ಬೆಂಗಳೂರು | ಇನ್ನೂ ತೆರವಾಗಬೇಕಿದೆ 960 ಎಕರೆ ಕೆರೆ ಒತ್ತುವರಿ ಜಾಗ

Date:

ರಾಜ್ಯ ರಾಜಧಾನಿ ಬೆಂಗಳೂರು ಜಿಲ್ಲೆಯಲ್ಲಿ 960.32 ಎಕರೆ ಕೆರೆ ಭೂಮಿ ಒತ್ತುವರಿಯನ್ನು ನಗರ ಜಿಲ್ಲಾಡಳಿತ ಇನ್ನೂ ತೆರವುಗೊಳಿಸಿಲ್ಲ.

ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ಅತಿಕ್ರಮಣ ತೆರವು ಕಾರ್ಯಪಡೆ ಪ್ರಕಾರ, “ಬೆಂಗಳೂರು ನಗರ ಜಿಲ್ಲೆಯ ಐದು ತಾಲ್ಲೂಕುಗಳು 837 ಕೆರೆಗಳನ್ನು ಹೊಂದಿದ್ದು, 27,597.34 ಎಕರೆ ವಿಸ್ತೀರ್ಣವನ್ನು ಹೊಂದಿದೆ. ಅದರಲ್ಲಿ ಕಳೆದ ದಶಕದಿಂದ 4,554.10 ಎಕರೆ ಒತ್ತುವರಿಯಾಗಿದ್ದು, 3,593.17 ಎಕರೆಯನ್ನು ತೆರವುಗೊಳಿಸುವಲ್ಲಿ ಜಿಲ್ಲಾಧಿಕಾರಿ ಕಚೇರಿ ಯಶಸ್ವಿಯಾಗಿದೆ” ಎಂದು ತಿಳಿಸಿದೆ.

“ಬೆಂಗಳೂರು ಜಿಲ್ಲೆಯಲ್ಲಿ 188 ಕೆರೆಗಳು ಒತ್ತುವರಿಯಾಗಿದ್ದು, ಈವರೆಗೆ 107 ಒತ್ತುವರಿ ತೆರವು ಮಾಡಿದ್ದೇವೆ. ಒತ್ತುವರಿದಾರರಿಗೆ ನೋಟಿಸ್ ಕಳುಹಿಸಬೇಕು ಮತ್ತು ಸಮಯ ನೀಡಬೇಕು. ಕಟ್ಟಡ ಮಾಲೀಕರು ಸ್ಟೇ ತರಲು ನ್ಯಾಯಾಲಯದ ಮೊರೆ ಹೋಗುತ್ತಾರೆ. ಇದನ್ನು ತಪ್ಪಿಸಲು ವಾರಾಂತ್ಯ ಮತ್ತು ಸಾರ್ವಜನಿಕ ರಜಾದಿನಗಳಲ್ಲಿ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಡಿಸಿ ಕಚೇರಿ ಯೋಜಿಸುತ್ತಿದೆ” ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆರೆ ಒತ್ತುವರಿ ಮಾಡಿಕೊಂಡು ನಿಯಮ ಉಲ್ಲಂಘಿಸುವವರು ಸ್ಟೇ ತರಲು ನ್ಯಾಯಾಲಯ ಸಂಪರ್ಕಿಸುತ್ತಾರೆ. ಹೀಗಾಗಿ, ಕೆರೆ ಒತ್ತುವರಿ ಇನ್ನೂ ತೆರವುಗೊಳ್ಳದೆ ಉಳಿದಿದೆ” ಎಂದು ಜಿಲ್ಲಾಧಿಕಾರಿ ಕಚೇರಿಯ ಮೂಲಗಳು ತಿಳಿಸಿವೆ.

ಇತ್ತೀಚೆಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಜಿಲ್ಲೆಯಲ್ಲಿ ನಡೆದಿರುವ ಭೂ ಒತ್ತುವರಿ ಕುರಿತು ಸಭೆ ನಡೆಯಿತು. ಈ ವೇಳೆ, ಒತ್ತುವರಿ ತೆರವುಗೊಳಿಸಲು ಕ್ರಿಯಾ ಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಅವರಿಗೆ ಸೂಚಿಸಿದರು.

“ಹಬ್ಬಗಳು ಮತ್ತು ಬೆಂಗಳೂರಿಗೆ ಪ್ರಧಾನಿಯವರ ಭೇಟಿಯ ತಯಾರಿಯಿಂದಾಗಿ ಒತ್ತುವರಿ ತೆರವು ಕಾರ್ಯ ಮಾಡಲು ಸಾಧ್ಯವಾಗಲಿಲ್ಲ. ಕ್ರಿಯಾ ಯೋಜನೆ ಸಿದ್ಧಪಡಿಸಿದ ನಂತರ, ಐದು ತಾಲ್ಲೂಕುಗಳಲ್ಲಿ ಒತ್ತುವರಿ ತೆರವಿಗೆ ಚಾಲನೆ ನೀಡಲಾಗುವುದು” ಎಂದು ಡಿಸಿ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

“ಕರ್ನಾಟಕ ಟ್ಯಾಂಕ್ ಅಭಿವೃದ್ಧಿ ಸಂರಕ್ಷಣಾ ಪ್ರಾಧಿಕಾರದ ನಿಯಮಗಳ ಅಡಿಯಲ್ಲಿ ನಿಯೋಜಿತ ಅಧಿಕಾರಿ ಕೆರೆ ಒತ್ತುವರಿ ಅಂಶಗಳನ್ನು ಪರಿಶೀಲಿಸುತ್ತಾರೆ. ಜತೆಗೆ ದಾಖಲೆಗಳನ್ನು ಪರಿಶೀಲಿಸುವ ಅಧಿಕೃತ ಅಧಿಕಾರಿಯೂ ಇರಬೇಕು ಎಂದು ಕೆರೆ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಯು.ವಿ.ಸಿಂಗ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಕಾರು; ನಾಲ್ವರು ಸಾವು

“ಸರ್ಕಾರ ಅಧಿಕಾರಿಗಳು ಹಾಗೂ ಸಹಾಯಕ ಸಿಬ್ಬಂದಿ ನೇಮಕ ಮಾಡಿಲ್ಲ. ಒತ್ತುವರಿದಾರರು ಇದರ ಲಾಭ ಪಡೆದು ಪ್ರಕರಣವನ್ನು ಎಳೆದು ತರಲು ನ್ಯಾಯಾಲಯದ ಮೊರೆ ಹೋಗುತ್ತಿದ್ದಾರೆ. ಸಂವಿಧಾನ ಮತ್ತು ಸಂಬಂಧಿತ ಕಾಯಿದೆಗಳಿವೆ. ಅವುಗಳನ್ನು ಕಾರ್ಯಗತಗೊಳಿಸಿದರೆ, ಅಧಿಕಾರಿಗಳನ್ನು ನೇಮಿಸಿ ಮತ್ತು ನಿಯಮಗಳನ್ನು ಅನುಸರಿಸಿದರೆ, ಅತಿಕ್ರಮಣದಾರರು ನ್ಯಾಯಾಲಯಕ್ಕೆ ಹೋಗಿ ಪ್ರಕರಣಗಳನ್ನು ಎಳೆಯಲು ಸಾಧ್ಯವಿಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...