ಬೆಂಗಳೂರು | ವರ್ಷಾಂತ್ಯಕ್ಕೆ ರಸ್ತೆಗಿಳಿಯಲಿವೆ 1,900 ಬಿಎಂಟಿಸಿ ಬಸ್‌ಗಳು

Date:

  • 1900 ಬಸ್‌ಗಳ ಪೈಕಿ 921 ಎಲೆಕ್ಟ್ರಿಕ್ ಬಸ್‌
  • ಅಧಿಕೃತ ನೋಂದಣಿ ಬಳಿಕ ಸಾರ್ವಜನಿಕ ಸೇವೆಗೆ ಬಸ್‌

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈ ವರ್ಷದ ಅಂತ್ಯದ ವೇಳೆಗೆ ಸುಮಾರು 1,900 ಬಸ್‌ಗಳನ್ನು ರಸ್ತೆಗೆ ಇಳಿಸಲು ನಿರ್ಧರಿಸಿದೆ.

1900 ಬಸ್‌ಗಳ ಪೈಕಿ 921 ಎಲೆಕ್ಟ್ರಿಕ್ ಬಸ್‌ಗಳಾಗಿವೆ. ಪ್ರತಿ ತಿಂಗಳು 100 ಬಸ್‌ಗಳಂತೆ ಬಿಎಂಟಿಸಿಗೆ ಸೇರ್ಪಡೆಯಾಗಲಿವೆ. ಜುಲೈ ಅಂತ್ಯದ ವೇಳೆಗೆ ನೂರು ಹೊಸ ಬಸ್‌ಗಳು ನಗರದ ರಸ್ತೆಗೆ ಇಳಿಯಲಿವೆ.

ಈಗಾಗಲೇ ಟಾಟಾ ಮೋಟರ್ಸ್‌ ಸಬ್ಸಿಡರಿ ಸಂಸ್ಥೆಯಾದ ಟಿಎಂಎಲ್‌ ಸ್ಮಾರ್ಟ್‌ ಮೊಬಿಲಿಟಿ ಸಲ್ಯೂಷನ್ ಸಂಸ್ಥೆಯು 921 ಬಸ್‌ಗಳನ್ನು ಬಿಎಂಟಿಸಿಗೆ ನೀಡುವ ಗುತ್ತಿಗೆ ತೆಗೆದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

921 ಬಸ್‌ಗಳ ಪೈಕಿ ಈಗಾಗಲೇ 1 ಬಸ್‌ ಬಿಎಂಟಿಸಿ ಬಳಿಯಿದೆ. ಇನ್ನೂ ಅಧಿಕೃತ ನೋಂದಣಿ ಕಾರ್ಯ ಮುಗಿದ ಬಳಿಕ ಈ ಬಸ್‌ಗಳು ಸಾರ್ವಜನಿಕ ಸೇವೆಗೆ ಲಭ್ಯವಾಗಲಿವೆ.

“ಇ-ಬಸ್‌ಗಳನ್ನು ಪ್ರತಿ ಕಿಲೋಮೀಟರ್‌ಗೆ ₹41 ವೆಚ್ಚದಲ್ಲಿ ಖರೀದಿಸಲಾಗಿದೆ. ಕಂಪನಿಯಿಂದ ಚಾಲಕರ ಜೊತೆಗೆ ಬಸ್‌ಗಳನ್ನು ಬಾಡಿಗೆಗೆ ತೆಗೆದುಕೊಳ್ಳುತ್ತಿದೆ. ಚಾಲಕರು ಮತ್ತು ಬಸ್‌ಗಳ ನಿರ್ವಹಣೆ ಗುತ್ತಿಗೆದಾರರ ಜವಾಬ್ದಾರಿಯಾಗಿದೆ. ಬಿಎಂಟಿಸಿ ಮಾರ್ಗಗಳನ್ನು ನೋಡಿಕೊಳ್ಳುತ್ತದೆ ಹಾಗೂ ನಿರ್ವಾಹಕರನ್ನು ಒದಗಿಸುತ್ತದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಿಸಿಬಿ ದಾಳಿ ಬಳಿಕ ಇ-ಸಿಗರೇಟ್ ಮಾರಾಟ ಮಳಿಗೆಗೆ ಸೀಲ್

“ಈ ಬಸ್‌ಗಳು ಪ್ರಯಾಣಿಕರಿಗೆ ಉತ್ತಮ ಅನುಭವ ನೀಡಲಿವೆ. ನೆಲ ಮಟ್ಟದಿಂದ ಸ್ವಲ್ಪ ಮೇಲೆ ಈ ಬಸ್‌ಗಳು ಇರಲಿದ್ದು, ಬಸ್‌ನ ಅಡಿ ದ್ವಿಚಕ್ರ ವಾಹನ ಸವಾರರು ಸೇರಿದಂತೆ ಪಾದಚಾರಿಗಳು ಸಿಲುಕಲು ಸಾಧ್ಯವಿಲ್ಲ. ಅಂಗವಿಕಲರು ಸೇರಿದಂತೆ ಪ್ರಯಾಣಿಕರು ಆರಾಮವಾಗಿ ಬಸ್‌ ಹತ್ತಿ ಇಳಿಯಬಹುದು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...