ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಕೊಳಚೆ ನೀರು ಕುಡಿಯುವಂತೆ ಒತ್ತಾಯ: ಅಪಾರ್ಟ್‌ಮೆಂಟ್ ನಿವಾಸಿ ಕಿರುಕುಳ

Date:

  • ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು
  • ಅವಮಾನ ತಾಳಲಾರದೆ ಕೆಲಸ ತೊರೆದ ಮಹಿಳೆ

ರಾಜ್ಯ ರಾಜಧಾನಿ ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಯೊಬ್ಬರು ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಈಜುಕೊಳದ ಕೊಳಚೆ ನೀರು ಕುಡಿಯುವಂತೆ ಒತ್ತಾಯಿಸಿ ಹಿಂಸೆ ನೀಡಿದ ಅಮಾನವೀಯ ಘಟನೆ ನಡೆದಿದೆ.

ರಾಜರಾಜೇಶ್ವರಿ ನಗರದ ಉನ್ನತ ಸೌಲಭ್ಯ ನಿರ್ವಹಣಾ ಕಂಪನಿಯಲ್ಲಿ ಹೊಂಗಸಂದ್ರದ ನಿವಾಸಿ 25 ವರ್ಷದ ಮಹಿಳೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲಸದ ನಿಮಿತ್ತ ಇವರನ್ನು ಬೊಮ್ಮನಹಳ್ಳಿಯ ದೇವರಚಿಕ್ಕನಹಳ್ಳಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ಗೆ ಸೆಕ್ಯುರಿಟಿ ಗಾರ್ಡ್‌ ಆಗಿ ಕೆಲಸ ನಿರ್ವಹಿಸಲು ಕಳುಹಿಸಿದ್ದಾರೆ.

ಜೂನ್ 14ರಂದು ಬೊಮ್ಮನಹಳ್ಳಿಯ ದೇವರಚಿಕ್ಕನಹಳ್ಳಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ಗೆ 25 ವರ್ಷದ ಮಹಿಳೆ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿರುತ್ತಾರೆ. ಈ ವೇಳೆ, ಅಪಾರ್ಟ್‌ಮೆಂಟ್‌ ಈಜುಕೊಳದಲ್ಲಿ ಸ್ನಾನ ಮಾಡಲು ಬಂದ ಅಪಾರ್ಟ್‌ಮೆಂಟ್‌ನ ನಿವಾಸಿಯೊಬ್ಬರು ಈಜುಕೊಳದಲ್ಲಿರುವ ಗಲೀಜು ನೀರು ನೋಡಿ ಕಿರುಚಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ಮಹಿಳೆ ತಾನು ಸೆಕ್ಯೂರಿಟಿ ಡ್ಯೂಟಿಯಲ್ಲಿರುವುದಾಗಿ ಹಾಗೂ ಈಜುಕೊಳದ ನಿರ್ವಹಣೆಗೂ ತನಗೂ ಸಂಬಂಧವಿಲ್ಲ ಎಂದು ತಿಳಿಸಿದರೂ ಕೂಡ ಮಹಿಳೆಯನ್ನು ಅಪಾರ್ಟ್‌ಮೆಂಟ್‌ ನಿವಾಸಿಯೊಬ್ಬ ಬಲವಂತವಾಗಿ ಹಿಡಿದುಕೊಂಡು ಈಜುಕೊಳದ ಕೊಳಚೆ ನೀರನ್ನು ಬಾಟಲಿಯಲ್ಲಿ ಹಿಡಿದು ಕುಡಿಸಿದ್ದಾನೆ.

ಈ ಅವಮಾನ ತಾಳಲಾರದೆ ಮಹಿಳೆ ಕೆಲಸ ತೊರೆದಿದ್ದಾಳೆ. ಆರೋಪಿ ಆಕಾಶ್ ಎಂಬುವವರ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ.

“ಜೂನ್ 14 ರಂದು ಬೆಳಗ್ಗೆ 11.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಜುಕೊಳದ ಗೇಟ್‌ ಅನ್ನು ಮುಚ್ಚಿ ಆ ಸ್ಥಳದಿಂದ ನಾನು ಹೊರಬರದಂತೆ ತಡೆದಿದ್ದಾರೆ. ವಿನಾಕಾರಣ ನನ್ನನ್ನು ಅವಮಾನಿಸಿದ್ದಾರೆ” ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತೆ ಭದ್ರತಾ ಮೇಲ್ವಿಚಾರಕ ಅನಿಕೇಶ್ ಚಕ್ರವರ್ತಿ ಮತ್ತು ನಿರ್ವಹಣಾ ವ್ಯವಸ್ಥಾಪಕ ಮಲ್ಲಿಕಾರ್ಜುನ್ ಅವರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ಇಬ್ಬರು ಯುವಕರಿಂದ ಬ್ಲ್ಯಾಕ್ ಮೇಲ್ ; ಯುವತಿ ಆತ್ಮಹತ್ಯೆ

“ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಆರೋಪಿಗೆ ನೋಟಿಸ್ ಕಳುಹಿಸಲಾಗಿದೆ. ನಿರ್ವಹಣಾ ವ್ಯವಸ್ಥಾಪಕರಿಗೆ ವಿಷಯ ತಿಳಿಸಲಾಗಿದೆ. ಅವರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...