ಬೆಂಗಳೂರು | ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ ₹5 ಕೋಟಿ ನಷ್ಟ

Date:

ಚಪ್ಪಲಿ ಗೋದಾಮಿಗೆ ಬೆಂಕಿ ತಗುಲಿ, ₹5 ಕೋಟಿಗೂ ಹೆಚ್ಚಿನ ಮೌಲ್ಯದ ಚಪ್ಪಲಿ, ಶೂ ಸೇರಿದಂತೆ ಅನೇಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.  

ಗೋದಾಮಿನ ಬಳಿಯ ವಿದ್ಯುತ್ ಕಂಬಕ್ಕೆ ಕ್ಯಾಂಟರ್​ ಡಿಕ್ಕಿ ಹೊಡೆದಿದೆ. ಈ ವೇಳೆ, ಉತ್ತರಹಳ್ಳಿ ನಿವಾಸಿ ಶ್ರೀನಿವಾಸ್ ಎಂಬುವವರಿಗೆ ಸೇರಿದ ಎಎಸ್‌ಆರ್‌ ಮಾರ್ಕೆಟಿಂಗ್ ಮತ್ತು ಯುನಿಕಾರ್ನ್‌ ಮಾರ್ಕೆಟಿಂಗ್ ಎಂಬ ಹೆಸರಿನ ಗೋದಾಮಿಗೆ ಸಂಪರ್ಕಿಸಿದ್ದ ವಿದ್ಯುತ್ ​​​ತಂತಿಯಿಂದ ಶಾರ್ಟ್​ಸರ್ಕ್ಯೂಟ್ ಉಂಟಾಗಿ ಗುರುವಾರ ತಡರಾತ್ರಿ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಗೋದಾಮಿ​ನಲ್ಲಿ 100ಕ್ಕೂ ಹೆಚ್ಚು ಜನ ಕೆಲಸ ಮಾಡುತ್ತಿದ್ದರು. ಆದರೆ, ಅಗ್ನಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ವಾಹನಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದರು. ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದರು. ಆದರೆ, 20 ನಿಮಿಷಗಳಲ್ಲಿ ದಾಖಲೆಗಳನ್ನು ಒಳಗೊಂಡಿರುವ ಕಂಪ್ಯೂಟರ್ ಸಿಸ್ಟಮ್‌ಗಳನ್ನು ಹೊರತುಪಡಿಸಿ, ₹5 ಕೋಟಿಗೂ ಹೆಚ್ಚು ಮೌಲ್ಯದ ಪಾದರಕ್ಷೆಗಳು ಸುಟ್ಟುಹೋದವು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“₹20 ಲಕ್ಷ ಮೌಲ್ಯದ ಪಾದರಕ್ಷೆಗಳನ್ನು ಗೋದಾಮಿಗೆ ವ್ಯವಸ್ಥಾಪಕ ಶ್ರೀನಿವಾಸ್ ಅವರು ಮುಂದೆ ನಿಂತು ಇಳಿಸಿದ್ದಾರೆ. ಅವರು ಹೋದ ಸ್ವಲ್ಪ ಸಮಯದಲ್ಲೇ ಬೆಂಕಿ ಕಾಣಿಸಿಕೊಂಡಿದೆ. ಗೋದಾಮಿನ ಗೇಟ್ ಬಳಿ ರಿವರ್ಸ್ ತೆಗೆದುಕೊಳ್ಳುತ್ತಿದ್ದ ಟ್ರಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ, ಕಳಪೆ  ಗುಣಮಟ್ಟದ ವಿದ್ಯುತ್ ಕಂಬ ಮುರಿದು ಬಿದ್ದಿದೆ” ಎಂದು ಯೂನಿಕಾರ್ನ್ ಮಾರ್ಕೆಟಿಂಗ್‌ನ ವ್ಯವಸ್ಥಾಪಕರ ಪತ್ನಿ ಮತ್ತು ಉದ್ಯೋಗಿಯೂ ಆಗಿರುವ ಅಂಬಿಕಾ ಶ್ರೀನಿವಾಸ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೆ.16 ರಂದು ‘ಜಿ. ರಾಜಶೇಖರ್ ಸ್ಮಾರಕ ಜ್ಞಾನ ವೇತನ 2023’ ಪ್ರಾರಂಭ

ವಿದ್ಯುತ್ ಕಂಬವು ರಸ್ತೆಯ ಮೇಲೆ ಕುಸಿದು ಬಿದ್ದಿದ್ದು, ವೈರಿಂಗ್ ಸಡಿಲಗೊಂಡಿದ್ದರಿಂದ ಗೋದಾಮಿನೊಳಗೆ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಕಂಪನಿಗಳು ಮತ್ತು ಬಹುತೇಕ ಅಂಗಡಿಗಳಿಗೆ ಶೂ, ಚಪ್ಪಲಿಗಳು ಈ ಗೋದಾಮಿನಿಂದಲೇ ಪೂರೈಕೆ ಆಗುತ್ತಿದ್ದವು. ಹೀಗಾಗಿ ಕೋಟ್ಯಂತರ ರೂಪಾಯಿ ಮೌಲ್ಯದ ಚಪ್ಪಲಿ ಶೂಗಳನ್ನು ಇಲ್ಲಿ ಶೇಖರಿಸಿ ಇಡಲಾಗಿತ್ತು.

ಸ್ಥಳಕ್ಕೆ ಭೇಟಿ ನೀಡಿದ ಕೆಂಗೇರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...