ಬೆಂಗಳೂರು | ಪ್ರೆಸ್ಟೀಜ್ ಅಪಾರ್ಟ್‌ಮೆಂಟ್‌ನಲ್ಲಿ ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಸಾವು

Date:

ವಿದ್ಯುತ್ ತಂತಿ ತಗುಲಿ 10 ವರ್ಷದ ಬಾಲಕಿ ಮೃತಪಟ್ಟ ಘಟನೆ ಕಾಡುಗೋಡಿ ವರ್ತೂರಿನ ಪ್ರೆಸ್ಟೀಜ್ ಹೆಬಿಟೇಡ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.

ಮಾನ್ಯ(10) ಮೃತ ಬಾಲಕಿ. ಗುರುವಾರ (ಡಿ.28) ಸಂಜೆ ಸುಮಾರು 7.30ರ ಸುಮಾರಿಗೆ ಈ ಘಟನೆ ನಡೆದಿದೆ.

ಬಾಲಕಿ ಮಾನ್ಯ ಗುರುವಾರ ಅಪಾರ್ಟ್‌ಮೆಂಟ್‌ನ ಸ್ವಿಮಿಂಗ್ ಫೂಲ್ ಬಳಿ ಆಟವಾಡುತ್ತಿದ್ದಳು. ಈ ವೇಳೆ, ಫೂಲ್ ಪಕ್ಕದಲ್ಲಿದ್ದ ವಿದ್ಯುತ್ ದೀಪದ ತಂತಿಯನ್ನು ಬಾಲಕಿ ತುಳಿದ ಪರಿಣಾಮ ಶಾಕ್ ಹೊಡೆದಿದೆ. ಬಾಲಕಿ ಪ್ರಜ್ಞೆ ತಪ್ಪಿ ಸ್ವಿಮಿಂಗ್ ಫೂಲ್ ಒಳಗೆ ಬಿದ್ದಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಕಂಡ ಅಪಾರ್ಟ್‌ಮೆಂಟ್ ನಿವಾಸಿಗಳು ಬಾಲಕಿಯನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದಾರೆ. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾರೆ.

ಇನ್ನು ಬಾಲಕಿ ಸಾವಿಗೆ ಅಪಾರ್ಟ್‌ಮೆಂಟ್‌ ನಿರ್ವಹಣಾ ಸಿಬ್ಬಂದಿ ಬೇಜವಾಬ್ದಾರಿ ಕಾರಣ ಎಂದು ಅಪಾರ್ಟ್‌ಮೆಂಟ್ ನಿವಾಸಿಗಳು ಆರೋಪ ಮಾಡಿದ್ದು ರಾತ್ರಿಯಿಡಿ ನಿರ್ವಹಣಾ ಸಿಬ್ಬಂದಿ ವಿರುದ್ಧ 100ಕ್ಕೂ ಹೆಚ್ಚು ಜನರು ಪ್ರತಿಭಟನೆ ನಡೆಸಿದರು.

ವಿದ್ಯುತ್ ಪೂರೈಕೆ, ವಿದ್ಯುತ್ ಕಂಬಗಳ ನಿರ್ವಹಣೆಯನ್ನು ಅಪಾರ್ಟ್‌ಮೆಂಟ್‌ನ ಪಿಪಿಎಮ್‌ಸಿ ವಿಭಾಗ ನೋಡಿಕೊಳ್ಳುತ್ತಿತ್ತು. ಪಿಪಿಎಮ್‌ಸಿ ನಿರ್ಲಕ್ಷ್ಯದಿಂದಲೇ ಮಗು ಸಾವಾಗಿದೆ. ಈ ನಿರ್ಲಕ್ಷ್ಯ ಇದೇ ಮೊದಲಲ್ಲ. ಈ ಹಿಂದೆಯೂ ನಡೆದಿತ್ತು. ಈ ಹಿಂದೆ ಸಹ ನಮಗೆ ವಿದ್ಯುತ್ ಶಾಕ್ ಅನುಭವವಾಗಿದೆ. ಈ ಬಗ್ಗೆ ಹಲವು ಬಾರಿ ದೂರು ನೀಡಿದರು ನಿರ್ವಹಣಾ ಸಿಬ್ಬಂದಿ ಕ್ರಮಕೈಗೊಂಡಿಲ್ಲ. ನಿರ್ವಹಣಾ ಸಿಬ್ಬಂದಿ ಸರಿಯಾದ ರೀತಿ ಕೆಲಸ ಮಾಡುತ್ತಿಲ್ಲ. ಆದ್ದರಿಂದಲೇ, ಈ ಘಟನೆ ಸಂಭವಿಸಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಪ್ರತಿ ವರ್ಷ ‘ಎಫ್‌ಸಿ’ ಕಡ್ಡಾಯ; ಹೈಕೋರ್ಟ್‌ ಸೂಚನೆ

ಪ್ರಕರಣ ಸಂಬಂಧ ಮೃತ ಬಾಲಕಿ ಮಾನ್ಯ ತಂದೆ ವರ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತಿದ್ದಾರೆ.

ಮಗು ಮೃತಪಟ್ಟ ಹಿನ್ನೆಲೆ ಅತ್ತಿಬೆಲೆಯಿಂದ ವರ್ತೂರು ಬರುವ ಮುಖ್ಯರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಈ ವೇಳೆ, ವಾಹನ ಸಂಚಾರ ದಟ್ಟಣೆ ಉಂಟಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...