ಬೆಂಗಳೂರು | ಮ್ಯಾಟ್ರೀಮೋನಿಯಲ್ಲಿ ಪರಿಚಯವಾದ ಯುವತಿಯಿಂದ ಟೆಕ್ಕಿಗೆ ₹1.14 ಕೋಟಿ ವಂಚನೆ

Date:

  • ಹಣ ವಸೂಲಿ ಮಾಡುವ ಉದ್ದೇಶದಿಂದ ನಕಲಿ ಹೆಸರಿನ ಪ್ರೊಫೈಲ್ ಸೃಷ್ಟಿಸಿದ್ದ ಯುವತಿ
  • ಕೆಲ ದಿನಗಳ ಮಟ್ಟಿಗೆ ವಿಶೇಷ ತರಬೇತಿಗಾಗಿ ಬೆಂಗಳೂರಿಗೆ ಬಂದಿದ್ದ ಟೆಕ್ಕಿ

ದಿನಕಳೆದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಂಚನೆ ಪ್ರಕರಣಗಳು ವರದಿಯಾಗುತ್ತಿವೆ. ಇದೀಗ ಮ್ಯಾಟ್ರೀಮೋನಿಯಲ್ಲಿ ಪರಿಚಯವಾದ ಯುವತಿಯೊಬ್ಬಳು ಬೆಂಗಳೂರು ಟೆಕ್ಕಿಗೆ ಬ್ಲ್ಯಾಕ್‌ಮೇಲ್ ಮಾಡಿ ಬರೋಬ್ಬರಿ ₹1.14 ಕೋಟಿ ದೋಚಿದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಮನೀಶ್ (41) (ಹೆಸರು ಬದಲಾಯಿಸಲಾಗಿದೆ) ಎಂಬ ವ್ಯಕ್ತಿ, ಬೆಂಗಳೂರಿನ ಕೆ.ಆರ್.ಪುರ ನಿವಾಸಿ. ಇವರು ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಅವರು ಯುನೈಟೆಡ್ ಕಿಂಗ್ ಡಮ್ ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಕೆಲ ದಿನಗಳ ಮಟ್ಟಿಗೆ ವಿಶೇಷ ತರಬೇತಿಗಾಗಿ ಬೆಂಗಳೂರಿಗೆ ಬಂದಿದ್ದರು.

ಇದೇ ವೇಳೆ, ಮನೆಯಲ್ಲಿ ಮನೀಶ್ ಅವರಿಗೆ ಮದುವೆ ಮಾಡಲು ಹೆಣ್ಣು ಹುಡುಕಾಟ ಆರಂಭಿಸಿದ್ದರು. ಹೀಗಾಗಿ, ಅವರು ಮ್ಯಾಟ್ರಿಮೋನಿಯ ವೆಬ್ ಸೈಟ್‌ವೊಂದರಲ್ಲಿ ವಿವರಗಳೊಂದಿಗೆ ಪ್ರೊಫೈಲ್ ಕ್ರಿಯೇಟ್ ಮಾಡಿಕೊಂಡಿದ್ದರು. ಈ ಸಮಯದಲ್ಲಿ ಮ್ಯಾಟ್ರೀಮೋನಿಯಲ್ಲಿ ಓರ್ವ ಯುವತಿ ಪರಿಚಯವಾಗಿತ್ತು. ಇಬ್ಬರು ಮೊಬೈಲ್ ಸಂಖ್ಯೆಗಳನ್ನು ವಿನಿಮಯ ಮಾಡಿಕೊಂಡು, ಮಾತನಾಡಲು ಪ್ರಾರಂಭಿಸಿದ್ದರು. ಇಬ್ಬರು ಕೂಡ ಮದುವೆ ಮಾಡಿಕೊಳ್ಳಲು ನಿರ್ಧರಿಸಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವತಿ ಹಾಗೂ ಮನೀಶ್ ಇಬ್ಬರೂ ಎಂದಿಗೂ ವೈಯಕ್ತಿಕವಾಗಿ ಭೇಟಿಯಾಗಿಲ್ಲ. ಯುವತಿ ತಾನು ತನ್ನ ತಾಯಿಯೊಂದಿಗೆ ವಾಸಿಸುತ್ತಿರುವುದಾಗಿ ಮತ್ತು ತನ್ನ ತಂದೆ ಬದುಕಿಲ್ಲ ಎಂದು ಹೇಳಿಕೊಂಡಿದ್ದಾಳೆ. ಮದುವೆ ಮಾಡಿಕೊಳ್ಳುವುದಾಗಿ ಯುವತಿ ಮನೀಶ್‌ಗೆ ತಿಳಿಸಿದ್ದಾಳೆ.

ಜುಲೈ 2ರಂದು ಯುವತಿ ತನ್ನ ತಾಯಿಯ ಆರೋಗ್ಯ ಸಮಸ್ಯೆ ಹೇಳಿ ಮನೀಶ್‌ನಿಂದ ₹1,500 ಸಾಲ ಪಡೆದಿದ್ದಳು. ಬಳಿಕ, ಜುಲೈ 4ರಂದು ಮನೀಶ್‌ನೊಂದಿಗೆ ವಿಡಿಯೊ ಕಾಲ್‌ನಲ್ಲಿ ಮಾತಾಡುತ್ತಿರುವಾಗ ಯುವತಿ ವಿವಸ್ತ್ರಗೊಂಡು ಮನೀಶ್‌ಗೆ ತಿಳಿಸದೆ ಕರೆಯನ್ನು ರೆಕಾರ್ಡ್ ಮಾಡಿದ್ದಳು.

ಬಳಿಕ ಯುವತಿ ಕರೆ ಮಾಡಿ ಹಣವನ್ನು ನೀಡದಿದ್ದರೆ ಈ ವಿಡಿಯೊ ಕ್ಲಿಪ್ ಅನ್ನು ನಿನ್ನ ತಂದೆ-ತಾಯಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ನಂತರ ಮನೀಶ್ ₹1,14,00,000 ಕೋಟಿ ಹಣವನ್ನು ಯುವತಿ ಹೇಳಿದ ಎರಡು ವಿಭಿನ್ನ ಬ್ಯಾಂಕ್ ಖಾತೆಗಳಿಗೆ ಮತ್ತು ನಾಲ್ಕು ಫೋನ್ ಸಂಖ್ಯೆಗಳಿಗೆ ಹಣವನ್ನು ಕಳುಹಿಸಿದ್ದಾರೆ.

ಹಣವನ್ನು ಠೇವಣಿ ಮಾಡಿದ ನಂತರವೇ ಮಹಿಳೆಯ ನಿಜವಾದ ಹೆಸರು ಟೆಕ್ಕಿಗೆ ತಿಳಿದಿದೆ. ಆಕೆ ಹೆಚ್ಚಿನ ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುವುದನ್ನು ಮುಂದುವರಿಸಿದಾಗ ಮನೀಶ್ ಪೊಲೀಸರನ್ನು ಸಂಪರ್ಕಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ರಾಜ್ಯಪಾಲರನ್ನು ಬಿಟ್ಟು ಹಾರಿದ ವಿಮಾನ; ಇಬ್ಬರು ಏರ್ ಏಶಿಯಾ ಸಿಬ್ಬಂದಿ ಅಮಾನತು

ಜನರಿಂದ ಹಣ ವಸೂಲಿ ಮಾಡುವ ಉದ್ದೇಶದಿಂದ ಯುವತಿ ನಕಲಿ ಹೆಸರಿನ ಪ್ರೊಫೈಲ್ ಸೃಷ್ಟಿಸಿರಬೇಕು. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ತನಿಖೆ ಕೈಗೆತ್ತಿಕೊಂಡ ಬಳಿಕ ಯುವತಿಗೆ ವರ್ಗಾವಣೆ ಮಾಡಿದ ಹಣದಲ್ಲಿ ಸುಮಾರು ₹84 ಲಕ್ಷ ಹಣವನ್ನು ಫ್ರೀಜ್ ಮಾಡಲಾಗಿದೆ. ಮಹಿಳೆ ಈಗಾಗಲೇ 30 ಲಕ್ಷ ಬಳಸಿರಬಹುದು. ಇಂಥ ಕರೆಗಳು ಬಂದಾಗ ಸಾರ್ವಜನಿಕರು ತಕ್ಷಣ ಕರೆಯನ್ನು ಕಟ್ ಮಾಡಬೇಕು. ಕೂಡಲೇ ಪೊಲೀಸರ ಗಮನಕ್ಕೆ ತರಬೇಕು” ಡಿಸಿಪಿ (ವೈಟ್‌ಫೀಲ್ಡ್) ಎಸ್ ಗಿರೀಶ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...