ಬೆಂಗಳೂರು | ಬಿಎಂಟಿಸಿ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಕಾರು ಸುಟ್ಟು ಕರಕಲು

Date:

ಯಶವಂತಪುರ-ನಾಯಂಡಹಳ್ಳಿಗೆ ತೆರಳುತ್ತಿದ್ದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ಗೆ ಕಾರ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ಅಗ್ನಿ ಅವಘಡ ಸಂಭವಿಸಿದೆ.

ಈ ಘಟನೆ ಬೆಂಗಳೂರಿನ ನಾಗರಭಾವಿ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್ ಬಸ್ ನಿಲ್ದಾಣದ ಬಳಿ ನಡೆದಿದೆ. ಸೋಮವಾರ ಬೆಳಗ್ಗೆ 9 ಗಂಟೆಗೆ ಈ ಘಟನೆ ನಡೆದಿದೆ.

ಬಿಎಂಟಿಸಿ ಬಸ್‌ ಯಶವಂತಪುರದಿಂದ ನಾಯಂಡಹಳ್ಳಿಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ನಾಗರಭಾವಿಯ ಹೊರವರ್ತುಲ ರಸ್ತೆಯ ಚಂದ್ರಾಲೇಔಟ್‌ ಬಸ್‌ ನಿಲ್ದಾಣದ ಬಳಿ ಪ್ರಯಾಣಿಕರನ್ನು ಇಳಿಸಲು ಮತ್ತು ಹತ್ತಿಸಲು ಸಿಬ್ಬಂದಿ ಬಸ್‌ ನಿಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಪೆಟ್ರೋಲ್‌ ಕಾರ್ ಬಸ್‌ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಉಂಟಾದ ಘರ್ಷಣೆಗೆ ಬೆಂಕಿ ಹತ್ತಿಕೊಂಡಿದ್ದು, ಕಾರು ಸಂಪೂರ್ಣವಾಗಿ ಅಗ್ನಿಗಾಹುತಿಯಾಯಿತು. ಕಾರಿನಿಂದ ಬಸ್‌ನ ಹಿಂಭಾಗ ಬೆಂಕಿ ಹೊತ್ತಿಕೊಳ್ಳಲು ಪ್ರಾರಂಭವಾಗಿತ್ತು. ಈ ವೇಳೆ, ಸಿಬ್ಬಂದಿ ಬಸ್‌ ಮತ್ತು ಕಾರ್‌ ಅನ್ನು ಬೇರ್ಪಡಿಸಲು ಪ್ರಯತ್ನಿಸಿದರು. ಬಳಿಕ ಸಾರ್ವಜನಿಕರು ಸಿಬ್ಬಂದಿ ಸೇರಿ ಬಸ್‌ಗೆ ತಗುಲಿದ ಬೆಂಕಿಯನ್ನು ನೀರು ಮತ್ತು ಅಗ್ನಿನಂದಕ ಬಳಸಿ ನಂದಿಸಿದರು. ಬಸ್ಸಿನ ಹಿಂಬದಿ ಆಸನಗಳು ಸುಟ್ಟು ಕರಕಲಾಗಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಭ್ರೂಣಲಿಂಗ ಹತ್ಯೆ ಪ್ರಕರಣ: ಮತ್ತೋರ್ವ ನರ್ಸ್​​ ಬಂಧನ

ಈ ವೇಳೆ, ಪ್ರಯಾಣಿಕರಿಗೆ ಮತ್ತು ಸಿಬ್ಬಂದಿಗೆ ಯಾವುದೇ ತೊಂದರೆಯಾಗಿಲ್ಲ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

“ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ನಮ್ಮ ಸಂಸ್ಥೆಯ ಚಾಲಕ ಕಾರ್ ಡ್ರೈವರ್ ಮತ್ತು ಅವರ ಕುಟುಂಬವನ್ನು ಕಾರಿನಿಂದ ಹೊರಗೆ ಕರೆತರಲು ಸಹಾಯ ಮಾಡಿದರು. ಬಸ್‌ನಲ್ಲಿದ್ದ ಸುಮಾರು 30 ಪ್ರಯಾಣಿಕರನ್ನು ಬಸ್‌ನಿಂದ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ನಂತರ ಕಾರಿನಲ್ಲಿ ಮತ್ತು ಬಸ್‌ನ ಹಿಂಬದಿಯಲ್ಲಿ ಬೆಂಕಿ ಹೊತ್ತಿಕೊಂಡಂತೆ, ನಮ್ಮ ಚಾಲಕ ಬಸ್‌ ಮತ್ತು ಕಾರ್‌ ಅನ್ನು ಬೇರ್ಪಡಿಸಲು ಪ್ರಯತ್ನಿಸಿದ್ದಾರೆ. ಚಾಲಕ ಮತ್ತು ನಿರ್ವಾಹಕರ ಸಮಯೋಚಿತ ಕಾರ್ಯವು ಹಲವರ ಜೀವವನ್ನು ಉಳಿಸಿದೆ” ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸತ್ಯವತಿ ಜಿ. ಶ್ಲಾಘಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...