ಬೆಂಗಳೂರು | ಬಿಎಂಟಿಸಿ ಬಸ್‌ಗೆ 21 ವರ್ಷದ ಗೃಹಿಣಿ ಬಲಿ

Date:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಂಚಾರ ನಿಯಮ ಉಲ್ಲಂಘನೆ, ಅಪಘಾತಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಮುಂದಾಗಿದೆ. ಪೊಲೀಸ್‌ ಇಲಾಖೆಯ ಪೊಲೀಸ್‌ ಟ್ರಾಫಿಕ್‌ ಕಮಾಂಡ್‌ ಸೆಂಟರ್‌ ಸಹಯೋಗದಲ್ಲಿ ತನ್ನ ಚಾಲನಾ ಸಿಬ್ಬಂದಿಗಳಿಗೆ ಡಿಸೆಂಬರ್ 30ರವರೆಗೆ ಸಂಚಾರ ನಿಯಮ ಪಾಲನೆ ತರಬೇತಿ ನಡೆಸುತ್ತಿದೆ. ಆದರೆ, ತರಬೇತಿ ನಡೆಯುವಾಗಲೇ ಬಿಎಂಟಿಸಿ ಬಸ್‌ನಿಂದಾಗಿ ಓರ್ವ ಗೃಹಿಣಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.

ಸೀಮಾ (21) ಮೃತ ಗೃಹಿಣಿ. ಡಿ.13ರ ಸಾಯಂಕಾಲ 6.30ರ ಸುಮಾರಿಗೆ ಸಿಲ್ಕ್ ಬೋರ್ಡ್ ಜಂಕ್ಷನ್ ಬಳಿಯ ಮಡಿವಾಳ ಫ್ಲೈಓವರ್ ಮೇಲೆ ಈ ದುರ್ಘಟನೆ ನಡೆದಿದೆ.

ಡಿ.13ರ ಸಾಯಂಕಾಲ ಗೃಹಿಣಿ ಸೀಮಾ ಆಕೆಯ ಪತಿ ಗುರುಮೂರ್ತಿ ಹಾಗೂ ಎರಡು ವರ್ಷದ ಮಗು ಗಾನವಿ ಜತೆಗೆ ನಗರದಲ್ಲಿ ನಡೆಯುತ್ತಿರುವ ಪ್ರೊ ಕಬ್ಬಡಿ ವೀಕ್ಷಣೆ ಮಾಡಲು ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ, ಅಜಾಗರೂಕತೆಯಿಂದ ವೇಗವಾಗಿ ಬಂದ ಬಿಎಂಟಿಸಿ ಬಸ್‌ ತಿರುಗಿಸಿ ಡಿಕ್ಕಿ ಹೊಡೆದಿದೆ. ಪರಿಣಾಮ ಗೃಹಿಣಿ ಸೀಮಾ ಬಸ್‌ನ ಚಕ್ರದಡಿ ಸಿಲುಕಿದ್ದಾರೆ. ಹೆಲ್ಮೆಟ್‌ ಧರಿಸಿದ್ದರೂ ಕೂಡ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಪತಿ ಮತ್ತು ಮಗು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಬಸ್‌ನ ನಿರ್ವಾಹಕ ಮತ್ತು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯೇ ಈ ಅಪಘಾತಕ್ಕೆ ಕಾರಣ ಎಂದು ಆರೋಪಿಸಲಾಗಿದೆ. ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಗೃಹಿಣಿ ಸೀಮಾ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮೃತಳ ಪತಿ ಗುರುಮೂರ್ತಿ ಹಾಗೂ ಮೃತ ಗೃಹಿಣಿ ಸೀಮಾ ಮೂಲತಃ ವಿಜಯನಗರ ಜಿಲ್ಲೆ ಗುಡೇಕೋಟೆ ಕೂಡ್ಲಿಗಿಯ ಶ್ರೀಕಂಠಪುರ ತಾಂಡದ ನಿವಾಸಿಗಳು. ಗುರುಮೂರ್ತಿ ಬೆಸ್ಕಾಂನಲ್ಲಿ ಲೈನ್​ಮ್ಯಾನ್​ ಆಗಿ‌‌ ಕೆಲಸ ಮಾಡುತ್ತಿದ್ದಾರೆ. ದಂಪತಿ ಕೆಲಸದ ನಿಮಿತ್ತ ಬೆಂಗಳೂರಿನ ಸಿಂಗಸಂಧ್ರದಲ್ಲಿ ನೆಲೆಸಿದ್ದರು.

ಈ ಬಗ್ಗೆ ಮಾತನಾಡಿದ ಮೃತಳ ಪತಿ ಗುರುಮೂರ್ತಿ, “ವೇಗವಾಗಿ ಬಸ್ ತಿರುಗಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ನನ್ನ ಪತ್ನಿಯ ಸಾವಾದ ಬಳಿಕ ಬಸ್‌ನ ಚಾಲಕ, ನಿರ್ವಾಹಕ ಇಬ್ಬರು ಪರಾರಿಯಾಗಿದ್ದಾರೆ. ಈ ಘಟನೆ ಬಳಿಕ ಬಿಎಂಟಿಸಿ ಅಧಿಕಾರಿಗಳು ಯಾರು ಬಂದಿಲ್ಲ” ಎಂದು ಹೇಳಿದ್ದಾರೆ.

ನಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಕುಟುಂಬಸ್ಥರು ಆಕ್ರೋಶ ಹೊರ ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭ್ರೂಣ ಹತ್ಯೆ | ಆರೋಗ್ಯಾಧಿಕಾರಿಗಳ ತನಿಖೆ ವೇಳೆ ಹೊಸಕೋಟೆಯ ಆಸ್ಪತ್ರೆಯಲ್ಲಿ 16 ವಾರಗಳ ಭ್ರೂಣ ಪತ್ತೆ

ಯಮರೂಪಿ ಬಿಎಂಟಿಸಿಗೆ ಬಲಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಅಪಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. 2023ರ ಒಂದೇ ವರ್ಷದಲ್ಲಿ 35 ಜನರು ಬಿಎಂಟಿಸಿ ಬಸ್‌ಗೆ ಬಲಿಯಾಗಿದ್ದಾರೆ.

ಈ ವರ್ಷ(2023) ಬಿಎಂಟಿಸಿ ಬಸ್‌ ಅಪಘಾತದಿಂದ 35 ಜನ ಸಾವನ್ನಪ್ಪಿದ್ದು, 97 ಜನ ಅಪಘಾತದಲ್ಲಿ ಗಾಯಗೊಂಡಿದ್ದಾರೆ. 2020ರಲ್ಲಿ ಬಿಎಂಟಿಸಿ ಬಸ್‌ಗೆ 22 ಜನರು ಬಲಿಯಾಗಿದ್ದು, 49 ಜನರು ಗಾಯಗೊಂಡಿದ್ದಾರೆ. 2021ರಲ್ಲಿ 27 ಜನರು ಸಾವನ್ನಪ್ಪಿದ್ದರೆ, 58 ಜನರು ಗಾಯಗೊಂಡಿದ್ದಾರೆ. 2022ರಲ್ಲಿ 37 ಜನರು ಬಲಿಯಾಗಿದ್ದರೆ, 85 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...