ಬೆಂಗಳೂರು | ₹10,000 ಲಂಚ ಪಡೆದಿದ್ದ ಸರ್ಕಾರಿ ಆಸ್ಪತ್ರೆ ವೈದ್ಯ ಅಮಾನತು

Date:

  • ಲೋಕಾಯುಕ್ತ ತನಿಖೆ ಆಧರಿಸಿ ಪ್ರಸೂತಿ ವೈದ್ಯ ರಾಮಚಂದ್ರ ವಿರುದ್ಧ ಕ್ರಮಕೈಗೊಂಡ ಆರೋಗ್ಯ ಇಲಾಖೆ
  • ಬಡ ಗರ್ಭಿಣಿ ಮಹಿಳೆಗೆ ಸಿಸೇರಿಯನ್ ಮಾಡಲು ₹15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯ ರಾಮಚಂದ್ರ

ಬೆಂಗಳೂರಿನ ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಗರ್ಭಿಣಿಗೆ ಸಿಸೇರಿಯನ್ ಮಾಡಲು ₹10 ಸಾವಿರ ಲಂಚ ಪಡೆದಿದ್ದ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ರಾಮಚಂದ್ರರನ್ನು ಅಮಾನತುಗಳಿಸಿ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಆದೇಶ ಹೊರಡಿಸಿದ್ದಾರೆ.

ಬಡ ಜನರಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕಾದ ಸರ್ಕಾರಿ ಆಸ್ಪತ್ರೆಗಳಲ್ಲಿ ಲಂಚ ಪಡೆದು ಚಿಕಿತ್ಸೆ ನೀಡುವುದು ಗಂಭೀರ ಪ್ರಕರಣವಾಗಿದ್ದು, ಲೋಕಾಯುಕ್ತ ತನಿಖೆಯಲ್ಲಿ ಲಂಚ ಪಡೆದಿರುವುದು ಸಾಬೀತಾಗಿದೆ. ಈ ಹಿನ್ನೆಲೆ, ಕೂಡಲೇ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆ ಆಯುಕ್ತರಿಗೆ ಸೂಚನೆ ನೀಡಿದ್ದರು.

ಲೋಕಾಯುಕ್ತ ತನಿಖೆ ಆಧರಿಸಿ ಪ್ರಸೂತಿ ವೈದ್ಯ ರಾಮಚಂದ್ರ ವಿರುದ್ಧ ಆರೋಗ್ಯ ಇಲಾಖೆ ಕ್ರಮಕೈಗೊಂಡಿದೆ. ಇಲಾಖೆ ಈ ಕ್ರಮ ಕೈಗೊಂಡು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ಜನರಿಂದ ಹಣ ವಸೂಲಿ ಮಾಡುವ ವೈದ್ಯರಿಗೆ ಎಚ್ಚರಿಕೆ ಸಂದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಪ್ರಕರಣ ?

ಬೆಂಗಳೂರಿನ ಯಲಹಂಕದ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಬಡ ಗರ್ಭಿಣಿ ಮಹಿಳೆಗೆ ಸಿಸೇರಿಯನ್ ಮಾಡಲು ವೈದ್ಯರು ₹15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ರಾಮಚಂದ್ರ ಕೆ.ಸಿ ಎಂಬುವವರು ವಾರ್ಡ್‌ ಬಾಯ್ ಮೂಲಕ ₹15,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಕುಟುಂಬದವರು ಚೌಕಾಸಿ ಮಾಡಿದ ಬಳಿಕ ₹11 ಸಾವಿರ ಪಡೆಯಲು ಒಪ್ಪಿಕೊಂಡಿದ್ದರು.

ಗರ್ಭಿಣಿ ಮಂಜುಳಾ(20) ಎಂಬ ಮಹಿಳೆಗೆ ಸಿಸೇರಿಯನ್ ಮಾಡಲು ವೈದ್ಯರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ಶನಿವಾರ ಮಂಜುಳಾ ಪತಿ ಅಂಗಪ್ಪ ದೂರು ನೀಡಿದ್ದರು. ಮಂಜುಳಾಗೆ ಸಿಸೇರಿಯನ್ ಆಗಿ ಹೆಣ್ಣು ಮಗು ಜನಿಸಿದ ಬಳಿಕ ಪತಿ ಅಂಗಪ್ಪ ₹10,000 ಹಣವನ್ನು ವೈದ್ಯ ರಾಮಚಂದ್ರ ಕೆ.ಸಿ ಸೂಚನೆ ಮೇರೆಗೆ ಆಸ್ಪತ್ರೆಯ ವಾರ್ಡ್ ಬಾಯ್ ವಾಹಿದ್ ಎಂಬುವವರಿಗೆ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು| ಲೋಕಾಯುಕ್ತ ತನಿಖೆಯಿಂದ ಯಲಹಂಕ ಸರ್ಕಾರಿ ಆಸ್ಪತ್ರೆಯ ಭ್ರಷ್ಟಾಚಾರ ಬಯಲು

ಆಸ್ಪತ್ರೆಯ ವಾರ್ಡ್‌ಬಾಯ್ ಲೋಕಾಯುಕ್ತ ಪೊಲೀಸರ ಎದುರು ಹಣ ಪಡೆದಿರುವ ಬಗ್ಗೆ ಒಪ್ಪಿಕೊಂಡಿದ್ದನು. ನಂತರ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ. ರಾಮಚಂದ್ರ ಜತೆ ವಾರ್ಡ್‌ ಬಾಯ್ ಹಣ ಪಡೆದಿರುವ ಬಗ್ಗೆ ತನಿಖಾ ತಂಡದ ಎದುರು ಮೊಬೈಲ್‌ನಲ್ಲಿ ಮಾತನಾಡಿದ್ದರು.

ವೈದ್ಯರ ವಿರುದ್ಧ ಸು-ಮೋಟೋ ಪ್ರಕರಣ ದಾಖಲಿಸಿಕೊಂಡಿದ್ದರು. ವೈದ್ಯರ ವಿರುದ್ಧ ಇಲಾಖಾ ವಿಚಾರಣೆ ಬಾಕಿ ಇರಿಸಿ ಸೇವೆಯಿಂದ ಅಮಾನತುಗೊಳಿಸಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಆಸ್ಪತ್ರೆಯಲ್ಲಿ ನಡೆದಿರುವ ಅವ್ಯವಹಾರಗಳ ಕುರಿತು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...