ಆಕರ್ಷಕ ಬೆಂಗಳೂರು | ಪ್ರಮುಖ ಶಿಫಾರಸುಗಳನ್ನು ಪರಿಗಣಿಸಿ ಶೀಘ್ರ ಕಾರ್ಯರೂಪಕ್ಕೆ ತರಲಾಗುವುದು: ಜಯರಾಮ್ ರಾಯಪುರ

Date:

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಜನಹಿತ ಅಥವಾ ಆಕರ್ಷಕ ಬೆಂಗಳೂರು ವಿಷಯಾಧಾರಿತವಾಗಿ ಬರುವ ಪ್ರಮುಖ ಶಿಫಾರಸುಗಳನ್ನು ಪರಿಗಣಿಸಿ ಸರ್ಕಾರದ ಗಮನಕ್ಕೆ ತಂದು ಶೀಘ್ರ ಕಾರ್ಯರೂಪಕ್ಕೆ ತರಲಾಗುವುದು ಎಂದು ‘ಆಕರ್ಷಕ ಬೆಂಗಳೂರು’ ನೋಡಲ್ ಅಧಿಕಾರಿ ಜಯರಾಮ್ ರಾಯಪುರ ರವರು ತಿಳಿಸಿದರು.

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಸರ್ಕಾರ ರಚನೆ ಮಾಡಿರುವ ‘ಆಕರ್ಷಕ ಬೆಂಗಳೂರು’ ಕುರಿತಂತೆ ಬುಧವಾರ ಸಮಿತಿಯ ಸಭೆ ನಡೆಯಿತು.

ಈ ವೇಳೆ ಮಾತನಾಡಿದ ಆಕರ್ಷಕ ಬೆಂಗಳೂರಿನ ನೋಡಲ್ ಅಧಿಕಾರಿ ಜಯರಾಮ್ ರಾಯಪುರ ಅವರು, “ಆಕರ್ಷಕ ಬೆಂಗಳೂರು ವಿಷಯದಲ್ಲಿ ಮೇಲುಸೇತುವೆಗಳ ಕೆಳಗಿರುವ ಜಾಗವನ್ನು ಜನರ ಅನುಕೂಲಕ್ಕಾಗಿ ಹೇಗೆ ಬಳಸಿಕೊಳ್ಳಬೇಕು. ರಸ್ತೆ ಬದಿ ಆಸನಗಳ ವ್ಯವಸ್ಥೆ, ನಗರದ ಗೋಡೆಗಳ ಮೇಲೆ ನಗರದ ಸಂಸ್ಕೃತಿಯ ಬಗ್ಗೆ ಕಲಾತ್ಮಕವಾಗಿ ಚಿತ್ರಿಸುವುದು, ಪಾರಂಪರಿಕ ತಾಣಗಳ ಚಿತ್ರಣ, ಬೆಂಗಳೂರು/ಸಾಂಸ್ಕೃತಿಕ ಹಬ್ಬಗಳನ್ನು ಮಾಡುವುದು, ಪಾರಂಪರಿಕ ತಾಣಗಳನ್ನು ಪ್ರದರ್ಶಿಸುವ ಆಂಪಿ–ಥಿಯೇಟರ್‌ಗಳ ನಿರ್ಮಾಣ, ಸಾರ್ವಜನಿಕ ಚರ್ಚೆ/ಸಂವಾದಗಳಿಗೆ ತೆರೆದ ಪ್ರದೇಶಗಳ ಬಳಕೆ, ಜನರ ಓದುವ ಹವ್ಯಾಸವನ್ನು ಹೆಚ್ಚಿಸಲು ಪಾಲಿಕೆಯು ತೆರೆದ ಸಾರ್ವಜನಿಕ ಸ್ಥಳಗಳಲ್ಲಿ ವಾಚನಾಲಯಗಳ ಸಂಖ್ಯೆಯನ್ನು ಹೆಚ್ಚಿಸುವುದು ಸೇರಿದಂತೆ ಇನ್ನಿತರೆ ಆಕರ್ಷಕ ವಿಷಯಗಳ ಕುರಿತು ಶಿಫಾರಸು ನೀಡಬೇಕು” ಎಂದು ಸಭೆಯಲ್ಲಿ ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೆಂಗಳೂರನ್ನು ಆಕರ್ಷಕ ನಗರವನ್ನಾಗಿ ರೂಪಿಸುವ ಸಲುವಾಗಿ ಬರುವಂತಹ ಶಿಫಾರಸುಗಳನ್ನು ಒಂದು ತಿಂಗಳ ಅವಧಿಯಲ್ಲಿ ಪರಿಗಣಿಸಿ, ಕನಿಷ್ಠ 20 ಯೋಜನೆಗಳನ್ನು ನಿಗದಿತ ಸಮಯದೊಳಗಾಗಿ ಅನುಷ್ಠಾನಗೊಳಿಸಲು ಯೋಜನೆ ರೂಪಿಸಿಬೇಕು. ಅದಕ್ಕೆ ಬೇಕಾದಂತಹ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳಬೇಕು” ಎಂದು ಹೇಳಿದರು.

“ಆಕರ್ಷಕ ಬೆಂಗಳೂರನ್ನಾಗಿಸುವ ಸಲುವಾಗಿ ಬರುವಂತಹ ಶಿಫಾರಸುಗಳಲ್ಲಿ ಶಾರ್ಟ್ ಟರ್ಮ್, ಮೀಡಿಯಮ್ ಟರ್ಮ್, ಲಾಂಗ್ ಟರ್ಮ್ ಎಂದು ವಿಂಗಡಿಸಿ ಅದನ್ನು ಇಂತಿಷ್ಟು ದಿನಗಳಲ್ಲಿ ಮುಗಿಸುವ ಯೋಜನೆ ರೂಪಿಸಿಕೊಳ್ಳಬೇಕು. ಈ ಸಂಬಂಧ ಆಕರ್ಷಕ ಬೆಂಗಳೂರಿಗಾಗಿ ರಚಿಸಿರುವ ಪ್ರತ್ಯೇಕ ಸಮಿತಿ ಜತೆಗೆ 2ನೇ ಸಭೆಯನ್ನು ಆಗಸ್ಟ್ 8 ರಂದು ನಿಗಧಿಪಡಿಸಲಾಗಿದೆ. ಆ ಸಭೆಯಲ್ಲಿ ಅಂತಿಮವಾದ ಶಿಫಾರಸುಗಳನ್ನು ಸರ್ಕಾರದ ಮುಂದಿಟ್ಟು, ಅದಕ್ಕೆ ಅನುಮೋದನೆ ಪಡೆದು ಅನುಷ್ಠಾನಕ್ಕೆ ತರಲಾಗುವುದು” ಎಂದು ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಇಬ್ಬರು ಕಳ್ಳರಿಂದ 18 ಮೊಬೈಲ್, 11 ದ್ವಿಚಕ್ರ ವಾಹನ ವಶಪಡಿಸಿಕೊಂಡ ಪೊಲೀಸರು

ಸಭೆಯಲ್ಲಿ ಬಂದಂತಹ ಪ್ರಮುಖ ಶಿಫಾರಸುಗಳು

  • ಬೆಂಗಳೂರಿನ ಪ್ರಮುಖ ಸ್ಥಳಗಳಲ್ಲಿ ನಾಡಪ್ರಭು ಕೆಂಪೇಗೌಡ ಪಾರಂಪರಿಕ ಕಾರಿಡಾರ್ ನಿರ್ಮಿಸುವುದು. ಬೆಂಗಳೂರಿನ ಕೇಂದ್ರ ಭಾಗದಲ್ಲಿ ಪಾರಂಪರಿಕ ಕಾರಿಡಾರ್ ನಿರ್ಮಿಸುವುದು.
  • ಬೆಂಗಳೂರಿನ ಉದ್ಯಮಗಳ ಬಗ್ಗೆ ತಿಳಿಸಲು ವಿಜೃಂಭಣೆಯಿಂದ ಡಿಸೆಂಬರ್ ತಿಂಗಳಲ್ಲಿ 10 ದಿನಗಳ ಬೆಂಗಳೂರು ಹಬ್ಬವನ್ನು ಆಚರಿಸುವುದು. ಅದೇ ರೀತಿಯಲ್ಲಿ ಜೂನ್ ಅಂತ್ಯದಲ್ಲಿ 7 ದಿನಗಳ ಸಾಂಸ್ಕೃತಿಕ ಉತ್ಸವ ನಡೆಸುವುದು. ಬೆಂಗಳೂರಿನಲ್ಲಿ ಮಾರ್ಚ್ ಮೊದಲ ವಾರದಲ್ಲಿ ಹೂ ಹಬ್ಬವನ್ನು ಆಚರಿಸುವುದು.
  • ಜೆ ಸಿ ರಸ್ತೆಯಲ್ಲಿರುವ ಪಾಲಿಕೆ ಸ್ಥಳದಲ್ಲಿ ಕಮರ್ಷಿಯಲ್ ಕಾಂಪ್ಲೆಕ್ಸ್, ಸಭಾಂಗಣ ಹಾಗೂ ಆರ್ಟ್ ಗ್ಯಾಲರಿ ನಿರ್ಮಾಣ ಮಾಡುವುದು.
  • ನಗರದಲ್ಲಿ ಪ್ರಮುಖ ಪಾರಂಪರಿಕ ಕಟ್ಟಡ, ಪರಿಸರ ತಾಣಗಳು, ಪ್ರವಾಸಿ ತಾಣಗಳನ್ನು ಗುರುತಿಸುವುದು ಹಾಗೂ ಇವುಗಳ ಐತಿಹಾಸಿಕತೆಯ ಪರಿಚಯ ಹೇಳುವುದು.
  • ಕೆರೆಗಳ ಹಬ್ಬ, ಪಾರ್ಕ್ ಗಳಲ್ಲಿ ಓಪನ್ ಥಿಯೇಟರ್ ಗಳ ಸಮರ್ಪಕ ಬಳಕೆ, ಥಿಯೇಟರ್ ಹಬ್, ಮಕ್ಕಳಿಗಾಗಿಯೇ ಸಾಂಸ್ಕೃತಿಕ ಹಬ್ ನಿರ್ಮಿಸುವುದು.
  • ಮೇಲುಸೇತುವೆಗಳ ಕೆಳಭಾಗವನ್ನು ನಾನಾ ವಿಷಯಗಳಲ್ಲಿ ಅಭಿವೃದ್ಧಿಪಡಿಸುವುದು.
  • ನಗರದ ವಿವಿಧ ಭಾಗಗಳಲ್ಲಿ ಭಾನುವಾರದಂದು ನಾಲ್ಕು ಫಥಗಳಿರುವ ರಸ್ತೆಯಲ್ಲಿ ಎರಡು ಪಥದಲ್ಲಿ ಮಾತ್ರ ಸಂಚಾರಕ್ಕೆ ಅನುವು ಮಾಡಿಕೊಟ್ಟು, ಮತ್ತೆರಡು ಪಥವನ್ನು ಬ್ಲಾಕ್ ಮಾಡಿ ಸಾರ್ವಜನಿಕರಿಂದ ಸಮುದಾಯ ಕಾರ್ಯಕ್ರಮಗಳು/ವಿವಿಧ ಚಟುವಟಿಕೆಗಳನ್ನು ಮಾಡಲು ಅನುವು ಮಾಡುವುದು.

ಸಭೆಯಲ್ಲಿ ಸಮಿತಿಯಲ್ಲಿರುವ ನಗರ ಯೋಜಕರಾದ ನರೇಶ್ ನರಸಿಂಹನ್, ಸಾಮಾಜ ಸೇವಕರಾದ ರಘುನಂದನ್ ರಾಮಣ್ಣ, ತಂತ್ರಜ್ಞಾನರಾದ ಪ್ರಶಾಂತ್ ಪ್ರಕಾಶ್, ಕಲಾ ವಿನ್ಯಾಸಕ ಮತ್ತು ಪಾರಂಪರಿಕ ತಜ್ಞರಾದ ಕೃಷ್ಣಕುಮಾರ್, ಸಾಹಿತಿಯಾದ ಕೆ.ವೈ. ನಾರಾಯಣಸ್ವಾಮಿ, ಕಲಾವಿದರಾದ ಶಶಿಧರ ಭರಿಘಾಟ್, ನಗರ ತಜ್ಞರಾದ ಬಿ. ರವಿಚಂದ್ರನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...