2ನೇ ದಿನವೂ ಮುಂದುವರೆದ ಆಶಾ ಹೋರಾಟ; ಫ್ರೀಡಂ ಪಾರ್ಕ್‌ ರಸ್ತೆಗಳಲ್ಲಿ ಮಲಗಿದ್ದ ಕಾರ್ಯಕರ್ತೆಯರು

Date:

ಗೌರವಧನವನ್ನು 15,000 ರೂ.ಗೆ ಏರಿಕೆ ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯದ ಎಲ್ಲ ಭಾಗಗಳ ಆಶಾ ಕಾರ್ಯಕರ್ತೆಯರು ರಾಜ್ಯ ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿದ್ದಾರೆ. ಅವರ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಅವರ ಹೋರಾಟಕ್ಕೆ ಸರ್ಕಾರದಿಂದ ಪ್ರತಿಕ್ರಿಯೆ ಬಾರದ ಹಿನ್ನೆಲೆ ಹೋರಾಟ ಮುಂದುವರೆಸಿದ್ದಾರೆ. ಸಾವಿರಾರು ಆಶಾ ಕಾರ್ಯಕರ್ತೆಯರು ಮಂಗಳವಾರ ರಾತ್ರಿ ಫ್ರೀಡಂ ಪಾರ್ಕ್‌ನ ಆವರಣ ಮತ್ತು ರಸ್ತೆಗಳಲ್ಲಿಯೇ ಮಲಗಿದ್ದರು. ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೇವೆ ಒದಗಿಸುವ ಆಶಾ ಕಾರ್ಯಕರ್ತೆಯರು ರಸ್ತೆಗಳಲ್ಲಿ ಮಲಗಿದ್ದ ಆ ದೃಶ್ಯಗಳು ಮನಕಲಕುವಂತಿದ್ದವು. ಆದರೆ, ಸರ್ಕಾರ ಹೃದಯ ಇನ್ನೂ ಕರಗಿಲ್ಲ.

ಆಶಾ ಕಾರ್ಯಕರ್ತೆಯರ ಹೋರಾಟ ಬುಧವಾರ 2ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಬೇಡಿಕೆ ಈಡೇರುವವರೆಗೂ ವಾಪಸ್‌ ಹೋಗುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟು ಹಿಡಿದಿದ್ದಾರೆ. ಆಹೋರಾತ್ರಿ ಹೋರಾಟ ನಡೆಸುತ್ತಿದ್ದಾರೆ. ರಾತ್ರಿಯ ಚಳಿ-ಬೆಳಗಿನ ಬಿಸಿಲಿನ ನಡುವೆಯೂ ಆಶಾ ಕಾರ್ಯಕರ್ತೆಯರು ಸ್ವಾತಂತ್ರ್ಯ ಉದ್ಯಾನವನದಲ್ಲೇ ಹೋರಾಟ ನಡೆಸುತ್ತಿದ್ದಾರೆ. ರಾತ್ರಿ ಕೊರೆವ ಚಳಿಯಲ್ಲಿಯೂ ಬಯಲು ಹಾಗೂ ರಸ್ತೆಯಲ್ಲಿ ಆಶಾಗಳು ಮಲಗಿರುವ ದೃಶ್ಯಗಳು ಫ್ರೀಡಂ ಪಾರ್ಕ್‌ನ ಸುತ್ತ ಕಂಡುಬಂದಿವೆ.

ಆಶಾ ಕಾರ್ಯಕರ್ತೆಯರು, ಗೌರವಧನ, ಫ್ರೀಡಂ ಪಾರ್ಕ್‌,
ASHA workers, Honorarium, Freedom Park,

ಬುಧವಾರ, ಧರಣಿ ಸ್ಥಳಕ್ಕೆ ಆರೋಗ್ಯ ಇಲಾಖೆಯ ನಿರ್ದೇಶಕಿ ಡಾ. ತ್ರಿವೇಣಿ ಮತ್ತು ಆಶಾ ಕಾರ್ಯಕ್ರಮದ ಉಪ ನಿರ್ದೇಶಕರಾದ ಡಾ. ಪ್ರಭುಗೌಡ ಪಾಟೀಲ್ ಅವರು ಭೇಟಿ ನೀಡಿದ್ದು, ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದು ಭರವಸೆ ನೀಡಿದ್ದಾರೆ. ಆದರೆ, ಈಗಾಗಲೇ ಹಲವಾರು ಬಾರಿ ಇಂತಹ ಭರವಸೆಗಳನ್ನು ನೀಡಿ, ಸರ್ಕಾರ ಮೋಸ ಮಾಡಿದೆ. ಈ ಬಾರಿ ಮತ್ತೆ ಮೋಸಹೋಗುವ ಮಾತೇ ಇಲ್ಲ. ಭರವಸೆ ಈಡೇರಿದ ನಂತರವೇ ಧರಣಿಯನ್ನು ನಿಲ್ಲಿಸುತ್ತೇವೆಂದು ಹೋರಾಟಗಾರರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಆಶಾ ಕಾರ್ಯಕರ್ತೆಯರು, ಗೌರವಧನ, ಫ್ರೀಡಂ ಪಾರ್ಕ್‌,
ASHA workers, Honorarium, Freedom Park,

ನಾವು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧದ ಹೋರಾಟ ಇವತ್ತು-ನಿನ್ನೆಯದಲ್ಲ. ಕಳೆದ 15 ವರ್ಷದಿಂದ ಆಶಾ ಕಾರ್ಯಕರ್ತೆಯರು ಕೆಲಸ ಮಾಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಕೆಲಸ ಆರಂಭಿಸಿದ ಆರು ತಿಂಗಳಲ್ಲಿಯೇ ಸಮಸ್ಯೆಗಳ ಬಗ್ಗೆ ಮೊದಲ ಹೋರಾಟ ನಡೆದಿತ್ತು. ಆಶಾ ಕಾರ್ಯಕರ್ತೆಯರನ್ನು ಸರ್ಕಾರ ನೇಮಿಸಿಕೊಂಡಿತ್ತಾದರೂ, ಅವರ ಬಗ್ಗೆ ಕೇಳುವವರು ಯಾರೂ ಇರಲಿಲ್ಲ. ಕೆಲಸ ಶುರು ಮಾಡಿದಾಗಿನಿಂದ ಈವರೆಗೆ ಹೋರಾಟದ ಮೂಲಕವೇ ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಸೌಲಭ್ಯಗಳನ್ನು ಪಡೆದಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಒಂದು ‘ಡ್ರೇಸ್ ಕೋಡ್’ ಬೇಕು ಎಂಬ ಹೋರಾಟದ ಮೂಲಕವೇ ಈ ‘ಪಿಂಕ್‌’ ಬಣ್ಣದ ಸೀರೆಯನ್ನು ಪಡೆದಿದ್ದೇವೆ. ಎಲ್ಲದಕ್ಕೂ ಹೋರಾಟ ಮಾಡಬೇಕಾದ ಅನಿವಾರ್ಹತೆ ಇದೆ. ಗೌರವಧನ ಹೆಚ್ಚಿಸುವವರೆಗೂ ನಾವು ನಮ್ಮೂರುಗಳಿಗೆ ಮರುಳುವುದಿಲ್ಲ ಎಂದು ಆಶಾ ಕಾರ್ಯಕರ್ತೆಯರು ಪಟ್ಟುಹಿಡಿದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...