ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಮತ್ತಿಬ್ಬರ ಬಂಧನ

Date:

20 ದಿನದ ಹಸುಗೂಸನ್ನು ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ರಮ್ಯಾ ಮತ್ತು ಕೆವಿನ್ ಬಂಧಿತರು. ರಾಜಾಜಿನಗರದಲ್ಲಿ ನಕಲಿ ವೈದ್ಯ ಕೆವಿನ್‌ ಹಾಗೂ ಹಸುಗೂಸು ಮಾರಾಟ ದಂಧೆಯ ಮಧ್ಯವರ್ತಿ ರಮ್ಯಳನ್ನು ಸಿಸಿಬಿ ಪೊಲೀಸರು ಹೆಬ್ಬಾಳದಲ್ಲಿ ಬಂಧಿಸಿದ್ದಾರೆ.

ಹಸುಗೂಸು ಮಾರಾಟ ದಂಧೆಯ ಮಧ್ಯವರ್ತಿ ರಮ್ಯಳ ಸಂಬಂಧಿಯೊಬ್ಬಳು ಮದುವೆ ಆಗುವುದಕ್ಕೂ ಮುಂಚೆಯೇ ಗರ್ಭಿಣಿಯಾಗಿದ್ದರು. ಯುವತಿ ಮಗುವನ್ನು ತೆಗೆಸಲು ಓಡಾಡುತ್ತಿರುವುದರ ಬಗ್ಗೆ ತಿಳಿದ ರಮ್ಯ, ಸ್ವತಃ ತಾನೇ ಆ ಯುವತಿಯನ್ನು ಒಂಬತ್ತು ತಿಂಗಳ ಕಾಲ ಆರೈಕೆ ಮಾಡಿದ್ದಾಳೆ. ಬಳಿಕ ಯುವತಿಗೆ ಮದುವೆ ಮಾಡಿಸಿ, ಹಣ ಕೂಡ ನೀಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವಜಾತ ಶಿಶುವನ್ನು ತೆಗೆದುಕೊಂಡ ರಮ್ಯ ತನ್ನ ಗ್ಯಾಂಗ್‌ ಜತೆಗೆ ಸೇರಿಕೊಂಡು ಶಿಶುವನ್ನು ಮಾರಾಟ ಮಾಡಲು ಯತ್ನಿಸಿದ್ದಾಳೆ.

ನವಜಾತ ಶಿಶುವಿನ ಮಾರಾಟದ ಬಗ್ಗೆ ಸುಳಿವು ಪಡೆದ ಸಿಸಿಬಿ ಪೊಲೀಸರು ಈ ಸಂಬಂಧ ವಿಶೇಷ ಕಾರ್ಯಾಚರಣೆ ನಡೆಸಿ ತಮಿಳುನಾಡಿನ ಈರೋಡ್‌ ಮೂಲದ ಮುರುಗೇಶ್ವರಿ(22) ಪರಿಚಯಸ್ಥರಾದ ಕಣ್ಣನ್ ರಾಮಸ್ವಾಮಿ(51), ಹೇಮಲತಾ (27), ಶರಣ್ಯಾ (33) ಎಂಬವರನ್ನು ಆರ್‌.ಆರ್‌.ನಗರದ ರಾಜರಾಜೇಶ್ವರಿ ದೇವಸ್ಥಾನದ ಬಳಿ ಬಂಧಿಸಿದ್ದಾರೆ. ಇವರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದಾಗ ರಮ್ಯ ಹೆಸರನ್ನು ಬಾಯಿಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡು ಮತ್ತು ಕರ್ನಾಟಕದಲ್ಲಿ ಸಕ್ರಿಯವಾಗಿದ್ದ ನವಜಾತಶಿಶು ಅಕ್ರಮ‌ ಮಾರಾಟ ಜಾಲವನ್ನು ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದ ತಂಡ ಭೇದಿಸಿದೆ. ಇದೀಗ ಈ ಪ್ರಕರಣದಲ್ಲಿ ಒಟ್ಟಾರೆಯಾಗಿ 11 ಆರೋಪಿಗಳನ್ನು ಬಂಧಿಸಲಾಗಿದೆ. ಸದ್ಯ ಈ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು ಅನೇಕ ವಿಚಾರಗಳು ಬಯಲಾಗುತ್ತಿವೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಬಂಧಿತರಾಗಿದ್ದ ನಾಲ್ವರು ಆರೋಪಿಗಳನ್ನ ಜೈಲಿಂದ ಕಸ್ಟಡಿಗೆ ಪಡೆದುಕೊಳ್ಳಲು ಸಿಸಿಬಿ ತಯಾರಿ ನಡೆಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 20 ದಿನದ ಹಸುಗೂಸು ಮಾರಾಟ; ಸಿಸಿಬಿ ಪೊಲೀಸರ ಕಾರ್ಯಾಚರಣೆ

ಇನ್ನೊಬ್ಬ ಬಂಧಿತ ಆರೋಪಿ ನಕಲಿ ವೈದ್ಯ ಕೆವಿನ್ ಎಂಬಿಬಿಎಸ್‌ ತೇರ್ಗಡೆಯಾಗದೇ, ಕ್ಲಿನಿಕ್ ನಡೆಸುತ್ತಿದ್ದನು ಎಂದು ತಿಳಿದುಬಂದಿದೆ. ಜತೆಗೆ ಹಸುಗೂಸು ಮಾರಾಟಕ್ಕೆ ಡಾಕ್ಯುಮೆಂಟ್​ ಮಾಡಿಕೊಡುತ್ತಿದ್ದನು ಎಂದು ತಿಳಿದುಬಂದಿದೆ.

ಏನಿದು ಘಟನೆ?

ಮಕ್ಕಳಾಗದ ದಂಪತಿಗೆ ಲಕ್ಷಗಟ್ಟಲೆ ಹಣ ಪಡೆದು 20 ದಿನದ ಗಂಡು ಮಗುವನ್ನು ಮಾರಾಟ ಮಾಡಲು ಆರೋಪಿಗಳು ಕಳೆದ ಶುಕ್ರವಾರ ಬೆಂಗಳೂರಿನ ರಾಜರಾಜೇಶ್ವರಿ ನಗರಕ್ಕೆ ರೆಡ್ ಕಲರ್ ಶಿಫ್ಟ್ ಕಾರಿನಲ್ಲಿ ಬಂದಿದ್ದರು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ರೆಡ್ ಹ್ಯಾಂಡ್‌ ಆಗಿ ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...