ಬೆಂಗಳೂರು | ಮಕ್ಕಳಿಲ್ಲದಕ್ಕೆ ಅಪಹರಣ ಮಾಡಿ ಸಾಕಲು ಮುಂದಾದ ಬಿಹಾರ ದಂಪತಿ: ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ, ಮಕ್ಕಳ ಕದಿಯುವ ಬಿಹಾರ ಗ್ಯಾಂಗ್‌ ನಗರದಲ್ಲಿ ಸಕ್ರಿಯವಾಗಿದ್ದು, ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ತಿಂಡಿ ಕೊಡಿಸುವ ನೆಪದಲ್ಲಿ ಕಳ್ಳತನ ಮಾಡಿ ಬಿಹಾರಕ್ಕೆ ಪರಾರಿಯಾಗುತ್ತಿದ್ದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಕ್ಕಳಿಲ್ಲದಕ್ಕೆ ಮಕ್ಕಳನ್ನು ಸಾಕಲು ಅಪಹರಿಸಿರುವುದಾಗಿ ಬಂಧಿತ ದಂಪತಿ ಪೊಲೀಸ್ ವಿಚಾರಣೆ ವೇಳೆ ತಿಳಿಸಿದ್ದಾರೆ.

ಬಿಹಾರ ಮೂಲದ ಪ್ರಮೀಳಾ ದೇವಿ (33) ಮತ್ತು ಬಲರಾಮ್(40) ಬಂಧಿತರು. ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಮಂಗಳವಾರ ಬೆಳಗ್ಗೆ 11:30 ಸುಮಾರಿಗೆ ಆರು ವರ್ಷದ ಹೆಣ್ಣು ಮಗು ಮತ್ತು ಎಂಟು ತಿಂಗಳ ಮಗು ಮನೆಯ ಮುಂದೆ ಆಟವಾಡುತ್ತಿದ್ದವು. ಈ ವೇಳೆ, ಬಂಧಿತರು ಆರು ವರ್ಷದ ಮಗುವಿನ ಬಳಿ ವಿಳಾಸ ಕೇಳುವ ನೆಪದಲ್ಲಿ ಮಾತು ಆರಂಭಿಸುತ್ತಾರೆ. ಬಳಿಕ ಮಕ್ಕಳಿಗೆ ತಿಂಡಿ ಕೊಡಿಸುವ ಆಮಿಷವೊಡ್ಡಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಾರೆ. ಮಹಿಳೆ ಮಕ್ಕಳನ್ನು ಕರೆದುಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ, ಮಕ್ಕಳನ್ನು ಕಳ್ಳತನ ಮಾಡಿ ಯಶವಂತಪುರ ರೈಲ್ವೇ ಸ್ಟೇಷನ್‌ನಿಂದ ಬಿಹಾರಕ್ಕೆ ತೆರಳಲು ಸಜ್ಜಾಗಿದ್ದರು. ರೈಲ್ವೆ ನಿಲ್ದಾಣದಲ್ಲಿ ಮಕ್ಕಳು ಜೋರಾಗಿ ಅಳುತ್ತಿದ್ದವು. ಜತೆಗೆ ದಂಪತಿ ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆ ಪ್ರಯಾಣಿಕರು ರೈಲ್ವೇ ಪೊಲೀಸರಿಗೆ ಮಾಹಿತಿ ನೀಡಿದ್ದರು.

ರೈಲ್ವೆ ಪೊಲೀಸರು ದಂಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮಕ್ಕಳನ್ನು ಕಳ್ಳತನ ಮಾಡಿರುವ ಬಗ್ಗೆ ತಿಳಿದುಬಂದಿದೆ.

ಮಕ್ಕಳ ಹುಡುಕಾಟದಲ್ಲಿ ಪೋಷಕರು

ಮಕ್ಕಳನ್ನು ಕಳೆದುಕೊಂಡ ಪೋಷಕರು ತೀವ್ರ ಹುಡುಕಾಟ ನಡೆಸಿದ್ದಾರೆ. ಕೊನೆಗೆ ಮಕ್ಕಳು ಸಿಗದಿದ್ದಾಗ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಮೇರೆಗೆ ಅಪಹರಣ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ಬಳಿಕ, ರೈಲ್ವೆ ಅಧಿಕಾರಿಗಳು ಮಕ್ಕಳನ್ನು ಆರೋಪಿಗಳಿಂದ ರಕ್ಷಿಸಿ ಕೊಡಿಗೇಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಜತೆಗೆ ಆರೋಪಿಗಳನ್ನು ಕೊಡಿಗೇಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಾಲಕ ರಹಿತ ನಮ್ಮ ಮೆಟ್ರೋ: ಚೀನಾದ 21 ಎಂಜಿನಿಯರ್‌ಗಳಿಗೆ ಭಾರತದ ವೀಸಾ

ಮಕ್ಕಳನ್ನು ಸಾಕಲು ಅಪಹರಣ

ಬಿಹಾರ ಮೂಲದ ದಂಪತಿ ಬೆಂಗಳೂರಿನಲ್ಲಿ ಟೈಲ್ಸ್‌ ಕೆಲಸ ಮತ್ತು ಮನೆಗೆಲಸ ಮಾಡಿಕೊಂಡಿದ್ದರು. ಇವರಿಗೆ ಮಕ್ಕಳು ಆಗಿರಲಿಲ್ಲ. ಈ ಹಿನ್ನೆಲೆ, ಮಕ್ಕಳನ್ನು ಕಳ್ಳತನ ಮಾಡಿ ಬಿಹಾರಗೆ ಕರೆದುಕೊಂಡು ಹೋಗಿ ಸಾಕುವ ಉದ್ದೇಶ ಹೊಂದಿದ್ದರು. ಹೀಗಾಗಿ ಮಕ್ಕಳನ್ನು ಅಪಹರಣ ಮಾಡಿದ್ದರು. ಇವರು ಮಕ್ಕಳನ್ನು ಅಪಹರಣ ಮಾಡುವ ಗ್ಯಾಂಗ್‌ನವರಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸದ್ಯ ಇಬ್ಬರು ಆರೋಪಿಗಳನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...