ಬೆಂಗಳೂರು | ಉಚಿತ ಟಿಕೆಟ್‌ಗೆ ಐಡಿ ತೋರಿಸದೇ ಬಸ್‌ ನಿರ್ವಾಹಕನ ಜತೆ ಯುವತಿ ಜಗಳ

Date:

  • ಬನಶಂಕರಿ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಘಟನೆ
  • ಕರ್ನಾಟಕದ ಮಹಿಳೆಯರಿಗೆ ಮಾತ್ರ ಶಕ್ತಿ ಯೋಜನೆ

ಕಾಂಗ್ರೆಸ್‌ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ತನ್ನ ಐದು ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆಯನ್ನು ಜೂನ್ 11ರಂದು ಜಾರಿಗೆ ತಂದಿತ್ತು. ಈ ಯೋಜನೆಯು ಕರ್ನಾಟಕದ ಮಹಿಳೆಯರಿಗೆ ಮಾತ್ರ ಅಲ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಹೀಗಾಗಿ, ಮಹಿಳೆಯರು ರಾಜ್ಯದ ನಿವಾಸಿ ಎಂಬುದಕ್ಕೆ ಗುರುತಿನ ಚೀಟಿ ತೋರಿಸಿ ಟಿಕೆಟ್‌ ಪರೆದುಕೊಳ್ಳಬೇಕೆಂದು ಸರ್ಕಾರ ಹೇಳಿದೆ. ಆದರೆ, ಟೆಕ್ಕಿ ಯುವತಿಯೊಬ್ಬರು ಉಚಿತ ಟಿಕೆಟ್‌ ಪಡೆಯಲು ಸೂಕ್ತ ದಾಖಲೆ ತೋರಿಸದೆ, ಬಿಎಂಟಿಸಿ ನಿರ್ವಾಹಕರ ಜತೆಗೆ ಜಗಳ ತೆಗೆದಿದ್ದಾರೆ.

ಬಿಎಂಟಿಸಿ ನಿರ್ವಾಹಕ ಜತೆಗೆ ಟೆಕ್ಕಿ ಯುವತಿ ಜಗಳವಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬನಶಂಕರಿ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಬಿಎಂಟಿಸಿ ನಿರ್ವಾಹಕ ಆಧಾರ ಕಾರ್ಡ್‌ ಅಥವಾ ವೋಟರ್‌ ಐಡಿ ತೋರಿಸಿ ಉಚಿತವಾಗಿ ಪ್ರಯಾಣಿಸಿ ಇಲ್ಲವಾದರೆ ಟಿಕೆಟ್ ತೆಗೆದುಕೊಳ್ಳಿ ಎಂದು ಕೇಳಿದ್ದಾರೆ.

ಇದಕ್ಕೆ ಕೆರಳಿದ ಯುವತಿ ನಾನು ಕೇಂದ್ರ ಸರ್ಕಾರದ ಸಿಬ್ಬಂದಿ ನಾನು ದುಡ್ಡು ಕೊಡುವುದಿಲ್ಲ. ನೀನು ಏನು ಬೇಕಾದರೂ ಮಾಡಿಕೋ ಎಂದು ಅವಾಜ್ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಬಿಎಂಟಿಸಿ ನಿರ್ವಾಹಕ ನೀವು ಕೇಂದ್ರ ಸರ್ಕಾರದ ಉದ್ಯೋಗಿ ಎಂಬುದಕ್ಕೆ ಗುರುತಿನ ಚೀಟಿ ತೋರಿಸಿ ಎಂದರೂ ಕೇಳದ ಯುವತಿ ಬಸ್‌ನಲ್ಲಿ ಗಲಾಟೆ ಆರಂಭಿಸಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೈಯಪ್ಪನಹಳ್ಳಿ-ಕೆ.ಆರ್‌.ಪುರ ನಡುವೆ ಮೊದಲ ಮೆಟ್ರೋ ಪ್ರಾಯೋಗಿಕ ಸಂಚಾರ ಯಶಸ್ವಿ

“ಕೇಂದ್ರ ಸರ್ಕಾರದ ಉದ್ಯೋಗಕ್ಕೆ ಸಂಬಂಧಿಸಿದ ಗುರುತಿನ ಚೀಟಿಯಲ್ಲಿ ನಿವಾಸದ ವಿಳಾಸವಿದೆ. ಆ ವಿಳಾಸ ಕರ್ನಾಟಕದ್ದು. ಅದನ್ನು ಪರಿಗಣಿಸಿ ಪ್ರಯಾಣಕ್ಕೆ ಅನುಮತಿ ನೀಡಿ ಇಲ್ಲದಿದ್ದರೆ, ನಿಮ್ಮ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ” ಎಂದು ಯುವತಿ ನಿರ್ವಾಹಕರಿಗೆ ಹೇಳಿದ್ದಾರೆ.

ಈ ವೇಳೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಸಹ ಯುವತಿಗೆ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಸೇವೆ ನೀಡಬೇಕಿದ್ದರೆ ಅವರು ಕರ್ನಾಟಕದ ವಸತಿ ವಿಳಾಸಗಳೊಂದಿಗೆ ಸರ್ಕಾರಿ ಗುರುತಿನ ಪುರಾವೆಗಳನ್ನು ಒದಗಿಸಬೇಕು ಎಂದು ಹೇಳಿದ್ದಾರೆ. ಇದಕ್ಕೂ ಯುವತಿ ಕೋಪಗೊಂಡು ಸಹ ಪ್ರಯಾಣಿಕರ ಮೇಲೆ ರೇಗಾಡಿದ್ದಾಳೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...