ಪರಿಶಿಷ್ಟ ಜಾತಿಗಳ ಒಳಮೀಸಲಾತಿಯಲ್ಲಿನ ಅಲೆಮಾರಿ ಸಮುದಾಯಕ್ಕಾದ ಅನ್ಯಾಯವನ್ನು ಸರಿಪಡಿಸಲು ಅಕ್ಟೋಬರ್ 31ರಂದು ಮಧ್ಯಾಹ್ನ 12 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಕೃಷ್ಣಾದಲ್ಲಿ ಸಭೆ ನಿಗದಿಯಾಗಿದೆ.
ಪರಿಶಿಷ್ಟ ಜಾತಿಗಳಲ್ಲಿನ ಒಳಮೀಸಲಾತಿ ಜಾರಿಗೊಳಿಸಲು ಇರುವ ಸವಾಲುಗಳ ಕುರಿತು ಬುಧವಾರ ಚರ್ಚೆ ನಡೆದಿದ್ದು, ಸಿಎಂ ಅವರು ಅಲೆಮಾರಿ ಸಮುದಾಯದ ಪ್ರತಿನಿಧಿಗಳನ್ನು ಕರೆಸಿ ಚರ್ಚಿಸಿದ್ದಾರೆ. ಹಾಗೆಯೇ 31ರಂದು ನಡೆಯುವ ಸಭೆಯಲ್ಲಿ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಇದನ್ನು ಓದಿದ್ದೀರಾ? ವಿಜಯನಗರ | ಅಲೆಮಾರಿ ಸಮುದಾಯಗಳ ಅಭಿವೃದ್ಧಿಯೇ ನಿಗಮದ ಮುಖ್ಯ ಧ್ಯೇಯ: ಪಲ್ಲವಿ
ಈ ಹಿಂದೆ ಹೋರಾಟಗಾರರು ದೆಹಲಿಗೆ ತೆರಳಿದ್ದರು ಈ ವೇಳೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರು ಸಂಧಾನ ನಡೆಸಿದ್ದು ಸಿಎಂ ಭೇಟಿಯಾಗಿ ಅಲೆಮಾರಿ ಸಮುದಾಯದ ಬಗ್ಗೆ ಚರ್ಚಿಸಿದ್ದರು.
ಹಾಗೆಯೇ ಇಂದು ಬೆಳಗ್ಗೆ ಸಾಮಾಜಿಕ ಹೋರಾಟಗಾರ ನೂರ್ ಶ್ರೀಧರ್ ನೇತೃತ್ವದಲ್ಲಿ ಅಲೆಮಾರಿ ಮುಖಂಡರ ತಂಡ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದೆ. ಇದಾದ ಬಳಿಕ ಸಮಸ್ಯೆ ಪರಿಹಾರಕ್ಕೆ ಅ.31 ರಂದು ಸಭೆ ನಿಗದಿಯಾಗಿದೆ.





