ಪೊಲೀಸರಿಂದಲೇ ಆರೋಪಿಗಳ ಅಪಹರಣ, ಹಣಕ್ಕೆ ಬೇಡಿಕೆ: ಮೂವರ ಅಮಾನತು

Date:

  • ಹುಲಿ ಉಗುರನ್ನು ಕಳ್ಳಸಾಗಣೆ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿಗಳು
  • ಕರ್ತವ್ಯಲೋಪ ಎಸಗಿದ್ದರಿಂದ ಅಮಾನತುಗೊಂಡ ಮೂವರು ಪೊಲೀಸ್ ಸಿಬ್ಬಂದಿ

ಮಾರತ್ತಹಳ್ಳಿಯಲ್ಲಿ ಹುಲಿ ಸುಲಿದು, ಉಗುರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಅಪರಾಧಿಗಳನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು ಹೋಗದೆ, ಅವರನ್ನು ಬಿಟ್ಟು ಕಳುಹಿಸಲು ಲಕ್ಷ ಲಕ್ಷ ಹಣ ಕೇಳಿ ಸಿಕ್ಕಿಹಾಕಿಕೊಂಡು ಮೂವರು ಪೊಲೀಸರು ಅಮಾನತುಗೊಂಡಿದ್ದಾರೆ.

ಈ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ರಾಮಾಂಜನೇಯ, ಜಾಕೀರ್ ಹುಸೇನ್ ಹಾಗೂ ಶಬ್ಬೀರ್ ಖಾನ್ ಇವರು ಹುಲಿ ಉಗುರನ್ನು ಕಳ್ಳಸಾಗಣೆ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿಗಳು.

ಮಾರತ್ತಹಳ್ಳಿ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ರಂಗೇಶ್, ಹೆಡ್ ಕಾನ್‌ಸ್ಟೇಬಲ್ ಹರೀಶ್ ಕೆ.ಎಲ್ ಮತ್ತು ಕಾನ್ ಸ್ಟೇಬಲ್ ಮಹೇಶ್ ನಾಯಕ್ ಇವರು ಕರ್ತವ್ಯಲೋಪ ಎಸಗಿದ್ದರಿಂದ ಅಮಾನತುಗೊಂಡ ಪೊಲೀಸ್ ಸಿಬ್ಬಂದಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೂವರು ಪೊಲೀಸರು ಅಪರಾಧಿಗಳನ್ನು ಬಂಧಿಸಿ, ಠಾಣೆಗೆ ಕರೆದುಕೊಂಡು ಹೋಗಿಲ್ಲ. ಆರೋಪಿಗಳ ಮೇಲೆ ಎಫ್‌ಐಆರ್‌ ದಾಖಲಿಸಿಲ್ಲ” ಎಂದು ಬಾಗಲೂರು ಪೊಲೀಸ್‌ ಠಾಣೆ ಅಧಿಕಾರಿಗಳು ಹೇಳಿದ್ದಾರೆ.

ಏನಿದು ಹಿನ್ನಲೆ?

ಮಾರತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಧಿತ ಮೂವರು ಆರೋಪಿಗಳು ಹುಲಿ ಸುಲಿದು ಉಗುರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದರು. ಈ ವೇಳೆ ಮಾರತ್ತಹಳ್ಳಿಯ ಮೂವರು ಪೊಲೀಸ್ ಸಿಬ್ಬಂದಿ ಅವರ ಮೇಲೆ ದಾಳಿ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಬಂಧಿತ ಆರೋಪಿಗಳನ್ನು ಠಾಣೆಗೆ ಕರೆದುಕೊಂಡು ಹೋಗದೆ, ಅವರನ್ನು ಅಜ್ಞಾತ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದಾರೆ. ಪೊಲೀಸರು ಬಂಧಿತ ಆರೋಪಿಗಳ ಮೇಲೆ ಯಾವುದೇ ಎಫ್‌ಐಆರ್ ಕೂಡಾ ದಾಖಲಿಸಿಲ್ಲ.

ಸಬ್‌ಇನ್ಸ್‌ಪೆಕ್ಟರ್ ರಂಗೇಶ್ ನೇತೃತ್ವದ ತಂಡ ಆರೋಪಿಗಳ ಬಳಿ ಲಕ್ಷ ಲಕ್ಷ ಹಣ ನೀಡುವಂತೆ ಕೇಳಿದ್ದಾರೆ. ಆರೋಪಿ ರಾಮಾಂಜನೇಯ ಅವರ ಕುಟುಂಬದ ಸದಸ್ಯರಿಗೆ ಪೊಲೀಸರು ಕರೆ ಮಾಡಿ ₹45 ಲಕ್ಷ ಹಣ ನೀಡುವಂತೆ ಕೇಳಿದ್ದಾರೆ. ಹಣ ನೀಡದಿದ್ದರೆ ಜೈಲಿಗೆ ಹಾಕುವುದಾಗಿ ಬೆದರಿಕೆ ಒಡ್ಡಿದ್ದಾರೆ.

ಆರೋಪಿ ರಾಮಾಂಜನೇಯ ಸಂಬಂಧಿಕ ಎಂ.ಬಿ.ಶಿವರಾಮಯ್ಯ ಅವರು ಮಂಗಳವಾರ ಬಾಗಲೂರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ಮೊಬೈಲ್ ಟವರ್ ಮೂಲಕ ಸ್ಥಳ ಪತ್ತೆ ಮಾಡಿ, ರಾಮಾಂಜನೇಯ ಜತೆಗೆ ಇದ್ದವರನ್ನು ಬಂಧಿಸಿದ್ದಾರೆ. ಈ ವೇಳೆ ಪೊಲೀಸ್‌ ಸಿಬ್ಬಂದಿ ಕೈವಾಡ ಇರುವುದು ಬೆಳಕಿಗೆ ಬಂದಿದೆ. ಡಿಸಿಪಿ (ಈಶಾನ್ಯ) ಬಿ.ಎಂ ಲಕ್ಷ್ಮೀ ಪ್ರಸಾದ್ ಅವರು ಪ್ರಕರಣದಲ್ಲಿ ಭಾಗಿಯಾಗಿರುವ ಪೊಲೀಸ್ ಸಿಬ್ಬಂದಿ ಮೇಲೆ ಕ್ರಮ ಜರುಗಿಸಿ, ಅಮಾನತುಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...