ಜೂ. 12ರಿಂದ 200 ರೋಗಿಗಳಿಗೆ ಉಚಿತ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ: ಜಯದೇವ ಆಸ್ಪತ್ರೆ

Date:

  • ಆಸಕ್ತರು ಜೂನ್‌ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು
  • ಜೂನ್‌ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ಕಾರ್ಯಾಗಾರ

ಬಡತನ ರೇಖೆಗಿಂತ ಕೆಳಗಿರುವ ಹಾಗೂ ಹಣಕಾಸಿನ ಮುಗ್ಗಟ್ಟಿನಿಂದ ಚಿಕಿತ್ಸೆ ಮಾಡಿಸಿಕೊಳ್ಳಲು ನಿಸ್ಸಾಹಯಕವಾಗಿರುವ 200 ಮಂದಿ ಹಿರಿಯ ನಾಗರಿಕರಿಗೆ ಉಚಿತವಾಗಿ ಸ್ಟಂಟ್‌ ಅಳವಡಿಸುವ ಆಂಜಿಯೋಪ್ಲಾಸ್ಟಿ ಮಾಡಲಾಗುವುದು ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ತಿಳಿಸಿದೆ. ​

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಅಮೆರಿಕದ ಮೆಡ್‌ಟ್ರಾನಿಕ್ಸ್, ವಿಸ್ಕಿನ್‌ಸನ್ ಸಂಸ್ಥೆ ಹಾಗೂ ಡಾ. ಗೋವಿಂದರಾಜು ಸುಬ್ರಮಣಿ ಹಾರ್ಟ್‌ ಫೌಂಡೇಶನ್ ಸಹಯೋಗದೊಂದಿಗೆ 200 ರೋಗಿಗಳಿಗೆ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ಮಾಡಲಾಗುವುದು ಎಂದು ಹೇಳಿದೆ.

ಈ ಕಾರ್ಯಗಾರವೂ ಜೂನ್‌ 12 ರಿಂದ 18ವರೆಗೆ ಜಯದೇವ ಆಸ್ಪತ್ರೆಯಲ್ಲಿ ನಡೆಯಲಿದ್ದು, ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಜೂನ್ 12 ರಿಂದ 14ರವರೆಗೆ, ಮೈಸೂರು ಶಾಖೆಯ ಜಯದೇವ ಆಸ್ಪತ್ರೆಯಲ್ಲಿ ಜೂನ್ 15 ರಿಂದ 16 ರವರೆಗೆ, ಕಲಬುರಗಿ ಶಾಖೆಯ ಜಯದೇವ ಆಸ್ಪತ್ರೆಯಲ್ಲಿ ಜೂನ್ 17 ರಿಂದ 18ರವರೆಗೆ ಕಾರ್ಯಾಗಾರ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಡ ರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯರ ನಾಗರಿಕರಿಗೆ ಈ ಕಾರ್ಯಾಗಾರ ಆಯೋಜಿಸಲಾಗಿದೆ. ಪ್ರತಿ ರೋಗಿಗೂ ಉನ್ನತ ಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಅಳವಡಿಸಲಾಗುವುದು. ಈಗಾಗಲೇ ಆ್ಯಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟ ರೋಗಿಗಳು ಈ ಸೌಲಭ್ಯ ಪಡೆಯಬಹುದು. ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್‌ ಕಾರ್ಡ್‌ ಅಥವಾ ಆದಾಯ ಪ್ರಮಾಣ ಪತ್ರ ಹೊಂದಿರಬೇಕು” ಎಂದು ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌ ಮಂಜುನಾಥ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು ಜೂನ್‌ 8ರೊಳಗೆ ಅವರ ಹೆಸರು ನೋಂದಾಯಿಸಿಕೊಳ್ಳಬೇಕು. ಬೆಳಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ಸಮಯಾವಕಾಶ ಇರಲಿದೆ ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ₹2,000 ನೋಟು ವಾಪಸ್; ಹವಾಲಾ ದಂಧೆ ಹೆಚ್ಚುವ ಬಗ್ಗೆ ಪೊಲೀಸರ ಶಂಕೆ

ಹೆಸರು ದಾಖಲಾತಿಗಾಗಿ ಇಲ್ಲಿ ಸಂಪರ್ಕಿಸಿ

ನಿರ್ದೇಶಕರ ಕಚೇರಿ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ಬನ್ನೇರುಘಟ್ಟ ರಸ್ತೆ, ಜಯನಗರ 9ನೇ ಬ್ಲಾಕ್ ಬೆಂಗಳೂರು.

ಬೆಂಗಳೂರು ಶಾಖೆ: ಮೊ. 9480827888, 080-26944874

ಮೈಸೂರು ಶಾಖೆ: 8660105492, 0821-2263255

ಕಲಬುರಗಿ ಶಾಖೆ: 9482114611, 08472-230511

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...