ಬೆಂಗಳೂರು | ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ

Date:

ಬೆಂಗಳೂರನ್ನು ಟಾರ್ಗೆಟ್‌ ಮಾಡಿ ನಗರದ 10 ಕಡೆ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ)ದ ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತ ಆರೋಪಿಗಳ ಪೈಕಿ ಓರ್ವನ ಮನೆಯಲ್ಲಿ ನಾಲ್ಕು ಗ್ರೆನೇಡ್ ಪತ್ತೆಯಾಗಿದೆ.

ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿರುವ ಬಂಧಿತ ಶಂಕಿತ ಉಗ್ರ ಜಾಹೀದ್ ತಬ್ರೇಜ್ ಮನೆಯಲ್ಲಿ ಗ್ರೆನೇಡ್ ಇಟ್ಟಿರುವುದನ್ನು​ ಸಿಸಿಬಿ ಪೊಲೀಸರು ಪತ್ತೆ ಮಾಡಿದ್ದಾರೆ.

ಪ್ರಮುಖ ಆರೋಪಿ ಜುನೈದ್ ವಿದೇಶದಲ್ಲಿದ್ದುಕೊಂಡು ಅಪರಿಚಿತ ವ್ಯಕ್ತಿಯನ್ನು ಜಾಹೀದ್‌ಗೆ ಪರಿಚಯ ಮಾಡಿ ಆತನಿಂದ ಗ್ರೆನೇಡ್ ಪೂರೈಕೆ ಮಾಡಿಸಿದ್ದನು. ಜುನೈದ್ ಮಾತಿನಂತೆ ಶಂಕಿತ ಉಗ್ರ ಜಾಹೀದ್ ತಬ್ರೇಜ್ ಪಾರ್ಸಲ್​ ಮೂಲಕ ಬಂದಿದ್ದ ಗ್ರೆನೇಡ್​ ಅನ್ನು ಸುರಕ್ಷಿತವಾಗಿ ತಮ್ಮ ಮನೆಯಲ್ಲಿ ಕೆಮಿಕಲ್​ ಮತ್ತು ಮರಳು ತುಂಬಿದ್ದ ಚೀಲದಲ್ಲಿ ಇಟ್ಟುಕೊಂಡಿದ್ದನು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಜಂಟಿ ಪೊಲೀಸ್‌ ಆಯುಕ್ತ ಡಾ. ಎಸ್‌ ಡಿ ಶರಣಪ್ಪ, “ಶಂಕಿತ ಐವರು ಉಗ್ರರನ್ನು ನ್ಯಾಯಲಯಕ್ಕೆ ಹಾಜರು ಪಡಿಸಿ ಪೊಲೀಸ್‌ ವಶಕ್ಕೆ ಪಡೆಯಲಾಗಿದೆ. ಆರೋಪಿ ಜಾಹೀದ್‌ ತಲೆಮರೆಸಿಕೊಂಡು ವಿದೇಶದಲ್ಲಿರುವ ಪ್ರಮುಖ ಆರೋಪಿ ಜತೆಗೆ ಸಂಪರ್ಕದಲ್ಲಿದ್ದನು” ಎಂದು ತಿಳಿಸಿದರು.

“ಶಂಕಿತ ಉಗ್ರ ಜಾಹೀದ್ ಪ್ರಮುಖ ಆರೋಪಿ ನೀಡಿದ್ದ ಗ್ರೆನೇಡ್‌ ಅನ್ನು ತನ್ನ ಮನೆಯಲ್ಲಿ ಸುರಕ್ಷಿತವಾಗಿಟ್ಟಿದ್ದನು. ಆರೋಪಿ ನೀಡಿದ ಮಾಹಿತಿ ಮೇರೆಗೆ ಬಾಂಬ್ ಸ್ಕ್ವಾಡ್ ಕರೆದುಕೊಂಡು ಸಿಸಿಬಿ ತಂಡ ಆರೋಪಿ ಮನೆ ಪರಿಶೀಲನೆ ನಡೆಸಿದೆ. ಈ ವೇಳೆ ನಾಲ್ಕು ಜೀವಂತ ಗ್ರೆನೇಡ್‌ ಸಿಕ್ಕಿದೆ. ಆರೋಪಿ ಮನೆಯ ಬೀರುವಿನಲ್ಲಿ ಗ್ರೆನೇಡ್​​ಗಳನ್ನು ಬಟ್ಟೆಯಲ್ಲಿ ಸುತ್ತಿ​ ಸುರಕ್ಷಿತವಾಗಿಟ್ಟಿದ್ದನು. ಯಾವುದೇ ಕ್ಷಣದಲ್ಲಿ ಬೇಕಾದರೂ ಬಳಸಬಹುದಾದ 4 ಗ್ರೆನೇಡ್​ ಜಪ್ತಿ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

“ಬೇರೊಬ್ಬ ವ್ಯಕ್ತಿಯ ಮೂಲಕ ಗ್ರೆನೇಡ್ ಪಾರ್ಸಲ್ ನೀಡಲಾಗಿದೆ. ಇದನ್ನು ಪಾರ್ಸಲ್‌ ಮಾಡಿದರವರು ಯಾರು ಎಂಬ ಬಗ್ಗೆ ಪತ್ತೆ ಮಾಡಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ. ಇದಕ್ಕಾಗಿ ಸಿಸಿಬಿ ವಿಶೇಷ ತಂಡ ರಚನೆ ಮಾಡಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ತಲೆಮರೆಸಿಕೊಂಡಿರುವ ಆರೋಪಿ ವಿದೇಶದಲ್ಲಿರುವ ಮಾಹಿತಿ ಇದೆ. ಆರೋಪಿ ಪತ್ತೆಗಾಗಿ ಬೇರೆ ಬೇರೆ ತನಿಖಾ ಸಂಸ್ಥೆಗಳನ್ನು ಸಂಪರ್ಕಿಸಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ಅನಧಿಕೃತ 80 ಕಟ್ಟಡಗಳ ತೆರವಿಗೆ ಸೂಚನೆ: ಆಯುಕ್ತ ಜಯರಾಮ್ ರಾಯಪುರ

ಪೊಲೀಸರೇ ಗ್ರೆನೇಡ್‌ ತಂದಿಟ್ಟಿದ್ದಾರೆ: ಶಂಕಿತ ಉಗ್ರನ ಸಹೋದರ

ಬುಧವಾರ ಬಂಧನವಾದ ಐವರು ಶಂಕಿತ ಉಗ್ರರ ಪೈಕಿ ಜಾಹಿದ್ ತಬ್ರೇಜ್ ಎಂಬುವವನ ಮನೆಯಲ್ಲಿ ನಾಲ್ಕು ಜೀವಂತ ಗ್ರೆನೇಡ್‌ ಪತ್ತೆಯಾಗಿದ್ದು, ಈ ಗ್ರೆನೇಡ್‌ಗಳನ್ನು ಪೊಲೀಸರೇ ತಂದಿಟ್ಟಿದ್ದಾರೆ ಎಂದು ಶಂಕಿತ ಉಗ್ರ ಜಾಹಿದ್ ತಬ್ರೇಜ್ ಸಹೋದರ ಅವೇಜ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗುರುವಾರ ಬೆಳಿಗ್ಗೆ ಪೊಲೀಸರು ತಮ್ಮನನ್ನು ಮನೆಗೆ ಕರೆದುಕೊಂಡು ಬಂದು ಗ್ರೆನೇಡ್ ತಂದು ಇಟ್ಟಿದ್ದಾರೆ. ನನ್ನ ಸಹೋದರ ಅಲ್ಯೂಮಿನಿಯಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದನು. ಯಾರ ತಂಟೆಗೆ ಹೋಗದೆ ತನ್ನ ಪಾಡಿಗೆ ತಾನಿದ್ದನು. ಇಂತಹ ಕೆಲಸ ಮಾಡುವವನಲ್ಲ” ಎಂದು ಹೇಳಿದರು.

“ನಮ್ಮ ಮನೆಯಲ್ಲಿ ನಾವಿಬ್ಬರೆ ದುಡಿಯುವವರು. ನಾವು ಸಂಸಾರಸ್ಥರು, ನಾವು ಏಕೆ ಗ್ರೆನೇಡ್ ಇಟ್ಟುಕೊಳ್ಳುತ್ತೇವೆ. ನನ್ನ ತಮ್ಮ ಈ ರೀತಿಯ ಕೆಲಸ ಮಾಡುವುದಿಲ್ಲ. ಜಾಹೀದ್‌ ಕ್ಯಾಬ್‌ ಓಡಿಸುವಾಗ ಜುನೈದ್‌ ಪರಿಚಯವಾಗಿದ್ದ. ಬಳಿಕ 2017ರಲ್ಲಿ ಜುನೈದ್​ ಜೊತೆ ಪ್ರಕರಣವೊಂದರಲ್ಲಿ ಬಂಧಿತನಾಗಿದ್ದ. ಈ ಘಟನೆ ಬಳಿಕ ಜಾಹೀದ್ ಜುನೈದ್ ಸಹವಾಸವನ್ನೇ ಬಿಟ್ಟಿದ್ದನು” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...