ಯುವತಿ ಕೊಲೆ ಮಾಡಿ ಮೃತದೇಹವನ್ನು ಆಕೆಯ ಮನೆ ಮುಂದೆ ಇಟ್ಟ ಆರೋಪಿಯ ಬಂಧನ

Date:

ಯುವತಿಯ ಮೇಲೆ ಅತ್ಯಾಚಾರ ಎಸಗಲು ಯತ್ನಿಸಿ, ಕೊಲೆ ಮಾಡಿ ಆಕೆಯ ಮೃತದೇಹವನ್ನು ಆರೋಪಿ ಅವರ ಮನೆ ಮುಂದೆ ಇಟ್ಟ ಘಟನೆ ಬೆಂಗಳೂರಿನ ಮಹದೇವಪುರಲ್ಲಿ ನಡೆದಿದೆ.

ಕಲಬುರಗಿ ಮಹಾನಂದ(21) ಕೊಲೆಯಾದ ಯುವತಿ. ಕೃಷ್ಣ ಚಂದ್​ ಸೇಟಿ ಕೊಲೆ ಮಾಡಿದ ಆರೋಪಿ. ಸದ್ಯ ಆರೋಪಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ಮೂಲದ ಮಹಾನಂದ ಹಾಗೂ ಆಕೆಯ ಅಕ್ಕ ಇಬ್ಬರೂ ಬೆಂಗಳೂರಿನ ಶೆಲ್ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮಾಡುತ್ತಿದ್ದರು. ಬೆಂಗಳೂರಿನ ಮಹದೇವಪುರದ ಲಕ್ಷ್ಮಿ ಸಾಗರ ಲೇಔಟ್​​ನಲ್ಲಿ ನೆಲೆಸಿದ್ದರು. ಈ ಯುವತಿಯರ ಪಕ್ಕದ ಮನೆಯಲ್ಲಿ ಒಡಿಶಾ ಮೂಲದ ಕೃಷ್ಣಚಂದ್ ಸೇಟಿ ವಾಸವಿದ್ದನು. ಈತ ನಗರದ ಟೆಕ್‌ ಪಾರ್ಕ್‌ನಲ್ಲಿ ಸೆಕ್ಯುರಿಟಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾನಂದ ಆ. 10 ಶೆಲ್ ಪೆಟ್ರೋಲ್‌ ಬಂಕ್‌ಗೆ ಕೆಲಸಕ್ಕೆ ತೆರಳದೆ ಮನೆಯಲ್ಲೇ ಇದ್ದಳು. ಈ ವೇಳೆ, ಮನೆಯಲ್ಲಿ ರಾತ್ರಿ ಅಡುಗೆ ಮಾಡಲು ಒಲೆಯ ಮೇಲೆ ಅನ್ನಕ್ಕೆ ಇಟ್ಟು, ಹೊರಗೆ ಬಂದಿದ್ದಳು.  

ಯುವತಿ ಹೊರಗಡೆ ಬಂದ ವೇಳೆ, ಆರೋಪಿ ಕೃಷ್ಣ ಚಂದ್​​ ಸಾಟಿ ಆಕೆಯನ್ನು ತನ್ನ ಮನೆಯೊಳಗೆ ಎಳೆದುಕೊಂಡು ಅತ್ಯಾಚಾರ ಎಸಗಲು ಪ್ರಯತ್ನಿಸಿದ್ದಾನೆ. ಇದಕ್ಕೆ ಯುವತಿ ವಿರೋಧ ವ್ಯಕ್ತಪಡಿಸಿ, ಕಾಪಾಡುವಂತೆ ಕಿರುಚಾಡಿದ್ದಾಳೆ. ಆರೋಪಿ ಯುವತಿಯನ್ನು ಒಂದು ಕೈಯಿಂದ ಆಕೆಯ ಬಾಯಿ, ಮೂಗು ಮುಚ್ಚಿ ಇನ್ನೊಂದು ಕೈಯಿಂದ ಆಕೆಯ ಕತ್ತು ಹಿಸುಕಿದ್ದಾನೆ.

ಈ ವೇಳೆ, ಯುವತಿ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ. ಬಳಿಕ ಮೃತದೇಹವನ್ನು ಆರೋಪಿ ಬಟ್ಟೆಯಲ್ಲಿ ಸುತ್ತಿ ಮೂಲೆಯೊಂದರಲ್ಲಿ ಇಟ್ಟಿದ್ದನು. ಬಳಿಕ ಬೆಳಗಿನ ಜಾವ 5:30 ರ ಸುಮಾರಿಗೆ ಶವವನ್ನು ಆಕೆಯ ಮನೆಯ ಮುಂದೆ ಇಟ್ಟಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಬಿಎಂಪಿ ಆವರಣದಲ್ಲಿ ಅಗ್ನಿ ಅವಘಡ; ತನಿಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸ್ವಲ್ಪ ಸಮಯದ ನಂತರ ಅಕ್ಕ-ಪಕ್ಕದ ಜನರು ಮನೆ ಮುಂದೆ ಸೇರಿದ್ದಾರೆ. ಈ ವೇಳೆ, ಆರೋಪಿಯೂ ಕೂಡ ಜನರ ಮಧ್ಯೆ ಸೇರಿ ಏನು ತಿಳಿಯದಂತೆ ನಿಂತಿದ್ದಾನೆ.

ಸದ್ಯ ಪೊಲೀಸರು ಆರೋಪಿ ಕೃಷ್ಣ ಚಂದ್​​ ಸಾಟಿಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮಹದೇವಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...