ಬೆಂಗಳೂರು | ವಿವಾಹೇತರ ಸಂಬಂಧಕ್ಕೆ 35 ವರ್ಷದ ಮಹಿಳೆ ಬಲಿ

Date:

  • ಪ್ರೀಯಕರನಿಗೆ ₹50 ಸಾವಿರ ಹಣ ನೀಡಿ, ಬಾಡಿಗೆ ಮನೆ ಮಾಡಿಕೊಟ್ಟಿದ್ದ ಮಹಿಳೆ
  • ಆರೋಪಿ ಗಣೇಶ್​ನನ್ನು ಬಂಧಿಸಿದ ಬಸವೇಶ್ವರ ನಗರ ಪೊಲೀಸರು

ಬೆಂಗಳೂರಿನ ಜೆಸಿ ನಗರದಲ್ಲಿ ವಿವಾಹೇತರ ಸಂಬಂಧಕ್ಕೆ 35 ವರ್ಷದ ಮಹಿಳೆ ಬಲಿಯಾದ್ದಾಳೆ. ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸರಗುಣಂ ಮೃತ ಮಹಿಳೆ. ಈಕೆ ಮನೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಳು. ಈಕೆಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದರು.

ಗಣೇಶ್ ಎಂಬ 22 ವರ್ಷದ ಯುವಕನ ಜತೆಗೆ ಸರಗುಣಂ ವಿವಾಹೇತರ ಸಂಬಂಧ ಹೊಂದಿದ್ದಳು. ಗಣೇಶ್ ಆಟೋ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ. ಗಣೇಶನ ಪ್ರೇಮದ ಬಲೆಯಲ್ಲಿ ಬಿದ್ದ ಮಹಿಳೆ ಆತನಿಗೆ ₹50 ಸಾವಿರ ಹಣ ನೀಡಿ, ಬಾಡಿಗೆ ಮನೆ ಮಾಡಿಕೊಟ್ಟಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮಧ್ಯೆ, ಗಣೇಶ್ ಬೇರೆ ಮಹಿಳೆಯೊಂದಿಗೆ ಆತ್ಮೀಯ ಸಲುಗೆಯಿಂದ ಇರುವ ಮಾಹಿತಿ ತಿಳಿದು, ಏ.26ರಂದು ಪ್ರೀಯಕರನ ಮನೆಗೆ ಸರಗುಣಂ ಬಂದಿದ್ದಳು. ಈ ವೇಳೆ, ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಮಹಿಳೆ ನಾನು ಹಣ ನೀಡಿ ನಿನಗೆ ಮನೆ ಮಾಡಿ ಕೊಟ್ಟಿದ್ದೇನೆ. ನಿನ್ನನ್ನು ನೋಡಿಕೊಳ್ಳುತ್ತಿದ್ದೇನೆ. ನನ್ನ ಹಣ ವಾಪಾಸ್ ಕೊಡು, ನಿನ್ನ ಜತೆ ಸಲುಗೆಯಿಂದ ಇರುವ ಮಹಿಳೆ ಯಾರೆಂದು ಹೇಳು ಎಂದು ಪ್ರಶ್ನೆ ಮಾಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೊದಲ 100 ದಿನಗಳಲ್ಲಿ 11 ಲಕ್ಷ ಪ್ರಯಾಣಿಕರಿಗೆ ಸೇವೆ ಒದಗಿಸಿದ ‘ಕೆಐಎ’ ಟರ್ಮಿನಲ್ 2

ಗಲಾಟೆ ತಾಕಕ್ಕೇರಿ, ಗಣೇಶ್ ತಾನು ಸಾಯುವುದಾಗಿ ಹೇಳಿ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಮುಂದಾಗಿದ್ದಾನೆ. ಈ ಸಂದರ್ಭದಲ್ಲಿ ಮಹಿಳೆ ಅಡ್ಡ ಬಂದಿದ್ದಾಳೆ. ಯುವಕ ಕೆಳಗೆ ಇಳಿದ ಸಮಯದಲ್ಲಿ ತಾನು ಸಾಯುತ್ತೇನೆ ಎಂದು ಹೇಳಿ ಮಹಿಳೆ ನೇಣಿನ ಕುಣಿಕೆ ಹಾಕಿಕೊಂಡಿದ್ದಾಳೆ. ಇದೇ ವೇಳೆ ಗಣೇಶ್ ಹಗ್ಗ ಎಳೆದು ಚೇರ್ ಒದ್ದಿದ್ದಾನೆ. ಹಗ್ಗ ಕತ್ತಿಗೆಗೆ ಬಿಗಿದುಕೊಂಡು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮಹಿಳೆಯನ್ನು ಆರೋಪಿ ಗಣೇಶ್ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾನೆ.

ಗಣೇಶ್ ಪೊಲೀಸರ ದಿಕ್ಕು ತಪ್ಪಿಸಲು ಆತ್ಮಹತ್ಯೆ ಯತ್ನ ಮಾಡಿದ್ದಾಳೆ ಎಂದು ನಾಟಕವಾಡಿದ್ದನು. ಸದ್ಯ ಬಸವೇಶ್ವರ ನಗರ ಪೊಲೀಸರು ಆರೋಪಿ ಗಣೇಶ್​ನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...