ಬೆಂಗಳೂರು | ಕಳೆದ 11 ದಿನದಲ್ಲಿ 178 ಡೆಂಗ್ಯೂ ಪ್ರಕರಣ ವರದಿ

Date:

  • ರಕ್ತ ಪರೀಕ್ಷೆ ಮಾಡಿದ 1009 ಜನರ ಪೈಕಿ 905 ಜನರಲ್ಲಿ ಡೆಂಗ್ಯೂ ದೃಢ
  • ಡೆಂಗ್ಯೂ ಜ್ವರದಿಂದ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ

ರಾಜ್ಯದಲ್ಲಿ ಮುಂಗಾರು ಮಳೆ ಈಗ ಚುರುಕುಗೊಂಡಿದ್ದು, ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಕಳೆದ 11 ದಿನದಲ್ಲಿ ಬರೋಬ್ಬರಿ 178 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಮಳೆಯ ಜತೆಗೆ ತಂಪಾದ ವಾತಾವರಣ ಇದ್ದು, ಹಲವಾರು ಜನಕ್ಕೆ ಜ್ವರ, ಶೀತ, ನೆಗಡಿಯಂತಹ ಕಾಯಿಲೆಗಳು ಬಂದಿವೆ. ಈ ವರ್ಷ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 3,565 ಡೆಂಗ್ಯೂ ಶಂಕಿತರ ಗುರುತು ಪತ್ತೆಯಾಗಿದೆ. ಈ ಪೈಕಿ 1,009 ಜನರ ರಕ್ತದ ಮಾದರಿ ಪರೀಕ್ಷೆಗೆ ರವಾನೆ ಮಾಡಲಾಗಿದೆ. ರಕ್ತ ಪರೀಕ್ಷೆಗೆ ರವಾನೆ ಮಾಡಿದ 1,009 ಜನರ ಪೈಕಿ 905 ಜನರಲ್ಲಿ ಡೆಂಗ್ಯೂ ಸೋಂಕು ದೃಢವಾಗಿದೆ.

ನಗರದಲ್ಲಿ ಇಲ್ಲಿಯವರೆಗೆ 919 ಡೆಂಗಿ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಡೆಂಗ್ಯೂ ಜ್ವರದಿಂದ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. 2022ರಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ 585 ಡೆಂಗ್ಯೂ ಪ್ರಕರಣ ಪತ್ತೆಯಾಗಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜ್ವರ, ತಲೆನೋವು, ಮೈಕೈ ನೋವು, ಕೀಲು ನೋವು, ವಾಕರಿಕೆ, ಕಣ್ಣುಗಳ ಹಿಂಭಾಗದಲ್ಲಿ ನೋವು, ಊದಿಕೊಂಡಿರುವ ಗ್ರಂಥಿಗಳು, ಚರ್ಮದ ಭಾಗದಲ್ಲಿ ದದ್ದುಗಳು, ಸುಸ್ತು, ಶೀತ, ಗಂಟಲು ನೋವು, ಹೊಟ್ಟೆನೋವು ಕಾಣಿಸಿಕೊಳ್ಳುವುದು ಡೆಂಗ್ಯೂ ರೋಗದ ಲಕ್ಷಣಗಳಾಗಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಸ್ತೆಯಲ್ಲಿ ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ ಗಾಜು ಒಡೆದ ಕಿಡಿಗೇಡಿಗಳು

ಡೆಂಗ್ಯೂ ತಡೆಗಟ್ಟಲು ಬೆಳಗಿನ ಸಮಯದಲ್ಲಿ ಸೊಳ್ಳೆಗಳು ಕಚ್ಚದಂತೆ ಎಚ್ಚರವಹಿಸಬೇಕು. ನೀರಿನ ತೊಟ್ಟಿಗಳನ್ನು ಶುಚಿಗೊಳಿಸಬೇಕು. ಮನೆಯ ಸುತ್ತಮುತ್ತಲ ಪ್ರದೇಶಗಳನ್ನು ಶುಚಿಯಾಗಿಟ್ಟುಕೊಳ್ಳಬೇಕು. ನಿತ್ಯ ಬಿಸಿನೀರು ಕುಡಿಯಬೇಕು. ಸೊಳ್ಳೆ ನಾಶಕ ಔಷಧಿಗಳನ್ನು ಮನೆಯ ಸುತ್ತ ಸಿಂಪಡಿಸಬೇಕು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...