ಜನರ ಬೆಂಬಲದಿಂದ ಬಂದ್ ಸಂಪೂರ್ಣ ಯಶಸ್ವಿ: ಮುಖ್ಯಮಂತ್ರಿ ಚಂದ್ರು

Date:

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಕರೆ ನೀಡಿದ್ದ ಬೆಂಗಳೂರು ಬಂದ್ ಸಂಪೂರ್ಣವಾಗಿ ಯಶಸ್ವಿಯಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ನಗರದ ಪ್ರೆಸ್‌ ಕ್ಲಬ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಯಾವುದೇ ಹಾನಿಯನ್ನು ಮಾಡದೇ ಶಾಂತಿಯುತವಾಗಿ ಬಂದ್ ಆಗಿದೆ. ಜನ ಸಂಪೂರ್ಣ ಸಹಕಾರ, ಬೆಂಬಲ ಕೊಟ್ಟರು. ಬಂದ್ ಹಿಂದಿನ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ವತಃ ನನಗೆ ಮತ್ತು ಕುರುಬೂರು ಶಾಂತಕುಮಾರ್ ಅವರಿಗೆ ಕರೆ ಮಾಡಿ, ಮೈಸೂರಿನಲ್ಲಿ ತುರ್ತು ಕಾರ್ಯಕ್ರಮ ಇರುವುದರಿಂದ ಜವಾಬ್ದಾರಿಯುತ ವ್ಯಕ್ತಿಯನ್ನು ಮನವಿ ಸ್ವೀಕರಿಸಲು ಕಳುಹಿಸುತ್ತೇನೆ. ಬಂದ ತಕ್ಷಣ ನಿಮ್ಮನ್ನು ಭೇಟಿಯಾಗುತ್ತೇನೆ ಎಂದಿದ್ದರು” ಎಂದು ಅವರು ಹೇಳಿದರು.

ತಮಿಳರನ್ನು ನೋಡಿ ಕಲಿಯಬೇಕು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಮೂಲತಃ ರೈತ, ನಂತರ ಸಿನಿಮಾ ಕಲಾವಿದ, ಈಗ ಒಂದು ಪಕ್ಷದ ಅಧ್ಯಕ್ಷನಾಗಿದ್ದರೂ, ಮೊದಲಿನಿಂದಲೂ ನಾಡು, ನುಡಿ, ನೀರಿಗಾಗಿ ಕಲಾವಿದರನ್ನು ಸೇರಿಸಿ ಹೋರಾಟ ಮಾಡಿದ್ದೇನೆ. ನಾಡಿಗೆ, ಭಾಷೆಗೆ, ನೀರಿಗೆ, ಗಡಿಗೆ ತೊಂದರೆಯಾದಾಗ ಪಕ್ಷಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುವುದನ್ನು ತಮಿಳು ಭಾಷಿಕರನ್ನು ನೋಡಿ ಕಲಿಯಬೇಕು” ಎಂದು ಹೇಳಿದರು.

“ಸುಪ್ರೀಂಕೋರ್ಟ್ ಕಾವೇರಿ ನೀರು ಹಂಚಿಕೆ ಬಗ್ಗೆ ತೀರ್ಪು ಕೊಡುವುದು ಇದ್ದಾಗ, ರಾಜ್ಯದಲ್ಲಿ ಬಂದ್ ಮಾಡಿದರೆ, ಇಲ್ಲಿನ ಸಮಸ್ಯೆ ಬಗ್ಗೆ ಅವರಿಗೂ ಸಂದೇಶ ಹೋಗಲಿದೆ. ನೀರು ಬಿಡಲು ಸೂಚನೆ ಕೊಟ್ಟರೆ ಅಶಾಂತಿ ಉಂಟಾಗಬಹುದು ಎಂದು ಚಿಂತನೆ ಮಾಡುತ್ತಾರೆ ಎನ್ನುವ ಉದ್ದೇಶದಿಂದ ತುರ್ತಾಗಿ ಬಂದ್ ಮಾಡಿದ್ದೇವೆ” ಎಂದು ಸ್ಪಷ್ಟಪಡಿಸಿದರು.

“ಕಾವೇರಿ ನೀರಿಗಾಗಿ ಮಾತ್ರವಲ್ಲ ರಾಜ್ಯದ ಯಾವುದೇ ಭಾಗದಲ್ಲಿ ನಾಡು, ನುಡಿ, ಗಡಿ, ರೈತರಿಗೆ ಸಮಸ್ಯೆಯಾದಾಗ ಹೋರಾಟ ಮಾಡುತ್ತೇವೆ. ಮಹದಾಯಿ, ಕೃಷ್ಣ, ತುಂಗಭದ್ರಾ ಹೋರಾಟದಲ್ಲೂ ಭಾಗವಹಿಸುತ್ತೇವೆ” ಎಂದು ಅವರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಜೆಡಿಎಸ್ ಯಾವತ್ತಿಗೂ ಬದ್ಧ: ಎಚ್.ಡಿ ದೇವೇಗೌಡ

ಜನರ ಹೋರಾಟಕ್ಕೆ ಜಯ ಸಿಕ್ಕಿದೆ

ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, “ತಮಿಳುನಾಡು ಸರ್ಕಾರ 12,500 ಕ್ಯೂಸೆಕ್ ನೀರು ಬಿಡುವಂತೆ ಮನವಿ ಮಾಡಿದ್ದರು. ಆದರೆ, ಈ ಮನವಿಯನ್ನು ತಿರಸ್ಕರಿಸಿ ನೀರು ಬಿಡುವ ಪ್ರಮಾಣವನ್ನು 3000 ಕ್ಯೂಸೆಕ್‌ಗೆ ಇಳಿಸಲಾಗಿದೆ. ಇದಕ್ಕೆ ಬೆಂಗಳೂರು ಬಂದ್ ಮಾಡಿದ್ದು ಮತ್ತು ಬೆಂಗಳೂರು ಜನ ನೀಡಿದ ಬೆಂಬಲ ಕಾರಣ, ಬೆಂಗಳೂರು ಬಂದ್ ಯಶಸ್ವಿಯಾಗಿದೆ. ಜನರ ಹೋರಾಟಕ್ಕೆ ಜಯ ಸಿಕ್ಕಿದೆ” ಎಂದು ಅವರು ಹೇಳಿದರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...