ಏರ್ ಶೋ -2025 | ವೈಮಾನಿಕ ಪ್ರದರ್ಶನಕ್ಕೆ ಇಂದು ಚಾಲನೆ, ಫೆ.14ರವರೆಗೆ ಲೋಹದ ಹಕ್ಕಿಗಳ ಚಿತ್ತಾರ

Date:

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಖ್ಯಾತಿಯ ಬೆಂಗಳೂರು ಏರ್​​ ಶೋಗೆ ಸೋಮವಾರ ಅದ್ದೂರಿ ಚಾಲನೆ ಸಿಗುತ್ತಿದೆ. ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ 4 ದಿನಗಳ ಕಾಲ ವೈಮಾನಿಕ ಪ್ರದರ್ಶನ ನಡೆಯಲಿದೆ.

‘ರನ್​ವೇ ಟು ಬಿಲಿಯನ್ ಅಪಾರ್ಚುನಿಟಿಸಿ’ ಟ್ಯಾಗ್ ಲೈನ್​ನಲ್ಲಿ‌ ಏರ್​ಶೋ-2025 ಆಯೋಜಿಸಲಾಗಿದೆ. ನೋಡುಗರ ಹೃದಯಬಡಿತ ಹೆಚ್ಚಿಸುವ ವೈಮಾನಿಕ ಕಸರತ್ತು, ವೈಮಾನಿಕ ಮತ್ತು ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆ ಆಗಲಿದೆ.

ಸುದ್ದಿಗೋಷ್ಠಿಯಲ್ಲಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, “ವೈಮಾನಿಕ ಪ್ರದರ್ಶನದ ರೂಪುರೇಷೆಗಳ ಮಾಹಿತಿ ನೀಡಿದರು. ಇದು ಕೇವಲ ತಂತ್ರಜ್ಞಾನ-ಕೌಶಲ ತೋರಿಸಲು ಇರುವ ಪ್ರದರ್ಶನವಲ್ಲ. ಬದಲಿಗೆ ಕೋಟ್ಯಂತರ ಯುವಮನಸುಗಳಲ್ಲಿ ಸ್ಫೂರ್ತಿಯ ಸೆಲೆ ಬಿತ್ತುವ ವೇದಿಕೆ ಆಗಲಿದೆ. ಬೆಂಗಳೂರು ಏರ್ ಶೋ ಎಂದೇ ಖ್ಯಾತವಾಗಿರುವ ವೈಮಾನಿಕ ಪ್ರದರ್ಶನದ 15ನೇ ಆವೃತ್ತಿ ಎಲ್ಲ ರೀತಿಯಲ್ಲೂ ಹಿಂದೆಂದಿಗಿಂತ ದೊಡ್ಡದಾಗಿ ಇರಲಿದೆ. ಯಲಹಂಕದಲ್ಲಿ ಇರುವ ವಾಯುಪಡೆಯ ವಿಶಾಲ ಮೈದಾನದಲ್ಲಿ ಪ್ರದರ್ಶನಕ್ಕೆ ಎಲ್ಲ ಸಿದ್ಧತೆಗಳೂ ಅಂತಿಮವಾಗಿವೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದು ಬೆಳಗ್ಗೆ 9.30ಕ್ಕೆ ಏರ್ ​ಶೋಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ನೀಲಾಕಾಶದಲ್ಲಿ ಯುದ್ಧ ವಿಮಾನಗಳು ಘರ್ಜಿಸಲಿವೆ. ಉಕ್ಕಿನ ಹಕ್ಕಿಗಳ ಮ್ಯಾಜಿಕ್ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ.

ಏರ್​​ಶೋದಲ್ಲಿ ರಷ್ಯಾ ಮತ್ತು ಅಮೆರಿಕನ್​ ಫೈಟ್​ ಏರ್​ಕ್ರಾಫ್ಟ್​ಗಳು ಭಾಗಿ ಆಗಲಿವೆ. 100 ದೇಶಗಳ 900ಕ್ಕೂ ಹೆಚ್ಚು ರಕ್ಷಣಾ ಸಾಮಗ್ರಿ ಉತ್ಪಾದಕರು ಭಾಗವಹಿಸಲಿದ್ದಾರೆ. ವಿವಿಧ ಕಂಪನಿಗಳ 100 ಸಿಇಒಗಳು, 50 ವಿದೇಶಿ ಒಎಂಎಸ್ ಉಪಸ್ಥಿತರಿರಲಿದ್ದಾರೆ. ಎಐ, ಸೈಬರ್ ಸೆಕ್ಯುರಿಟಿ, ಡ್ರೋನ್ ಮತ್ತು ಗ್ಲೋಬಲ್​ ಏರೋಸ್ಪೇಸ್ ಪ್ರದರ್ಶನವಿದೆ. ಆತ್ಮನಿರ್ಭರ ಭಾರತದ ಉತ್ಪನ್ನಗಳು ಇರಲಿದ್ದು 10 ಸೆಮಿನಾರ್​​ಗಳು ಆಯೋಜಿಸಲಾಗಿದೆ. ರಕ್ಷಣಾ ವಲಯದಲ್ಲಿ ಹೂಡಿಕೆ, ಸಂಶೋಧನೆ, ಜಾಯಿಂಟ್ ವೆಂಚರ್, ರಕ್ಷಣಾ ವಲಯ ಬಗ್ಗೆ ಚರ್ಚೆ ಆಗಲಿದೆ.

ಸಂಚಾರ ಬದಲಾವಣೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ

ಏರ್​​ ಶೋನಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳಲಿದ್ದಾರೆ. ಹೀಗಾಗಿ, ಯಲಹಂಕ ಸುತ್ತಮುತ್ತಲಿನ ಹಲವು ರಸ್ತೆಗಳಲ್ಲಿ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ. ನಿಟ್ಟೆ ಮೀನಾಕ್ಷಿ ಕಾಲೇಜು ರಸ್ತೆಯಲ್ಲಿ ಹಾಗೂ ಬಾಗಲೂರು ಮುಖ್ಯರಸ್ತೆಯಲ್ಲೂ ಏಕಮುಖ ಸಂಚಾರ ಇದೆ. GKVK ಕ್ಯಾಂಪಸ್​​​ನಲ್ಲಿ ಸಾರ್ವಜನಿಕರಿಗೆ ಪಾರ್ಕಿಂಗ್ ವ್ಯವಸ್ಥೆ ಇದ್ದು, ಅಲ್ಲಿಂದ ಉಚಿತ ಬಿಎಂಟಿಸಿ ಎಸಿ ಬಸ್ ವ್ಯವಸ್ಥೆ ಮಾಡಲಾಗಿದೆ.

ಫೆಬ್ರವರಿ 14ರವರೆಗೆ ಲೋಹದ ಹಕ್ಕಿಗಳು ಚಿತ್ತಾರ ಮೂಡಿಸಲಿವೆ. ಈ ಬಾರಿ 7 ಲಕ್ಷಕ್ಕೂ ಹೆಚ್ಚು ಜನ ಏರ್​ಶೋದಲ್ಲಿ ಭಾಗಿ ಆಗೋ ನಿರೀಕ್ಷೆ ಇದೆ. ವಾಹನ ದಟ್ಟಣೆ ನಿಯಂತ್ರಿಸಲು ಪೊಲೀಸರು ಕೂಡ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...