ಬೆಂಗಳೂರು | ಪತ್ನಿಯ ನಂಬರ್ ಕೇಳಿದ ಸ್ನೇಹಿತನಿಗೆ ಥಳಿಸಿದ ರೌಡಿಶೀಟರ್‌; 10 ಮಂದಿಯಿಂದ ಮನೆಗೆ ದಾಳಿ

Date:

ಪತ್ನಿಯ ನಂಬರ್ ಕೇಳಿದ ಸ್ನೇಹಿತನಿಗೆ ರೌಡಿಶೀಟರ್‌ನೊಬ್ಬ ಧಳಿಸಿದ್ದು, ಬಳಿಕ ಹಲ್ಲೆಗೊಳಗಾದ ವ್ಯಕ್ತಿ 10 ಮಂದಿ ಗುಂಪಿನೊಂದಿಗೆ ರೌಡಿಶೀಟರ್ ಮನೆಗೆ ತೆರಳಿ ದಾಳಿ ನಡೆಸಿದ ಘಟನೆ ಬೆಂಗಳೂರಿನ ಹೊಯ್ಸಳ ನಗರದಲ್ಲಿ ನಡೆದಿದೆ.

ಬೆಂಗಳೂರಿನ ಚಂದ್ರಾಲೇಔಟ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಮೇಶ್ ಮತ್ತು ರೌಡಿಶೀಟರ್ ಕೆಂಪೇಗೌಡ ಅಲಿಯಾಸ್ ಕೆಂಪ ಇಬ್ಬರು ಸ್ನೇಹಿತರು.

ರಮೇಶ್ ಮತ್ತು ರೌಡಿಶೀಟರ್ ಕೆಂಪ ಇಬ್ಬರು ಬಾರ್‌ಗೆ ತೆರಳಿ ಮಧ್ಯ ಸೇವನೆ ಮಾಡಿದ್ದರು. ಕುಡಿದ ಮತ್ತಿನಲ್ಲಿದ್ದ ರಮೇಶ್, ರೌಡಿಶೀಟರ್ ಕೆಂಪನಿಗೆ ಆತನ ಹೆಂಡತಿಯ ನಂಬರ್ ಕೊಡುವಂತೆ ಕೇಳಿದ್ದಾನೆ. ರೌಡಿಶೀಟರ್ ಕೆಂಪ ಇದಕ್ಕೆ ಕೋಪಗೊಂಡು ರಮೇಶ್‌ಗೆ ಥಳಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆ ಬಳಿಕ ರೌಡಿಶೀಟರ್ ಕೆಂಪ ಮನೆಗೆ ಬಂದಿದ್ದಾನೆ. ಕೆಂಪನ ಮೇಲೆ ದ್ವೇ‍ಷಕ್ಕೆ ಬಿದ್ದ ರಮೇಶ್ ತನ್ನ ಸಹಚರರಾದ ಮಂಜುನಾಥ್, ಜವರೇಗೌಡ, ಕೃಷ್ಣಮೂರ್ತಿ ಸೇರಿದಂತೆ 10ಕ್ಕೂ ಹೆಚ್ಚು ಮಂದಿಯೊಂದಿಗೆ ಹೊಯ್ಸಳ ನಗರದಲ್ಲಿರುವ ಕೆಂಪನ ಮನೆಗೆ ತೆರಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೆಎಸ್‌ಆರ್‌ಟಿಸಿ | ಟಿಕೆಟ್‌ ಪಡೆಯದೆ ಪ್ರಯಾಣ ಬೆಳೆಸಿದ್ದ 3208 ಪ್ರಯಾಣಿಕರಿಗೆ ದಂಡ

ರಮೇಶ್ ನನ್ನನ್ನು ಯಾಕೆ ಹೊಡೆದೆ ಎಂದು ಕೆಂಪನನ್ನು ಪ್ರಶ್ನಿಸಿದ್ದಾನೆ. ಈ ವೇಳೆ, ಕೆಂಪನ ಮನೆಯ ಮುಂದೆ ಗಲಾಟೆ ಆರಂಭವಾಗಿದೆ. ಗಲಾಟೆ ಸಮಯದಲ್ಲಿ ರಮೇಶ್ ಮತ್ತಿತರ ಮೇಲೆ ಕೆಂಪ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ.

ರಮೇಶ್ ಮತ್ತು ಆತನ ಸಹಚರರು ಕೆಂಪನ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರ ಪರಿಣಾಮ ಮನೆಯ ಕಿಟಕಿ ಗಾಜುಗಳು ಪುಡಿ‌ಪುಡಿಯಾಗಿವೆ. ಮನೆಯ ಬಾಗಿಲು ಮುರಿದಿದೆ.

ಘಟನೆ ಸಂಬಂಧ ಚಂದ್ರಾಲೇಔಟ್ ಠಾಣಾ ಪೊಲೀಸರು ರೌಡಿಶೀಟರ್ ಕೆಂಪನನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...