ಬೆಂಗಳೂರು | ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ: ಹೂವುಗಳಲ್ಲಿ ಅರಳಿದ ‘ಅನುಭವ ಮಂಟಪ’

Date:

ರಾಜ್ಯ ರಾಜಧಾನಿ ಬೆಂಗಳೂರಿನ ಸಸ್ಯಕಾಶಿ ಲಾಲ್‌ಬಾಗ್‌ನಲ್ಲಿ ಜನವರಿ 18ರಿಂದ ಜನವರಿ 28ರವರೆಗೆ 215ನೇ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಪ್ರದರ್ಶನಕ್ಕೆ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, “ವಿಶ್ವಗುರು ಬಸವಣ್ಣ ಮತ್ತು ವಚನ ಸಾಹಿತ್ಯಾಧಾರಿತ ಗಣರಾಜ್ಯೋತ್ಸವ ಫಲ ಪುಷ್ಪ ಪ್ರದರ್ಶನ 2024ವನ್ನು ನಾನು, ಡಿಸಿಎಂ ಡಿ ಕೆ ಶಿವಕುಮಾರ್, ರಾಮಲಿಂಗಾರೆಡ್ಡಿ ಉದ್ಘಾಟಿಸಿದ್ದೇವೆ. ಕಾಕತಾಳೀಯ ಎಂಬಂತೆ ಇವತ್ತಿನ ಸಚಿವ ಸಂಪುಟ ಸಭೆಯಲ್ಲಿ ಬಸವಣ್ಣ ಸಾಂಸ್ಕೃತಿಕ ರಾಯಭಾರಿಯನ್ನಾಗಿ ತೀರ್ಮಾನ ತೆಗೆದುಕೊಂಡಿದ್ದೇವೆ” ಎಂದು ತಿಳಿಸಿದರು.

ಸಿಎಂ 18

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶಿವಮೊಗ್ಗ ನಗರದ ಹಳೆ ಜೈಲು ಆವರಣದ ಸಾರ್ವಜನಿಕ ಪ್ರದೇಶಕ್ಕೆ ಅನುಭವ ಮಂಟಪದ ಅಧ್ಯಕ್ಷರಾಗಿ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿದ, ವಚನ ಸಾಹಿತ್ಯದ ಮೂಲಕ ಸಮಸಮಾಜಕ್ಕೆ ಮುನ್ನುಡಿ ಬರೆದ ಶರಣ ಅಲ್ಲಮಪ್ರಭು ಉದ್ಯಾನ ಎಂದು ಮರುನಾಮಕರಣ ಮಾಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇವರಿಬ್ಬರ ಹೆಸರು ಕೂಡ ಚಿರಸ್ಥಾಯಿಯಾಗಿರಲಿದೆ” ಎಂದು ತಿಳಿಸಿದರು.

10 ದಿನಗಳ ಕಾಲ ನಡೆಯಲಿರುವ ಫಲಪುಷ್ಪ ಪ್ರದರ್ಶನ

ಗಣರಾಜ್ಯೋತ್ಸವದ ನಿಮಿತ್ತ ನಡೆಯಲಿರುವ ಈ ಫಲಪುಷ್ಪ ಪ್ರದರ್ಶನ ಬೆಂಗಳೂರಿನ ಆಕರ್ಷಣೆಯ ಕೇಂದ್ರ ಬಿಂದುಗಳಲ್ಲಿ ಒಂದಾಗಿದೆ. ಬರೋಬ್ಬರಿ 10 ದಿನಗಳ ಕಾಲ ಈ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಜಗಜ್ಯೋತಿ ಬಸವೇಶ್ವರರ ಥೀಮ್‌ನಲ್ಲಿ ಈ ವರ್ಷದ ಫಲಪುಷ್ಪ ಪ್ರದರ್ಶನ ನಡೆಯುತ್ತಿದೆ. ಬಸವಣ್ಣ ಮತ್ತು ವಚನ ಸಾಹಿತ್ಯವನ್ನು ಆಧರಿಸಿದೆ.

ಸಮಾಜ ಸುಧಾರಕ ಬಸವಣ್ಣ, ಅವರ ಪರಂಪರೆ ಮತ್ತು ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆಯನ್ನು ಕೇಂದ್ರೀಕರಿಸಿ ನಾನಾ ಹೂವಿನ ಪ್ರತಿಕೃತಿಗಳನ್ನು ರಚಿಸಲಾಗಿದೆ. ಲಾಲ್‌ಬಾಗ್ ಗಾಜಿನ ಮನೆಗೆ ಪ್ರವೇಶಿಸಿದಾಗ ಮೊದಲು ಬಸವಣ್ಣನವರ ಪ್ರತಿಮೆ ಎದುರಾಗಲಿದೆ. ಗಾಜಿನ ಮನೆಯ ಒಳಗಡೆ 12ನೇ ಶತಮಾನದ ‘ಅನುಭವ ಮಂಟಪ’ ಹೂವುಗಳಲ್ಲಿ ಅರಳಲಿದೆ. ಇದು ಈ ಬಾರಿಯ ವಿಶೇಷತೆಗಳಲ್ಲಿ ಒಂದಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವೃದ್ಧೆಯ ಕೈಕಾಲು ಕಟ್ಟಿ ದರೋಡೆ ಮಾಡಿದ್ದ ಆರೋಪಿ ಬಂಧನ

ಪ್ರವೇಶ ಶುಲ್ಕ: ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ ₹80, ರಜಾ ದಿನಗಳಲ್ಲಿ ₹100, 12 ವರ್ಷದೊಳಗಿನ ಮಕ್ಕಳಿಗೆ ಎಲ್ಲ ದಿನಗಳಲ್ಲಿ ₹30 ನಿಗದಿ ಮಾಡಲಾಗಿದೆ. ಶಾಲಾ ಸಮವಸ್ತ್ರದಲ್ಲಿ ಬರುವ ವಿದ್ಯಾರ್ಥಿಗಳಿಗೆ (1- 10ನೇ ತರಗತಿ ಮಕ್ಕಳಿಗೆ) ರಜಾ ದಿನ ಹೊರತು ಪಡಿಸಿ ಉಚಿತ ಪ್ರವೇಶವಿರುತ್ತದೆ. ಪ್ರದರ್ಶನದ ಸಮಯ ಬೆಳಿಗ್ಗೆ 6ರಿಂದ ಸಂಜೆ 6.30ರವರೆಗೆ ಇರಲಿದೆ.

ಟಿಕೆಟ್ ಎಲ್ಲಿ ಲಭ್ಯ?

ಲಾಲ್‌ಬಾಗ್‌ನ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಟಿಕೆಟ್ ದೊರೆಯಲಿದೆ. ತೋಟಗಾರಿಕೆ ಇಲಾಖೆಯ ಜಾಲತಾಣದ ಮೂಲಕ ಆನ್‌ಲೈನ್‌ನಲ್ಲಿಯೂ ಟಿಕೆಟ್ ಪಡೆಯುವ ಅವಕಾಶ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...