ಬೆಂಗಳೂರು | ಸ್ಕೂಟರ್‌ಗೆ ಖಾಸಗಿ ಬಸ್‌ ಡಿಕ್ಕಿ; ವಿದ್ಯಾರ್ಥಿನಿ ಸಾವು

Date:

  • ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
  • ಮಗಳ ಕನಸು ನನಸು ಮಾಡಲು ಮಗಳಿಗೆ ಸಹಕಾರ ನೀಡಿದ್ದ ಪೋಷಕರು

ರಾಜಧಾನಿ ಬೆಂಗಳೂರಿನಲ್ಲಿ ಪದವಿ ಪೂರ್ವ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಟ್ಯೂಷನ್‌ಗೆಂದು ತಂದೆ ಜತೆಗೆ ಸ್ಕೂಟರ್‌ನಲ್ಲಿ ತೆರಳುವಾಗ ಖಾಸಗಿ ಬಸ್‌ ಢಿಕ್ಕೆ ಹೊಡೆದಿದ್ದು, ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.

ದಿಶಾ (18) ಮೃತಪಟ್ಟ ವಿದ್ಯಾರ್ಥಿನಿ. ಸೋಮವಾರ ಬೆಳಿಗ್ಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಟ್ಯೂಷನ್ ಸೆಂಟರ್‌ಗೆ ತೆರಳುವ ವೇಳೆ ಜಾಲಹಳ್ಳಿ ಕ್ರಾಸ್‌ ಬಳಿ ಈ ಘಟನೆ ಸಂಬವಿಸಿದೆ.

ದಿಶಾ ಮಲ್ಲೇಶ್ವರದ ಎಂಇಎಸ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದಳು. ಎಂಜಿನಿಯರ್ ಆಗಬೇಕೆಂದು ಆಸೆ ಇಟ್ಟುಕೊಂಡಿದ್ದಳು. ಹಾಗಾಗಿ, ಪ್ರತಿ ದಿನ ಬೆಳಿಗ್ಗೆ ಟ್ಯೂಷನ್‌ಗೆ ತೆರಳುತ್ತಿದ್ದಳು. ಮಗಳ ಕನಸನ್ನು ನನಸು ಮಾಡಲು ಪೋಷಕರು ಕೂಡ ಮಗಳಿಗೆ ಸಹಕಾರ ನೀಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಿಶಾ ತನ್ನ ತಂದೆಯೊಂದಿಗೆ ಯಶವಂತಪುರದ ಕಡೆಗೆ ಚಲಿಸುತ್ತಿದ್ದಳು. ಅದೇ ಮಾರ್ಗದಲ್ಲಿ ಖಾಸಗಿ ಬಸ್‌ ಚಲಿಸುತ್ತಿತ್ತು. ಸ್ಕೂಟರ್‌ ಸರ್ವೀಸ್‌ ರಸ್ತೆಯಲ್ಲಿ ಚಲಿಸುತ್ತಿದ್ದರೆ, ಖಾಸಗಿ ಬಸ್‌ ಮುಖ್ಯರಸ್ತೆಯಲ್ಲಿ ಸಂಚರಿಸುತ್ತಿತ್ತು. ಸಿಗ್ನಲ್ ಬಿಟ್ಟಾಗ ಬಸ್‌ ಚಾಲಕ ಏಕಾಏಕಿ ಸರ್ವೀಸ್‌ ರಸ್ತೆಗೆ ಪಲ್ಟಿ ಹೊಡೆದಿದೆ. ದ್ವಿಚಕ್ರ ವಾಹನ ಬಸ್‌ಗೆ ಡಿಕ್ಕಿ ಹೊಡೆದಿದೆ. ದ್ವಿಚಕ್ರ ವಾಹನ ದಿಶಾ ಮೇಲೆ ಬಿದ್ದಿದೆ. ಈ ವೇಳೆ ಆಕೆಯ ಕಾಲಿಗೆ ಬಲವಾದ ಪೆಟ್ಟು ಬಿದ್ದು, ಮೂಳೆ ಕಾಣಿಸುತ್ತಿತ್ತು. ಸ್ಥಳೀಯರು ತಕ್ಷಣ ಆಕೆಯನ್ನು ಸಂಜೀವಿನಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲು ಮಾಡಿದ್ದಾರೆ” ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.

“ಆಸ್ಪತ್ರೆ ಸಿಬ್ಬಂದಿ ದಿಶಾಳನ್ನು ಮತ್ತೊಂದು ಆಸ್ಪತ್ರೆಗೆ ಸೇರಿಸಬೇಕೆಂದು ಹೇಳಿದ ಹಿನ್ನೆಲೆ, ಆಂಬುಲೆನ್ಸ್‌ನಲ್ಲಿ ಗೊರಗುಂಟೆಪಾಳ್ಯದ ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ವಿದ್ಯಾರ್ಥಿನಿ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ” ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬ್ರ್ಯಾಂಡ್ ಬೆಂಗಳೂರು | ನಾಗರಿಕ ಸಮಾಜ ಸಂಸ್ಥೆಗಳಿಂದ ಹರಿದು ಬಂದ ಸಲಹೆ ಸೂಚನೆಗಳು

“ದಿಶಾ ಅವರ ತಂದೆ ಸತೀಶ್ ಪವಾಡ ಸದೃಶ ರೀತಿಯಲ್ಲಿ ಬದುಕುಳಿದಿದ್ದು, ಅವರು ರಸ್ತೆಯ ಇನ್ನೊಂದು ಬದಿಯಲ್ಲಿ ಬಿದ್ದಿದ್ದರು” ಎಂದು ಮತ್ತೊಬ್ಬರು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಬಸ್ ಚಾಲಕನ ಅಚಾತುರ್ಯದಿಂದಲೇ ಈ ಘಟನೆ ಸಂಬವಿಸಿದೆ ಎಂದು ಸ್ಥಳಿಯರು ಆರೋಪಿಸಿದ್ದಾರೆ. ಖಾಸಗಿ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಿ ಬಸ್‌ ಅನ್ನು ಪೊಲೀಸ್‌ ಠಾಣೆಗೆ ಕಳುಹಿಸಲಾಗಿದೆ. ಬಸ್ ಚಾಲಕನನ್ನು ಬಂಧಿಸಲಾಗಿದ್ದು, ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...