ಬೆಂಗಳೂರು | ಅನುಮಾನದಿಂದ ಪತ್ನಿಯನ್ನೇ ಕೊಚ್ಚಿ ಕೊಂದ ಪತಿರಾಯ

Date:

  • 12 ವರ್ಷಗಳ ಹಿಂದೆ ನಾಗರತ್ನಳನ್ನು ಮದುವೆಯಾಗಿದ್ದ ಅಯ್ಯಪ್ಪ
  • ಚಾಕುವಿನಿಂದ ಮನಸೋ ಇಚ್ಛೆ ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ

ಅನುಮಾನ ಪಟ್ಟು ಪತ್ನಿಯನ್ನೇ ಪತಿ ಕೊಲೆಗೈದಿದ್ದು, ಬೆಂಗಳೂರಿನ ಬಸವೇಶ್ವರ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನಾಗರತ್ನ (32) ಹತ್ಯೆಯಾದ ಮಹಿಳೆ. ಅಯ್ಯಪ್ಪ ಪತ್ನಿಯನ್ನು ಕೊಂದ ಪತಿ. ಅನೈತಿಕ ಸಂಬಂಧದ ಆರೋಪದ ಹಿನ್ನೆಲೆ, ಮನಸೋ ಇಚ್ಛೆ ಚಾಕುವಿನಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದಾನೆ. ಈ ಕುರಿತಂತೆ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗರತ್ನ ಅಪ್ಪ-ಅಮ್ಮ ಇಲ್ಲದೇ ಅನಾಥಾಶ್ರಮದಲ್ಲಿ ಬೆಳೆದಿದ್ದರು. ಕಳೆದ 12 ವರ್ಷಗಳ ಹಿಂದೆ ಅಯ್ಯಪ್ಪ ನಾಗರತ್ನಳನ್ನು ಮದುವೆಯಾಗಿದ್ದನು. ದಂಪತಿಗೆ 11 ವರ್ಷದ ಮಗ ಹಾಗೂ 7 ವರ್ಷದ ಮಗಳು ಇದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಬ್ಬರು ಮಕ್ಕಳನ್ನು ಅಯ್ಯಪ್ಪನೂ ತನ್ನ ಅಕ್ಕನ ಮನೆಯಲ್ಲಿ ಬಿಟ್ಟಿದ್ದನು. ಕಳೆದ ಕೆಲವು ದಿನಗಳಿಂದ ಅಯ್ಯಪ್ಪ ಹೆಂಡತಿ ಮೇಲೆ ಅನುಮಾನ ಪಡಲು ಆರಂಭಿಸಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಪೀಪಲ್ಸ್‌ ಮ್ಯಾನ್‌’ ಖ್ಯಾತಿಯ ಇನ್ಸ್‌ಪೆಕ್ಟರ್‌ ಮಂಜುನಾಥ್‌ ನಿಧನ

ಕಳೆದ ಮೂರು ದಿನದಿಂದ ದಂಪತಿಗಳ ಮಧ್ಯೆ ಈ ವಿಚಾರವಾಗಿ ಜಗಳವಾಗುತ್ತಿತ್ತು. ಈ ವೇಳೆ, ಚಾಕುವಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿ, ಮಹಿಳೆಯ ಗುಪ್ತಾಂಗಕ್ಕೂ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಸದ್ಯ ಪತ್ನಿ ನಾಗರತ್ನ ಕೊಲೆಗೈದ ಪತಿ ಅಯ್ಯಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಬಸವೇಶ್ವರ ನಗರ ಪೊಲೀಸರು ಘಟನಾ ಸ್ಥಳದ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...