ಬೆಂಗಳೂರು | ಪತಿಗೆ ಕಷ್ಟದ ಅರಿವು ಮೂಡಿಸಲು ಹೋಗಿ ಸ್ವತಃ ಪೇಚಿಗೆ ಸಿಲುಕಿದ ಪತ್ನಿ

Date:

ಕೆಲಸ ಮಾಡದೇ ಮನೆಯಲ್ಲಿ ಇದ್ದ ಗಂಡನಿಗೆ ಕಷ್ಟದ ಅರಿವು ಮೂಡಿಸಲು ಹೋಗಿ ಸ್ವತಃ ಪತ್ನಿಯೇ ಪೇಚಿಗೆ ಸಿಲುಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಗಂಡನಿಗೆ ಬುದ್ಧಿ ಕಲಿಸಲು ಪತ್ನಿ ಕಳ್ಳತನದ ನಾಟಕವಾಡಿದ್ದು, ಮಲ್ಲೇಶ್ವರಂ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಗಂಡ ಮನೆಯಲ್ಲಿದ್ದುಕೊಂಡು ಊಟ ಮಾಡಿಕೊಂಡು ಆರಾಮಾಗಿ ಸುತ್ತಾಡಿಕೊಂಡು ಇರುತ್ತಾನೆ. ಆದರೆ, ಕೆಲಸ ಮಾಡಲು ತೆರಳುತ್ತಿರಲಿಲ್ಲ. ಇದರಿಂದ ಈತನ ಪತ್ನಿ ಬೇಸತ್ತಿದ್ದಳು. ಗಂಡನಿಗೆ ಜೀವನದ ಕಷ್ಟಗಳನ್ನು ತಿಳಿಸಬೇಕು ಹಾಗೂ ಅವನು ಈ ಕಷ್ಟಗಳನ್ನು ನೋಡಿ ಕೆಲಸಕ್ಕೆ ತೆರಳುವಂತಾಗಬೇಕು ಎಂದು ಪತ್ನಿ ತನ್ನ ಸ್ನೇಹಿತರ ಜೊತೆಗೆ ಸೇರಿ ಕಳ್ಳತನದ ನಾಟಕವಾಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆ ಬ್ಯಾಂಕ್‌ನಿಂದ 109ಗ್ರಾಂ ಚಿನ್ನವನ್ನು ಬಿಡಿಸಿಕೊಂಡು ಗಾಡಿಯ ಡಿಕ್ಕಿಯಲ್ಲಿಟ್ಟಿದ್ದಳು. ಬಳಿಕ ಮಕ್ಕಳನ್ನು ಟ್ಯೂಷನ್‌ಗೆ ಬಿಟ್ಟು ಬಂದಿದ್ದಳು. ಇದಾದ ಬಳಿಕ ಅತ್ತಿಗೆ ಮನೆಗೆ ತೆರಳಿ ನಂತರ ಮಲ್ಲೇಂಶ್ವರಂನ 13ನೇ ಕ್ರಾಸ್‌ನಲ್ಲಿರುವ ಟ್ಯೂಷನ್‌ ಬಳಿ ಬಂದಿದ್ದಳು. ಈ ವೇಳೆ ತನ್ನ ಗಾಡಿಯನ್ನು ಅಲ್ಲಿಯೇ ನಿಲ್ಲಿಸಿ, ಕೀಯನ್ನು ಗಾಡಿಯ ಫುಟ್‌ಮ್ಯಾಟ್‌ನಲ್ಲಿ ಬಚ್ಚಿಟ್ಟಿದ್ದಳು.

ಮಹಿಳೆಯ ಪೂರ್ವಯೋಜಿತ ಉಪಾಯದಂತೆ ತನ್ನ ಸ್ನೇಹಿತರಿಗೆ ಗಾಡಿ ನಿಲ್ಲಿಸಿದ ಸ್ಥಳಕ್ಕೆ ಬರಲು ಕರೆ ಮಾಡಿದ್ದಾಳೆ. ಮಹಿಳೆ ಹೇಳಿದಂತೆ ಆಕೆಯ ಸ್ನೇಹಿತರು ಬಂದು ಗಾಡಿಯ ಜತೆಗೆ ಒಡವೆಗಳನ್ನು ತೆಗೆದುಕೊಂಡು ಹೋಗಿದ್ದಾರೆ.  

ಈ ಘಟನೆ ಬಳಿಕ ಮಹಿಳೆ ತಾನೂ ವಾಕಿಂಗ್ ಮಾಡುವ ಸಮಯದಲ್ಲಿ ಅಲ್ಲಿಯೇ ನಿಲ್ಲಿಸಿದ ಗಾಡಿಯ ಜತೆಗೆ ಆರೋಪಿಗಳು ಬಂಗಾರ ಕಳ್ಳತನ ಮಾಡಿದ್ದಾರೆ ಎಂದು ಮಲ್ಲೇಶ್ವರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಳು.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಎಲ್ಲೆಲ್ಲಿ ಸಂಚಾರ ವ್ಯತ್ಯಯ; ಇಲ್ಲಿದೆ ನೋಡಿ

ಮಹಿಳೆಯ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ, ಸಿಸಿಟಿವಿ ಪರಿಶೀಲನೆ ಮಾಡಿ ಆರೋಪಿಗಳಾದ ಧನಂಜಯ ಮತ್ತು ರಾಕೇಶ್‌ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಮಹಿಳೆ ಹೇಳಿದಂತೆ ಕೆಲಸ ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.  

ಸದ್ಯ ಪೊಲೀಸರು ಮಹಿಳೆಯನ್ನು ಬಂಧಿಸಿ, 109ಗ್ರಾಂ ಚಿನ್ನ ಹಾಗೂ ಎರಡು ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.

ಮನೆಯಲ್ಲಿರುವ ಬಂಗಾರವೆಲ್ಲ ಕಳ್ಳತನವಾದರೆ ಗಂಡ ಸರಿದಾರಿಗೆ ಬರುತ್ತಾನೆ. ಆಗ ಕೆಲಸಕ್ಕೆ ಹೋಗುತ್ತಾನೆ ಎಂದು ಉಪಾಯ ಮಾಡಿದ ಪತ್ನಿ ಈಗ ತಾನೇ ಪೇಚಿಗೆ ಸಿಲುಕುವಂತಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...