ಟಿಕೆಟ್‌ ಸಮಸ್ಯೆ ಪರಿಹರಿಸಿಕೊಳ್ಳಲು ತೆರಳಿದ ಪ್ರಯಾಣಿಕನ ಮೇಲೆ ಹಲ್ಲೆ: ಎಫ್‌ಐಆರ್‌ ದಾಖಲು

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಡಿಪೋ ವ್ಯವಸ್ಥಾಪಕ ಹಾಗೂ ಭದ್ರತಾ ಸಿಬ್ಬಂದಿ ಟಿಕೆಟ್‌ ಸಮಸ್ಯೆ ಪರಿಹರಿಸಿಕೊಳ್ಳಲು ಬಂದ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿ ಕೊಲೆ ಬೆದರಿಕೆ ಹಾಕಿದ ಘಟನೆ ನಡೆದಿದೆ.

ಸದ್ಯ ಪ್ರಯಾಣಿಕ ನೀಡಿದ ದೂರಿನ ಮೇರೆಗೆ ಕೆಎಸ್‌ಆರ್‌ಟಿಸಿ ಟರ್ಮಿನಲ್ 2 ಡಿಪೋ ವ್ಯವಸ್ಥಾಪಕ ಮತ್ತು ಭದ್ರತಾ ಸಿಬ್ಬಂದಿ ಸತೀಶ್‌ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.

ಜಿ. ರಾಘವೇಂದ್ರ ಪ್ರಯಾಣಿಕ. ಇವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದ ವ್ಯಾಪಾರಿ. ಡಿಸೆಂಬರ್ 23ರಂದು ರಾತ್ರಿ 12:15ರ ಸುಮಾರಿಗೆ ಬೆಂಗಳೂರಿನಿಂದ ಹಿರಿಯೂರಿಗೆ ಪ್ರಯಾಣ ಬೆಳೆಸಿದ್ದರು. ಕೆಎಸ್‌ಆರ್‌ಟಿಸಿ 1 ನೇ ಟರ್ಮಿನಲ್‌ನಿಂದ ಹರಿಹರದ ಮಾರ್ಗದ ಬಸ್‌ ಹತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್‌ ಹತ್ತಿದ ಬಳಿಕ ಹಿರಿಯೂರ್‌ಗೆ ಟಿಕೆಟ್‌ ನೀಡುವಂತೆ ನಿರ್ವಾಹಕರಿಗೆ ಕೇಳಿದ್ದರು. ಆದರೆ, ನಿರ್ವಾಹಕ ಹಿರಿಯೂರ್‌ಗೆ ಬಸ್‌ ತೆರಳುವುದಿಲ್ಲ ಎನ್‌ಎಚ್‌ ಮೂಲಕ ಹಾದು ಹೋಗುತ್ತದೆ. ಬೈಪಾಸ್ ಬಳಿ ನಿಲ್ಲಿಸುವುದಾಗಿ ತಿಳಿಸುತ್ತಾರೆ.

ಇದಕ್ಕೆ ಪ್ರಯಾಣಿಕ ಹಿರಿಯೂರ್ ಬೈಪಾಸ್ ಬಳಿ ಇಳಿದುಕೊಳ್ಳುವೆ ಎಂದು ಹೇಳಿದ್ದಾರೆ. ಇದಕ್ಕೆ ನಿರ್ವಾಹಕ ಚಿತ್ರದುರ್ಗಕ್ಕೆ ಟಿಕೆಟ್‌ ಪಡೆದರೇ, ಬೈಪಾಸ್ ಬಳಿ ನಿಲ್ಲಿಸುವುದಾಗಿ ತಿಳಿಸುತ್ತಾರೆ. ಇದಕ್ಕೆ ಪ್ರಶ್ನಿಸಿದ ಪ್ರಯಾಣಿಕನನ್ನು ನಿರ್ವಾಹಕ ಬಸ್‌ನಿಂದ ಇಳಿಸುತ್ತಾನೆ.

ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಬೇಕೆಂದು ಯೋಚಿಸಿದ ಪ್ರಯಾಣಿಕ ತಕ್ಷಣ ಡಿಪೋ ಮ್ಯಾನೇಜರ್ ಬಳಿ ತೆರಳಿ ಆದ ಘಟನೆ ಬಗ್ಗೆ ಹೇಳಿದ್ದಾರೆ ಮತ್ತು ಟಿಕೆಟ್ ವಿಚಾರವನ್ನು ಪ್ರಶ್ನಿಸಿದ್ದಾರೆ. ಇದಕ್ಕೆ ಡಿಪೋ ಮ್ಯಾನೇಜರ್ ಕೂಡ ‘ಹರಿಹರ ಅಥವಾ ಚಿತ್ರದುರ್ಗಕ್ಕೆ ಮಾತ್ರ ಟಿಕೆಟ್ ಪಡೆಯಬೇಕು’ ಎಂದು ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕರ್ತವ್ಯ ನಿರತ ಸಂಚಾರ ಪೊಲೀಸ್‌ ಮೇಲೆ ಹಲ್ಲೆ: ಬಂಧನ

ಈತನ ಹೇಳಿಕೆಯನ್ನು ರಾಘವೇಂದ್ರ ಅವರು ಮೊಬೈಲ್‌ನಲ್ಲಿ ಚಿತ್ರೀಕರಿಸಲು ಮುಂದಾದಾಗ ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಹಾಗೂ ಮ್ಯಾನೇಜರ್ ಇಬ್ಬರು ಅವರಿಗೆ ಲಾಠಿಯಿಂದ ಹೊಡೆದು ಹಲ್ಲೆ ಮಾಡಿದ್ದಾರೆ. ಅಲ್ಲದೇ, ಮೊಬೈಲ್ ಕಿತ್ತುಕೊಂಡು ಕಾಲಿನಿಂದ ಎದೆಗೆ ಒದ್ದು ಎಳೆದಾಡಿದ್ದಾರೆ. ಕೊಲೆ ಮಾಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪ್ರಯಾಣಿಕ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ರಾಘವೇಂದ್ರ ನೀಡಿರುವ ದೂರಿನ ಅನ್ವಯ ಡಿಪೋ ಮ್ಯಾನೇಜರ್ ಹಾಗೂ ಭದ್ರತಾ ಸಿಬ್ಬಂದಿ ಸತೀಶ್ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...