ಬೆಂಗಳೂರು | ಕೆಐಎನಲ್ಲಿ ಚರಂಡಿ ಸ್ವಚ್ಛಗೊಳಿಸುತ್ತಿದ್ದ ಕಾರ್ಮಿಕ ಸಾವು

Date:

  • ಪಿಎಸ್‌ಎನ್ ಗ್ರೀನ್ ಕಂಪನಿಯಲ್ಲಿ ದಿನಗೂಲಿ ಕಾರ್ಮಿಕರಾಗಿದ್ದ ರಾಜೇಂದ್ರ ಸಿಂಗ್
  • ಅಧಿಕಾರಿಗಳ ನಿರ್ಲಕ್ಷವೇ ಕಾರ್ಮಿಕನ ಸಾವಿಗೆ ಕಾರಣ ; ದೂರು ದಾಖಲಿಸಿದ ಮಗ

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಜೋರು ಮಳೆಯಾಗುತ್ತಿದ್ದು, ನಗರದಲ್ಲಿ 20ಕ್ಕೂ ಹೆಚ್ಚು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಇಬ್ಬರು ಸಾವಿನ್ನಪ್ಪಿದ್ದಾರೆ. ಈ ಬೆನ್ನಲ್ಲೇ, ಕೆಂಪೇಗೌಡ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಕೆಐಎ) ಆವರಣದಲ್ಲಿರುವ ಚರಂಡಿ ಸ್ವಚ್ಛಗೊಳಿಸುತ್ತಿದ್ದ 52 ವರ್ಷದ ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾರೆ.

ರಾಜೇಂದ್ರ ಸಿಂಗ್ ಮೃತ ದುರ್ದೈವಿ. ಇವರು ಮೂಲತಃ ಮಧ್ಯಪ್ರದೇಶದ ಮಂಡ್ಲಾದವರು. “ರಾಜೇಂದ್ರ ಸಿಂಗ್‌ಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಒದಗಿಸದ ಕಾರಣ ಅವರು ಚರಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ” ಎಂದು ಕೆಐಎಎಲ್ ಪೊಲೀಸ್‌ ಠಾಣೆಗೆ ರಾಜೇಂದ್ರ ಸಿಂಗ್‌ ಮಗ ರವೀಂದ್ರ ಸಿಂಗ್ ದೂರು ನೀಡಿದ್ದಾರೆ.

ರಾಜೇಂದ್ರ ಸಿಂಗ್ ಮತ್ತು ರವೀಂದ್ರ ಸಿಂಗ್ ಇಬ್ಬರು ಪಿಎಸ್‌ಎನ್ ಗ್ರೀನ್ ಎಂಬ ಕಂಪನಿಯಲ್ಲಿ ದಿನಗೂಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಕಂಪನಿಯು ಇವರಿಬ್ಬರಿಗೆ ನಾನಾ ಸ್ಥಳಗಳಲ್ಲಿ ಕೆಲಸ ನಿಯೋಜಿಸುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರವೀಂದ್ರ, ಅವರ ತಂದೆ ಮತ್ತು ಇತರ ಕೆಲವರನ್ನು ವಿಮಾನ ನಿಲ್ದಾಣದ ಆವರಣದಲ್ಲಿರುವ ಚರಂಡಿ ಸ್ವಚ್ಛಗೊಳಿಸಲು ನಿಯೋಜಿಸಲಾಗಿತ್ತು. ಈ ಹಿನ್ನೆಲೆ, ತಂದೆ-ಮಗ ಮೇ 16 ರಂದು ಬೆಂಗಳೂರಿಗೆ ಬಂದಿದ್ದರು.

ಮೇ 19 ರಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಕೆಐಎಯ ಕಾರ್ಗೋ ರಸ್ತೆಯಲ್ಲಿರುವ ಬ್ರಾವೋ-1 ಮುಂಭಾಗದ ಚರಂಡಿ-8 ರಿಂದ ಮಣ್ಣು ಮತ್ತು ಮರದ ಎಲೆಗಗಳನ್ನು ತೆರವುಗೊಳಿಸಲು ಅವರಿಗೆ ಹೇಳಲಾಗಿತ್ತು. ಮಧ್ಯಾಹ್ನ 2.30ರ ಸುಮಾರಿಗೆ ರಾಜೇಂದ್ರ ಸಿಂಗ್ ಚರಂಡಿ ಒಳಗೆ ಇಳಿದಿದ್ದರು. ಮೇಲೆ ಬರಲಾಗದೆ ಸಹಾಯಕ್ಕಾಗಿ ಕಿರುಚಿಕೊಂಡಿದ್ದರು. ಈ ವೇಳೆ, ಮಗ ರವೀಂದ್ರ ತಂದೆಯ ಸಹಾಯಕ್ಕೆ ಧಾವಿಸಿ ಬಂದು ತಂದೆಯನ್ನು ಹೊರಗೆ ತೆಗೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೇ 24ರಂದು ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ, ಇಲ್ಲಿದೆ ನೋಡಿ

ರಾಜೇಂದ್ರ ಅವರನ್ನು ಇತರ ಕಾರ್ಮಿಕರ ಸಹಾಯದಿಂದ ಮೈಲನಹಳ್ಳಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು.

ರವೀಂದ್ರ ಅವರ ದೂರಿನ ಆಧಾರದ ಮೇಲೆ ಕೆಐಎಎಲ್ ಪೊಲೀಸರು ಪಿಎಸ್‌ಎನ್ ಗ್ರೀನ್‌ನ ಎಂಡಿ ಪಿ.ಎಸ್ ನಾಯ್ಡು ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯವೇ ಕಾರ್ಮಿಕನ ಸಾವಿಗೆ ಕಾರಣ ಎಂದು ಪ್ರಕರಣದ ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...