆ ಸರ್ಕಾರ ಈ ಮೂಲಕ ನೆರವಾಗಬೇಕು” ಎಂದು ಪಕ್ಷದ ಪರವಾಗಿ ಸಚಿವರಲ್ಲಿ ಮನವಿಯನ್ನು ಮಾಡಿಕೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...