ಬಕ್ರೀದ್ ಹಬ್ಬ | ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಪ್ರಾಣಿವಧೆ ನಿಷೇಧ

Date:

  • ಅಧಿಕೃತ ಕಸಾಯಿಖಾನೆಗಳಲ್ಲಿ ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳ ವಧೆಗೆ ಅವಕಾಶ
  • ಪ್ರಾಣಿ ಬಲಿ ತಡೆ ಕಾಯ್ದೆ 1959ರ ಸೆಕ್ಷನ್ 3ರ ಪ್ರಕಾರ ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ

ಜೂನ್ 29ರಂದು ಬಕ್ರೀದ್ ಹಬ್ಬದ ಹಿನ್ನೆಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ರಸ್ತೆಗಳು, ಪಾದಚಾರಿ ಮಾರ್ಗಗಳು ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಅನಧಿಕೃತ ಪ್ರಾಣಿವಧೆ ಮತ್ತು ಬಲಿ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪಾಲಿಕೆ ತಿಳಿಸಿದೆ.

ಬಕ್ರೀದ್ ಹಬ್ಬ ಆಚರಣೆ/ಧಾರ್ಮಿಕ ಚಟುವಟಿಕೆ ಸಂದರ್ಭಗಳಲ್ಲಿ ಹಾಗೂ ಜಾತ್ರೆ ಮತ್ತು ಹಬ್ಬ ಹರಿದಿನಗಳಲ್ಲಿ ಪ್ರಾಣಿವಧೆ ಮತ್ತು ಬಲಿ ಮಾಡುವ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಆಸ್ಪತ್ರೆ ಆವರಣಗಳು, ನರ್ಸಿಂಗ್ ಹೋಂ ಒಳ ಮತ್ತು ಹೊರ ಆವರಣಗಳು, ಶಾಲೆ ಕಾಲೇಜುಗಳ ಒಳ ಮತ್ತು ಹೊರ ಆವರಣಗಳು, ಆಟದ ಮೈದಾನಗಳಲ್ಲಿ, ದೇವಸ್ಥಾನಗಳು/ಮಸೀದಿಗಳು ಹಾಗೂ ಇತರೆ ಧಾರ್ಮಿಕ ಸ್ಥಳಗಳ ಆವರಣಗಳಲ್ಲಿ, ಉದ್ಯಾನವನಗಳ ಒಳಗೆ ಮತ್ತು ಹೊರಗೆ ಅಥವಾ ಇನ್ಯಾವುದೇ ಸ್ಥಳಗಳಲ್ಲಿ ಪ್ರಾಣಿವಧೆ ಮತ್ತು ಬಲಿ ಮಾಡುವುದನ್ನು ಬಿಬಿಎಂಪಿ ನೀಷೇಧಿಸಿದೆ.

  • ಪಾಲಿಕೆ ಅಧಿನಿಯಮ 2020ರ ಪ್ರಕಾರ ಅನಧಿಕೃತವಾಗಿ ಪ್ರಾಣಿವಧೆ ನಿರ್ಭಂಧಿಸಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು.
  • ಕರ್ನಾಟಕ ರಾಜ್ಯ ಪ್ರಾಣಿ ಬಲಿ ತಡೆ ಕಾಯ್ದೆ 1959ರ ಸೆಕ್ಷನ್ 3ರ ಪ್ರಕಾರ ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧವಾಗಿದ್ದು, ಅಂಥವರಿಗೆ ಆರು ತಿಂಗಳ ಸಜೆ ಅಥವಾ ದಂಡ ಎರಡೂ ವಿಧಿಸಬಹುದಾಗಿದೆ.
  • ಸಾರ್ವಜನಿಕರು ಪ್ರಾಣಿವಧೆ ಕಾಯ್ದೆಯ ಪ್ರಕಾರ ವಧೆಗೆ ಅರ್ಹವಾದ ಮತ್ತು ಆಹಾರಕ್ಕೆ ಯೋಗ್ಯವಾದ ಪ್ರಾಣಿಗಳನ್ನು ಅಧಿಕೃತ ಕಸಾಯಿಖಾನೆಗಳಲ್ಲಿ ಮಾತ್ರ ವಧೆ ಮಾಡಲು ಅವಕಾಶವಿರುತ್ತದೆ.
  • ಭಾರತೀಯ ದಂಡ ಸಂಹಿತೆ(IPC) ಸೆಕ್ಷನ್ 429ರ ಪ್ರಕಾರ ಯಾವುದೇ ಪ್ರಾಣಿಗಳನ್ನು ಅನಧಿಕೃತವಾಗಿ ಕೊಂದರೆ 5 ವರ್ಷ ಜೈಲು ಶಿಕ್ಷೆ ಇದೆ ಎಂದು ಹೇಳಿದೆ.

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರಂತೆ ಯಾವುದೇ ವಯಸ್ಸಿನ ದನ, ಆಕಳು, ಎತ್ತು ಹೋರಿ, ಕರುಗಳನ್ನು ಬಲಿ/ಕುರ್ಬಾನಿ/ವಧೆ ಕೊಡುವುದನ್ನು ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಲಿ/ ಕುರ್ಬಾನಿ/ ವಧೆಗಾಗಿ ಯಾವುದೇ ವಯಸ್ಸಿನ ದನ, ಆಕಳು, ಎತ್ತು, ಹೋರಿ, ಕರುಗಳನ್ನು ಸಾಗಾಟ ಮಾಡುವುದೂ ಸಹ ಶಿಕ್ಷಾರ್ಹ ಅಪರಾಧವಾಗಿದೆ. ಸಾರ್ವಜನಿಕರು ಈ ಬಗ್ಗೆ ಎಲ್ಲ ರೀತಿಯ ಸಹಕಾರ ನೀಡುವಂತೆ ಕೋರಲಾಗಿದೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | 2ನೇ ಹಂತದ ನಿರ್ಮಾಣಕ್ಕೆ ₹3,045 ಕೋಟಿ ನೆರವು ನೀಡಲು ಆರ್‌ಇಸಿ ಒಪ್ಪಿಗೆ

ಜತೆಗೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಸಹಾಯವಾಣಿ ಸಂಖ್ಯೆ 8277100200ಗೆ ಕರೆ ಮಾಡಿ ದೂರು/ಮಾಹಿತಿ ನೀಡಬಹುದಾಗಿದೆ ಎಂದು ಪಶುಪಾಲನಾ ವಿಭಾಗದ ಜಂಟಿ ನಿರ್ದೇಶಕರಾದ ಡಾ. ಕೆ.ಪಿ ರವಿಕುಮಾರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...